AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​

ಎಸ್.ಪಿ. ಬಾಲಸುಬ್ರಹ್ಮಣ್ಯಂ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಈಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಹೊಸ ಸೀಸನ್​ನಲ್ಲಿ ರಾಜೇಶ್ ಕೃಷ್ಣನ್, ವಿ. ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಕಾರ್ಯಕ್ರಮದ ತೀರ್ಪುಗಾರರಾಗಿ ಇರಲಿದ್ದಾರೆ.

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​
TV9 Web
| Edited By: |

Updated on:Aug 13, 2021 | 1:37 PM

Share

ಎಸ್​.ಪಿ. ಬಾಲಸುಬ್ರಹ್ಮಣ್ಯಂ​ ತೀರ್ಪುಗಾರರಾಗಿ ನಡೆಸಿಕೊಡುತ್ತಿದ್ದ  ‘ಎದೆ ತುಂಬಿ ಹಾಡುವೆನು’ ಸಂಗೀತ  ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು. ಈಗ ಕಲರ್ಸ್​ ಕನ್ನಡ ವಾಹಿನಿ ಈ ಶೋನ ಹೊಸ ಸೀಸನ್​ ಆರಂಭಿಸುತ್ತಿದೆ. ಇದೇ ಆಗಸ್ಟ್​ 14ರಿಂದ ಈ ರಿಯಾಲಿಟಿ ಶೋ ಎಪಿಸೋಡ್​ ಆರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ತೀರ್ಪುಗಾರರಾಗಿ ಎಸ್‌ಪಿಬಿ ಅವರ ಪುತ್ರ ಎಸ್.ಪಿ. ಚರಣ್ ಇರುತ್ತಾರೆ ಅನ್ನೋದು ವಿಶೇಷ. ಈಗ ಕಲರ್ಸ್​ ಕನ್ನಡ ವಾಹಿನಿ ವಿಶೇಷ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಎಸ್​​ಪಿಬಿ ಧ್ವನಿ ಕೇಳಿ ಚರಣ್​ ಅತ್ತಿದ್ದಾರೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಈಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಹೊಸ ಸೀಸನ್​ನಲ್ಲಿ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಕಾರ್ಯಕ್ರಮದ ತೀರ್ಪುಗಾರರಾಗಿ ಇರಲಿದ್ದಾರೆ. ಈ ಕಾರ್ಯಕ್ರಮದ ಮೇಲೆ ವೀಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ.

ಎಸ್​ಪಿಬಿ ಅವರು ‘ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ’ ಹಾಡನ್ನು ಹಾಡಿದ್ದರು. ಅಂದು ಪ್ರಸಾರವಾಗುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ವೇದಿಕೆ ಮೇಲೂ ಅವರ ಕಂಠದಿಂದ ಈ ಹಾಡು ಮೊಳಗಿತ್ತು. ಈಗ ಅವರ ಮಗ ಚರಣ್​, ಹೊಸ ಸೀಸನ್​ನಲ್ಲಿ ಈ ಹಾಡನ್ನು ಹಾಡಿದ್ದಾರೆ. ಹಾಡು ಮುಗಿದ ನಂತರದಲ್ಲಿ ಮಾತನಾಡಿರುವ ಚರಣ್​, ‘ಎಲ್ಲೆಲ್ಲಿ ಸಂಗೀತ ಇರುತ್ತದೆಯೋ ಅಲ್ಲಿ ನಮ್ಮ ತಂದೆ ಇರುತ್ತಾರೆ. ಅವರೆಲ್ಲಿ ಇರುತ್ತಾರೋ ನಾನು ಅಲ್ಲಿರ್ತೀನಿ’ ಎಂದಿದ್ದಾರೆ.

ಈ ವೇಳೆ ಎಸ್​ಪಿಬಿ ಅವರ ಹಳೆಯ ವಾಯ್ಸ್​ನೋಟ್​ ಹಾಕಲಾಗಿದೆ. ‘ಚರಣ್​ ನಿನ್ನೊಂದಿಗೆ ನಾನು ಸದಾ ಇರ್ತೀನಿ. ಅದು ನಿನಗೆ ಗೊತ್ತಿರೋ ವಿಷಯ. ಕಾರ್ಯಕ್ರಮ ಆನಂದಿಸು. ತುಂಬಾ ಸೊಗಸಾಗಿದೆ. ದೇವರ ಆಶೀರ್ವಾದ ಸದಾ ನಿನ್ನ ಮೇಲಿರಲಿ’ ಎಂದು ಎಸ್​ಪಿಬಿ ಧ್ವನಿಯಲ್ಲಿ ಕೇಳಿ ಬಂದಿದೆ. ಈ ಧ್ವನಿ ಕೇಳುತ್ತಿದ್ದಂತೆ ಚರಣ್​ ಭಾವುಕರಾದರು.

ಈಗಾಗಲೇ ಆಡಿಷನ್ ಮೂಲಕ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ. ಆಗಸ್ಟ್​ 14ರಂದು ಮೊದಲ ಎಪಿಸೋಡ್​ ಪ್ರಸಾರವಾಗಲಿದೆ.

ಇದನ್ನೂ ಓದಿ: SPB Birth Anniversary: ಪ್ರೀತಿಯ ಎಸ್​ಪಿಬಿ ಸರ್, ಎದೆ ತುಂಬಿ ಹಾಡಲು ನೀವು ಮತ್ತೆ ಹುಟ್ಟಿಬರಬೇಕು

ಅಭಿಮಾನಿಗಳಿಗೆ ಗುಡ್​​ನ್ಯೂಸ್​ ಕೊಟ್ಟ ‘ನಮ್ಮನೆ ಯುವರಾಣಿ’ ಅಂಕಿತಾ; ಇದು ಫ್ಯಾನ್ಸ್​ಗೆ ಖುಷಿಯಾಗೋ ವಿಚಾರ

Published On - 1:22 pm, Fri, 13 August 21

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್