AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಡಾ ಪ್ರಯಾಗ್

Drone Prathap: ಡ್ರೋನ್ ಪ್ರತಾಪ್ ಗುರುವಾರದ ಎಪಿಸೋಡ್​ನಲ್ಲಿ ತಮ್ಮ ಮೇಲೆ ಅಧಿಕಾರಿಗಳು, ಪೊಲೀಸರು ದೌರ್ಜನ್ಯ ನಡೆಸಿದರು ಎಂದು ಕಣ್ಣೀರು ಹಾಕಿದ್ದರು. ಆದರೆ ಡ್ರೋನ್ ಅಂದು ಮಾಡಿದ ಆರೋಪವೆಲ್ಲ ಸುಳ್ಳು ಎಂದಿದ್ದರು.

ಪ್ರತಾಪ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಡಾ ಪ್ರಯಾಗ್
ಡ್ರೋನ್ ಪ್ರತಾಪ್
ಮಂಜುನಾಥ ಸಿ.
|

Updated on: Dec 03, 2023 | 3:36 PM

Share

ಡ್ರೋನ್ ಪ್ರತಾಪ್ (Drone Prathap) ಬಿಗ್​ಬಾಸ್ (BiggBoss) ಮನೆಯಲ್ಲಿ ಕಳೆದ ವಾರ ಆಡಿದ್ದ ಮಾತುಗಳು ಹೊರಗೆ ಸಣ್ಣ ಮಟ್ಟಿಗಿನ ವಿವಾದಕ್ಕೆ ಕಾರಣವಾಗಿದೆ. ಗುರುವಾರದ ಎಪಿಸೋಡ್​ನಲ್ಲಿ ಮಾತನಾಡಿದ್ದ ಡ್ರೋನ್ ಪ್ರತಾಪ್, ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂದು ತಮ್ಮ ಮೇಲೆ ಪ್ರಕರಣ ದಾಖಲಿಸಿದ ಸಮಯದಲ್ಲಿ ತಮಗೆ ಚಿತ್ರಹಿಂಸೆ ಕೊಡಲಾಯ್ತು, ತಲೆ-ತಲೆಗೆ ಹೊಡೆದರು, ಕೆಟ್ಟದಾಗಿ ಮಾತನಾಡಿದರು ಎಂದಿದ್ದ ಪ್ರತಾಪ್, ಅದೇ ಸಮಯದಲ್ಲಿ ಅಪ್ಪ-ಅಮ್ಮನ ಬಳಿ ನನ್ನ ಬಗ್ಗೆ ಇಲ್ಲ-ಸಲ್ಲದ ದೂರುಗಳನ್ನು ಹೇಳಿದರು. ವಿಷವಿಟ್ಟು ಸಾಯಿಸಿ ಎಂದೆಲ್ಲ ಐಡಿಯಾ ಕೊಟ್ಟರು ಎಂದು ಹೇಳಿ ಕಣ್ಣೀರು ಹಾಕಿದ್ದರು ಡ್ರೋನ್ ಪ್ರತಾಪ್.

ಡ್ರೋನ್ ಪ್ರತಾಪ್ ಕೆಲವು ಅಧಿಕಾರಿಗಳ ಮುಂದೆ ಕೂತು ಇದೇ ವಿಷಯಗಳನ್ನು ಪ್ರಶ್ನೆ ಮಾಡುತ್ತಿರುವ ವಿಡಿಯೋ ಸಹ ಇತ್ತೀಚೆಗೆ ವೈರಲ್ ಆಗಿದೆ. ಇದರ ಬೆನ್ನಲ್ಲೆ ಪ್ರತಾಪ್ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ್ದ ನೋಡಲ್ ಅಧಿಕಾರಿ, ಪ್ರತಾಪ್ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪ್ರತಾಪ್ ಹೇಳುತ್ತಿರುವದೆಲ್ಲ ಸುಳ್ಳು, ಪ್ರತಾಪ್ ವಿರುದ್ಧ ಮಾನನಷ್ಟ ಹೂಡುತ್ತೇನೆ ಎಂದಿದ್ದಾರೆ.

ಪ್ರತಾಪ್ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿದ್ದ ವಿಚಾರಣೆಯನ್ನೂ ನಡೆಸಿದ್ದ ಆಗಿನ ಬಿಬಿಎಂಪಿ ನೋಡಲ್ ಅಧಿಕಾರಿ ಡಾ ಪ್ರಯಾಗ್, ಥರ್ಡ್ ಐ ಹೆಸರಿನ ಯೂಟ್ಯೂಬ್ ಚಾನೆಲ್​ನಲ್ಲಿ, ಪ್ರತಾಪ್ ಇತ್ತೀಚೆಗೆ ಬಿಗ್​ಬಾಸ್ ಮನೆಯಲ್ಲಿ ಮಾಡಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ್ದು, ‘‘ಬಿಗ್​ಬಾಸ್ ಮನೆಯಲ್ಲಿ ಪ್ರತಾಪ್ ಹೇಳಿದ್ದೆಲ್ಲವೂ ಸುಳ್ಳು, ನಾವು ಆತನಿಗೆ ಯಾವುದೇ ರೀತಿಯ ಹಿಂಸೆ ಕೊಟ್ಟಿಲ್ಲ. ಹಾಗೊಮ್ಮೆ ನಾವು ಹಿಂಸೆ ಕೊಟ್ಟಿದ್ದಿದ್ದರೆ ಆಗಲೇ ನಮ್ಮ ವಿರುದ್ಧ ದೂರು ನೀಡಬಹುದಿತ್ತು, ಈಗ ಬಿಗ್​ಬಾಸ್ ವೇದಿಕೆ ಸಿಕ್ಕಿದೆ ಎಂಬ ಕಾರಣಕ್ಕೆ ಆರೋಪ ಮಾಡಿದ್ದಾರೆ’’ ಎಂದಿದ್ದಾರೆ.

ಇದನ್ನೂ ಓದಿ:ಕಿವಿ ಹಿಡಿದು ಮಂಡಿ ಬಗ್ಗಿಸಿ ಬಿಗ್​ಬಾಸ್​ಗೆ ಕ್ಷಮೆ ಕೇಳಿದ ಡ್ರೋನ್ ಪ್ರತಾಪ್: ಮಾಡಿದ ತಪ್ಪೇನು?

‘‘ನಾನು ಅವರ ತಲೆಗೆ ಹೊಡೆಯುವುದಾಗಲಿ, ಆತ ಹೇಳಿದಂತೆ ಇತರೆ ಹಿಂಸೆಗಳನ್ನು ನೀಡಿಲ್ಲ. ಅವರ ತಂದೆಯ ಬಳಿಯೂ ಸೌಜನ್ಯದಿಂದಲೇ ವರ್ತಿಸಿದ್ದೆವು. ಆತ ಟಿವಿ ಚಾನೆಲ್ ಒಂದರಲ್ಲಿ ಕುಳಿತುಕೊಂಡು, ಕ್ವಾರಂಟೈನ್ ಇದ್ದರೂ ಸಹ ಇಲ್ಲಿಗೆ ಬಂದು ಸಂದರ್ಶನ ನೀಡುತ್ತಿದ್ದೀನಿ ಎಂದಿದ್ದ, ಹಾಗಾಗಿ ಆತನ ವಿರುದ್ಧ ಎಫ್​ಐಆರ್ ದಾಖಲು ಮಾಡಿಕೊಂಡಿದ್ದೆವು. ಆತ ಹೇಳಿದಂತೆ ಪೊಲೀಸರೆಲ್ಲ ಅವನನ್ನು ಸುತ್ತುವರೆದಿರಲಿಲ್ಲ’’ ಎಂದಿದ್ದಾರೆ ಡಾ ಪ್ರಯಾಗ್.

‘‘ಸರ್ಕಾರಿ ಅಧಿಕಾರಿಗಳಾಗಿದ್ದ ನಾವು ನಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡರೆ ಶಿಕ್ಷೆಯಾಗುತ್ತದೆ. ಕೆಲಸವೇ ಹೋಗುತ್ತದೆ. ಸಾರ್ವಜನಿಕರು ಸರ್ಕಾರಿ ಅಧಿಕಾರಿಗಳ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಬಹುದು. ಆದರೆ ಘಟನೆ ನಡೆದು 3 ವರ್ಷಗಳ ನಂತರ ಪ್ರತಾಪ್ ಸುಳ್ಳು ಆರೋಪ ಮಾಡುತ್ತಿದ್ದಾನೆ, ಆತ ಮಾಡಿರುವ ಆರೋಪಗಳು ನಿರಾಧಾರ. ಆತ ಬೇಕಿದ್ದರೆ ಸಾಬೀತು ಮಾಡಲಿ’’ ಎಂದು ಸವಾಲು ಹಾಕಿರುವ ಪ್ರಯಾಗ್, ‘‘ಸುಳ್ಳು ಆರೋಪ ಮಾಡಿರುವ ಡ್ರೋನ್ ಪ್ರತಾಪ್ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸಿದ್ದೇನೆ’’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್