AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಿನ್ನತೆಯಿಂದ ಗಾಂಜಾ ಸೇವಿಸಿದೆ’: ಬಂಧನದ ವೇಳೆ ಒಪ್ಪಿಕೊಂಡ ಬಿಗ್​ ಬಾಸ್​ ಸ್ಪರ್ಧಿ; ವಿಡಿಯೋ ವೈರಲ್​

ಬಿಗ್​ ಬಾಸ್​ ರಿಯಾಲಿಟಿ ಶೋನಿಂದ ಷಣ್ಮುಖ್​ ಜಸ್ವಂತ್​ ಅವರು ಫೇಮಸ್​ ಆಗಿದ್ದರು. ರನ್ನರ್​ ಅಪ್​ ಪಟ್ಟ ಅವರಿಗೆ ಸಿಕ್ಕಿತ್ತು. ಆದರೆ ಈಗ ಅವರು ಹೆಸರು ಕೆಡಿಸಿಕೊಂಡಿದ್ದಾರೆ. ಗಾಂಜಾ ಸೇವಿಸಿ, ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅರೆಸ್ಟ್​ ಆಗುವಾಗ ಅವರು ಕಿರುಚಾಡಿದ್ದಾರೆ. ಆ ವಿಡಿಯೋ ಕೂಡ ವೈರಲ್​ ಆಗಿದೆ. ಇದರಿಂದ ಅವರ ವೃತ್ತಿಜೀವನಕ್ಕೆ ದೊಡ್ಡ ಪೆಟ್ಟು ಬಿದ್ದಂತಾಗಿದೆ.

‘ಖಿನ್ನತೆಯಿಂದ ಗಾಂಜಾ ಸೇವಿಸಿದೆ’: ಬಂಧನದ ವೇಳೆ ಒಪ್ಪಿಕೊಂಡ ಬಿಗ್​ ಬಾಸ್​ ಸ್ಪರ್ಧಿ; ವಿಡಿಯೋ ವೈರಲ್​
ಷಣ್ಮುಖ್​ ಜಸ್ವಂತ್​
ಮದನ್​ ಕುಮಾರ್​
|

Updated on: Feb 26, 2024 | 3:35 PM

Share

ಯೂಟ್ಯೂಬರ್​ ಆಗಿ ಖ್ಯಾತಿ ಗಳಿಸಿ, ನಂತರ ಬಿಗ್​ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ನಟ ಷಣ್ಮುಖ್​ ಜಸ್ವಂತ್ (Shanmukh Jaswanth)​ ಈಗ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಹಲವು ಆರೋಪಗಳು ಕೇಳಿಬಂದಿವೆ. ಮಾದಕ ವಸ್ತುಗಳನ್ನು ಹೊಂದಿದ್ದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ. ಫೆಬ್ರವರಿ 22ರಂದು ಅವರ ಬಂಧನ ಆಗಿತ್ತು. ಈಗ ಷಣ್ಮುಖ್​ ಜಸ್ವಂತ್​ ಅವರ ವಿಡಿಯೋ ವೈರಲ್​ (Shanmukh Viral Video) ಆಗಿದೆ. ಬಂಧನದ ವೇಳೆ ಅವರು ಗಾಂಜಾ (Ganja) ಸೇವಿಸಿದ್ದನ್ನು ಒಪ್ಪಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಈಗ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಷಣ್ಮುಖ್​ ಜಸ್ವಂತ್​ ಅವರ ಸಹೋದರನ ಮೇಲೂ ಗಂಭೀರ ಆರೋಪಗಳಿಗೆ. ಪ್ರೀತಿ-ಪ್ರೇಮದ ಹೆಸರಿನಲ್ಲಿ ಯುವತಿಗೆ ಮೋಸ ಮಾಡಿದ ಆರೋಪ ಆತನ ಮೇಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಅವರ ನಿವಾಸಕ್ಕೆ ತೆರಳಿದ್ದ ಪೊಲೀಸರ ಕೈಗೆ ಷಣ್ಮುಖ್​ ಸಿಕ್ಕಿ ಬಿದ್ದಿದ್ದಾರೆ. ಬಂಧನದ ವೇಳೆ ಅವರು ಮಾತನಾಡಿರುವುದು ಈ ವೈರಲ್​ ವಿಡಿಯೋದಲ್ಲಿ ಕೇಳಿಸುತ್ತಿದೆ.

ಗಾಂಜಾ, ಡ್ರಗ್ಸ್​ ವಿಚಾರ: ಸಾಯಿ ಧರಂ ತೇಜ್​ ಸಿನಿಮಾ ತಂಡಕ್ಕೆ ಅಧಿಕಾರಿಗಳ ಎಚ್ಚರಿಕೆ

‘ನಾನು ಖಿನ್ನತೆಯಲ್ಲಿದ್ದ. ಹಾಗಾಗಿ ಇದನ್ನು ಮಾಡಿದೆ. ನಾನು ಸಾಯಲು ಹೊರಟಿದ್ದೆ. ನಾನು ತಪ್ಪು ಮಾಡಿದೆ’ ಎಂದು ಷಣ್ಮುಖ್​ ಜಸ್ವಂತ್​ ಕೂಗಾಡುತ್ತಿರುವುದು ಈ ವಿಡಿಯೋದಲ್ಲಿದೆ. ಗಾಂಜಾ ಸೇವಿಸಿ ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ರಾ ಎಂಬ ಅನುಮಾನ ಮೂಡಿದೆ. ಸದ್ಯಕ್ಕೆ ಈ ಬಗ್ಗೆ ತನಿಖೆ ನಡೆಯುತ್ತಿದೆ. ವಿಚಾರಣೆ ವೇಳೆ ಇನ್ನೂ ಹಲವು ಸತ್ಯಗಳು ಬಹಿರಂಗ ಆಗಲಿವೆ.

ತೆಲುಗು ಚಿತ್ರರಂಗದಲ್ಲಿ ಅನೇಕರು ಡ್ರಗ್ಸ್​ ಸೇವಿಸಿದ ಆರೋಪ ಎದುರಿಸುತ್ತಿದ್ದಾರೆ. ಹಲವರ ಮೇಲೆ ಕೇಸ್​ ಇದೆ. ಈಗ ಮಾಜಿ ಬಿಗ್​ ಬಾಸ್​ ಸ್ಪರ್ಧಿ ಷಣ್ಮುಖ್​ ಜಸ್ವಂತ್​ ಗಾಂಜಾ ಸೇವಿಸಿ ಸಿಕ್ಕಿಬಿದ್ದಿರುವುದರಿಂದ ವಿಚಾರಣೆ ನಡೆಸಿದರೆ ಅನೇಕರ ಹೆಸರು ಹೊರಬರುವ ಸಾಧ್ಯತೆ ಇದೆ. ‘ಬಿಗ್​ ಬಾಸ್​ ತೆಲುಗು ಸೀಸನ್​ 5’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಷಣ್ಮುಖ್​ ಜಸ್ವಂತ್​ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಆ ಸೀಸನ್​ನಲ್ಲಿ ಫಿನಾಲೆ ತನಕ ತಲುಪಿದ ಅವರು ಮೊದಲ ರನ್ನರ್​ಅಪ್​ ಆಗಿದ್ದರು. ಸಿಕ್ಕಿರುವ ಜನಪ್ರಿಯತೆಯನ್ನು ಅವರು ಹಾಳು ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್