AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಷ್ಟ ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ

Bigg Boss show: ಸ್ಪರ್ಧಿಗಳನ್ನು ಕೂಡಿ ಹಾಕುವ ಬಿಗ್​​ಬಾಸ್ ಮನೆಯಲ್ಲಿ ಐಶಾರಾಮಿಯಾಗಿ ಆಯೋಜಕರು ನಿರ್ಮಿಸಿರುತ್ತಾರೆ. ಮನೆ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ಹಣವನ್ನು ಸಹ ಖರ್ಚು ಮಾಡಲಾಗುತ್ತದೆ. ಆದರೆ ಇದೀಗ ಮಾಜಿ ಬಿಗ್​​ಬಾಸ್ ಸ್ಪರ್ಧಿಯೊಬ್ಬರು, ತಮಗೆ ಬಿಗ್​​ಬಾಸ್ ಇಂದಾಗಿ, ಅಲ್ಲಿ ಸ್ವಚ್ಛತೆ ಇಲ್ಲದೇ ಇರುವ ಕಾರಣಕ್ಕೆ ಚರ್ಮ ರೋಗ ಬಂದಿದೆ. ಇದರಿಂದಾಗಿ ತಮಗೆ ನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಬಿಗ್​​ಬಾಸ್​​ಗೆ ನೊಟೀಸ್ ಕಳಿಸಿದ್ದಾರೆ.

‘ನಷ್ಟ ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ
Bigg Boss Marathi
ಮಂಜುನಾಥ ಸಿ.
|

Updated on:Apr 18, 2026 | 7:10 PM

Share

ಬಿಗ್​​ಬಾಸ್ (Bigg Boss) ಭಾರತದ ಬಲು ಜನಪ್ರಿಯ ರಿಯಾಲಿಟಿ ಶೋ. ಹಿಂದಿ, ತಮಿಳು, ತೆಲುಗು, ಕನ್ನಡ, ಮರಾಠಿ, ಮಲಯಾಳಂ ಹೀಗೆ ಬೇರೆ ಬೇರೆ ಭಾಷೆಗಳಲ್ಲಿ ಬಿಗ್​ಬಾಸ್ ಪ್ರಸಾರ ಆಗುತ್ತದೆ. ಪ್ರತಿ ಭಾಷೆಗೆ ಬೇರೆ ಬೇರೆ ನಿರೂಪಕರು ಆದರೆ ಮಾದರಿ ಮಾತ್ರ ಒಂದೇ. ಸ್ಪರ್ಧಿಗಳನ್ನು ಕೂಡಿ ಹಾಕುವ ಬಿಗ್​​ಬಾಸ್ ಮನೆಯಲ್ಲಿ ಐಶಾರಾಮಿಯಾಗಿ ಆಯೋಜಕರು ನಿರ್ಮಿಸಿರುತ್ತಾರೆ. ಮನೆ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ಹಣವನ್ನು ಸಹ ಖರ್ಚು ಮಾಡಲಾಗುತ್ತದೆ. ಆದರೆ ಇದೀಗ ಮಾಜಿ ಬಿಗ್​​ಬಾಸ್ ಸ್ಪರ್ಧಿಯೊಬ್ಬರು, ತಮಗೆ ಬಿಗ್​​ಬಾಸ್ ಇಂದಾಗಿ, ಅಲ್ಲಿ ಸ್ವಚ್ಛತೆ ಇಲ್ಲದೇ ಇರುವ ಕಾರಣಕ್ಕೆ ಚರ್ಮ ರೋಗ ಬಂದಿದೆ. ಇದರಿಂದಾಗಿ ತಮಗೆ ನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಬಿಗ್​​ಬಾಸ್​​ಗೆ ನೊಟೀಸ್ ಕಳಿಸಿದ್ದಾರೆ.

ಬಿಗ್​​ಬಾಸ್ ಮರಾಠಿಯಲ್ಲಿ ಭಾಗಿ ಆಗಿರುವ ಸ್ಪರ್ಧಿ ಸೊನಾಲಿ ರೌತ್ ಇದೀಗ ‘ಬಿಗ್ ಬಾಸ್ ಮರಾಠಿ 6’ಗೆ ನೊಟೀಸ್ ಕಳಿಸಿದ್ದಾರೆ. ಬಿಗ್​​ಬಾಸ್ ಮರಾಠಿ 6 ರಿಯಾಲಿಟಿ ಶೋ ಪ್ರಸ್ತುತ ಚಾಲ್ತಿಯಲ್ಲಿದ್ದು, ಇನ್ನೇನು ಅಂತಿಮ ಹಂತದಲ್ಲಿದೆ. ಇದೇ ಸೀಸನ್​​ನ ಸ್ಪರ್ಧಿ ಆಗಿದ್ದ ಸೋನಾಲಿ ರಾವತ್ ಹೊರಗೆ ಬಂದ ಬಳಿಕ ಬಿಗ್​ಬಾಸ್ ಮನೆಯೊಳಗಿನ ಪರಿಸ್ಥಿತಿಯ ಮಾಹಿತಿ ಹಂಚಿಕೊಂಡಿರುವುದು ಇದು ಆತಂಕಕ್ಕೆ ಕಾರಣವಾಗಿದೆ. ಕೇವಲ ಮನರಂಜನೆಗಾಗಿ ಸ್ಪರ್ಧಿಗಳ ಆರೋಗ್ಯದ ಜೊತೆ ಆಟವಾಡಲಾಗುತ್ತಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿನ ಸ್ವಲ್ಪವೂ ಸ್ವಚ್ಛತೆ ಇಲ್ಲ. ಅನೈರ್ಮಲ್ಯದಿಂದಾಗಿ ತಮಗೆ ‘ಸ್ಕ್ಯಾಬೀಸ್’ ಎಂಬ ಚರ್ಮದ ಕಾಯಿಲೆ ಬಂದಿದೆ ಎಂದಿರುವ ಸೊನಾಲಿ ಅದಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಸಹ ಹಂಚಿಕೊಂಡಿದ್ದಾರೆ. ಸೊನಾಲಿ ಹಂಚಿಕೊಂಡಿರುವ ವಿಡಿಯೋನಲ್ಲಿ ಸೊನಾಲಿ ಅವರಿಗೆ ದೇಹದ ಹಲವು ಕಡೆ ಗುಳ್ಳೆಗಳು, ಗಾಯಗಳು ಆಗಿವೆ.

ಇದನ್ನೂ ಓದಿ:ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಅಡುಗೆ ಮನೆಯಲ್ಲಿ ದೊಡ್ಡ ದೊಡ್ಡ ಇಲಿಗಳು ಓಡಾಡುತ್ತಿರುತ್ತವೆ. ಅವು ತಿಂದು ಉಳಿಸಿದ ಆಹಾರ ಪದಾರ್ಥಗಳನ್ನೇ ಸ್ಪರ್ಧಿಗಳಿಗೆ ಅಡುಗೆ ಮಾಡಲು ಬಳಸಲಾಗುತ್ತಿತ್ತು ಎಂದು ವಿಡಿಯೋನಲ್ಲಿ ಸೊನಾಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ, ವೀಕೆಂಡ್‌ನಲ್ಲಿ ಬರುವ ಆಹಾರದಲ್ಲಿ ಜಿರಳೆಗಳು ಪತ್ತೆಯಾಗುತ್ತಿದ್ದವು ಎಂದು ಕಿಡಿಕಾರಿದ್ದಾರೆ. 17 ಜನ ಸ್ಪರ್ಧಿಗಳಿಗೆ ಕೆಲವೇ ವಾಶ್‌ರೂಮ್ ಬಳಸಲು ನೀಡಲಾಗಿತ್ತು. ಸ್ಪರ್ಧಿಗಳು ಅಲ್ಲಿಯೇ ಸಿಗರೇಟ್ ಸೇದುವುದು ಮಾಡುತ್ತಿದ್ದರು. ಟವೆಲ್‌ಗಳು ಮತ್ತು ರೇಜರ್‌ಗಳಂತಹ ವೈಯಕ್ತಿಕ ವಸ್ತುಗಳನ್ನು ಸಹ ಪರಸ್ಪರ ಹಂಚಿಕೊಳ್ಳುವಂತೆ ಒತ್ತಾಯಿಸಲಾಗುತ್ತಿತ್ತು ಎಂದಿದ್ದಾರೆ ನಟಿ. ಈ ಎಲ್ಲ ದೈಹಿಕ ಮತ್ತು ಮಾನಸಿಕ ಕಿರುಕುಳದ ವಿರುದ್ಧ ಸೋನಾಲಿ ರಾವತ್ ಈಗಾಗಲೇ ಶೋನ ನಿರ್ಮಾಣ ಸಂಸ್ಥೆಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಸೋನಾಲಿ ರಾವತ್ ಅವರು ಈ ಹಿಂದೆ ‘ಬಿಗ್ ಬಾಸ್ ಹಿಂದಿ 8’ ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಮರಾಠಿ ಸೀಸನ್ 6 ಕ್ಕೆ ಅವರು ವೈಲ್ಡ್ ಕಾರ್ಡ್ ಅಥವಾ ವಿಶೇಷ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಆದರೆ ಆರೋಗ್ಯ ಸಮಸ್ಯೆಗಳಿಂದಾಗಿ ಅವರು ಶೀಘ್ರವೇ ಮನೆಯಿಂದ ಹೊರಬರಬೇಕಾಯಿತು. ಹೊರಬಂದ ಬಳಿಕ ಇದೀಗ ಮರಾಠಿ ಬಿಗ್​​ಬಾಸ್​​ನ ಅವ್ಯವಸ್ಥೆಯನ್ನು, ಅನೈರ್ಮಲ್ಯವನ್ನು ಬಯಲಿಗೆಳೆಯುತ್ತಿದ್ದಾರೆ. ನಿರೂಪಕ ರಿತೇಶ್ ದೇಶ್​ಮುಖ್ ವಿರುದ್ಧವೂ ಅವರು ಅಸಮಾಧಾನ ಹೊರಹಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Sat, 18 April 26

Follow Us
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ