AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾನ ರೂಮಿಗೆ ಕರೆದುಕೊಂಡು ಹೋದ ತ್ರಿವಿಕ್ರಮ್; ಕೆಂಡಾಮಂಡಲ ಆದ ಐಶ್ವರ್ಯಾ

ಬಿಗ್ ಬಾಸ್​ ಮನೆಯಲ್ಲಿ ಸಣ್ಣ ಸಣ್ಣ ವಿಚಾರಕ್ಕೂ ಜಗಳ ಆಗುತ್ತದೆ. ಈಗ ಚೈತ್ರಾ ಅವರನ್ನು ತ್ರಿವಿಕ್ರಮ್ ಅವರು ರೂಮಿನ ಒಳಗೆ ಕರೆದುಕೊಂಡು ಹೋಗಿದ್ದಕ್ಕೆ ಐಶ್ವರ್ಯಾ ಅವರಿಗೆ ಸಿಕ್ಕಾಪಟ್ಟೆ ಕೋಪ ಬಂದಿದೆ. ಈ ಮೂವರ ನಡುವೆ ದೊಡ್ಡ ಜಗಳ ಆಗಿದೆ. ಗುರುವಾರದ (ಅಕ್ಟೋಬರ್​ 24) ಸಂಚಿಕೆಯಲ್ಲಿ ಈ ಘಟನೆ ನಡೆದಿದೆ.

ಚೈತ್ರಾನ ರೂಮಿಗೆ ಕರೆದುಕೊಂಡು ಹೋದ ತ್ರಿವಿಕ್ರಮ್; ಕೆಂಡಾಮಂಡಲ ಆದ ಐಶ್ವರ್ಯಾ
ಐಶ್ವರ್ಯಾ, ತ್ರಿವಿಕ್ರಮ್, ಚೈತ್ರಾ ಕುಂದಾಪುರ
ಮದನ್​ ಕುಮಾರ್​
|

Updated on:Oct 24, 2024 | 10:39 PM

Share

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಜಗಳಕ್ಕೆ ಬರ ಇಲ್ಲ. ಈ ವಾರದ ಕ್ಯಾಪ್ಟನ್ ಆಗಿ ಐಶ್ವರ್ಯಾ ಹಾಗೂ ತ್ರಿವಿಕ್ರಮ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್​ ಒಂದು ಟಾಸ್ಕ್​ ನೀಡಿದ್ದಾರೆ. ಅದು ರಾಜಕೀಯದ ಥೀಮ್​ನಲ್ಲಿದೆ. ರಾಜಕೀಯ ಎಂದಮೇಲೆ ಜಗಳ ಇರಲೇಬೇಕು. ಎರಡು ಗುಂಪುಗಳ ನಡುವೆ ಈ ಆಟ ನಡೆಯುತ್ತಿದೆ. ಒಂದು ಟೀಮ್​ಗೆ ಐಶ್ವಯಾ ಲೀಡರ್ ಆಗಿದ್ದರೆ, ಇನ್ನೊಂದಕ್ಕೆ ತ್ರಿವಿಕ್ರಮ್ ಲೀಡರ್ ಆಗಿದ್ದಾರೆ. ಚೈತ್ರಾ ಕುಂದಾಪುರ ಅವರು ತ್ರಿವಿಕ್ರಮ್ ಅವರ ಟೀಮ್​ನಲ್ಲಿ ಇದ್ದಾರೆ.

ಇದು ಶಕ್ತಿ ಮತ್ತು ಯುಕ್ತಿಯ ಆಟ. ಸಿಕ್ಕಾಪಟ್ಟೆ ಪ್ಲ್ಯಾನ್ ಮಾಡಿ ಆಟ ಆಡಬೇಕಾಗುತ್ತದೆ. ಹಾಗಾಗಿ ತಮ್ಮ ಟೀಮ್​ನ ಸದಸ್ಯರಾದ ಚೈತ್ರಾ ಕುಂದಾಪುರ ಅವರನ್ನು ತ್ರಿವಿಕ್ರಮ್ ಅವರು ಕ್ಯಾಪ್ಟನ್ ರೂಮಿಗೆ ಕರೆದುಕೊಂಡು ಹೋದರು. ಕ್ಯಾಪ್ಟನ್ ರೂಮಿನಲ್ಲಿ ಚೈತ್ರಾ ಮತ್ತು ತ್ರಿವಿಕ್ರಮ್ ಅವರು ಮಾತನಾಡುತ್ತಿರುವಾಗ ಐಶ್ವರ್ಯಾ ಅವರ ಗಮನ ಆ ಕಡೆ ಹರಿಯಿತು. ಆಗಲೇ ಜಗಳ ಶುರುವಾಯಿತು.

ಕ್ಯಾಪ್ಟನ್​ ರೂಮಿಗೆ ಬೇರೆಯವರನ್ನು ಕರೆದುಕೊಂಡು ಹೋಗುವಂತಿಲ್ಲ. ಆದರೆ ಗೇಮ್​ ಬಗ್ಗೆ ತಂತ್ರಗಾರಿಕೆ ಮಾಡಲು ಚೈತ್ರಾ ಅವರನ್ನು ಕ್ಯಾಪ್ಟನ್ ರೂಮಿಗೆ ತ್ರಿವಿಕ್ರಮ್ ಕರೆದುಕೊಂಡು ಹೋಗಿದ್ದಾರೆ. ಅದನ್ನು ನೋಡಿ ಐಶ್ವರ್ಯಾ ಕೆಂಡಾಮಂಡಲ ಆಗಿದ್ದಾರೆ. ‘ಮೊದಲು ಇವರನ್ನು ಹೊರಗಡೆ ಕರೆದುಕೊಂಡು ಹೋಗಿ’ ಎಂದು ಐಶ್ವರ್ಯಾ ಕೂಗಾಡಿದ್ದಾರೆ.

ಇದನ್ನೂ ಓದಿ: ಲಾಯರ್ ಅಲ್ಲ ಎಂದವರಿಗೆ ಬಿಗ್ ಬಾಸ್​ನಿಂದ ಬಂದು ತಿರುಗೇಟು ಕೊಟ್ಟ ಜಗದೀಶ್

ಐಶ್ವರ್ಯಾ ಮತ್ತು ತ್ರಿವಿಕ್ರಮ್ ಅವರು ಜೋಡಿಯಾಗಿ ಕ್ಯಾಪ್ಟನ್ ಆಗಿರುವುದರಿಂದ ಕ್ಯಾಪ್ಟನ್ ರೂಮಿನ ಮೇಲೆ ಇಬ್ಬರಿಗೂ ಸಮಾನ ಅಧಿಕಾರ ಇದೆ. ಕ್ಯಾಪ್ಟನ್ ಅಲ್ಲದವರು ಆ ರೂಮಿನ ಒಳಗೆ ಹೋದರೆ ಬಿಗ್ ಬಾಸ್ ಶಿಕ್ಷೆ ನೀಡಬಹುದು. ಆ ಕಾರಣದಿಂದಲೇ ಐಶ್ವರ್ಯಾ ಅವರು ಈ ಪರಿ ಸಿಟ್ಟಾಗಿದ್ದಾರೆ. ಚೈತ್ರಾ ಅವರನ್ನು ಕೂಡಲೇ ಹೊರಗೆ ಕಳಿಸಬೇಕು ಎಂದು ಅವರು ಕೂಗಾಡಿದರು.

ಪೋಸ್ಟರ್ ಕಾಪಾಡಿಕೊಳ್ಳುವ ಟಾಸ್ಕ್​ನಲ್ಲಿ ಎರಡೂ ತಂಡದವರು ಕಿತ್ತಾಡಿಕೊಂಡಿದ್ದಾರೆ. ತಳ್ಳಾಟ, ನೂಕಾಟ ಕೂಡ ನಡೆದಿದೆ. ಉಗ್ರಂ ಮಂಜು, ಗೋಲ್ಡ್ ಸುರೇಶ್ ಮುಂತಾದವರಿಗೆ ಗಾಯಗಳು ಕೂಡ ಆಗಿವೆ. ಸ್ಪರ್ಧಿಗಳ ತಳ್ಳಾಟ ಮಿತಿ ಮೀರಿದ್ದರಿಂದ ‘ಈ ಕೂಡಲೇ ಆಟ ನಿಲ್ಲಿಸಿ’ ಎಂದು ಬಿಗ್ ಬಾಸ್​ ಆದೇಶಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:36 pm, Thu, 24 October 24

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ