ಬಿಗ್​ಬಾಸ್ ಕನ್ನಡ ಸ್ಪರ್ಧಿ ತನಿಷಾ ಕುಪ್ಪಂದ ವಿರುದ್ಧ ದೂರು ದಾಖಲು

Bigg Boss: ಕೆಲವು ದಿನಗಳ ಹಿಂದಷ್ಟೆ ಬಿಗ್​ಬಾಸ್ ಮನೆಯ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದರು. ಇದೀಗ ಬಿಗ್​ಬಾಸ್ ಮನೆಯ ಮತ್ತೊಬ್ಬ ಸ್ಪರ್ಧಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿಗ್​ಬಾಸ್ ಕನ್ನಡ ಸ್ಪರ್ಧಿ ತನಿಷಾ ಕುಪ್ಪಂದ ವಿರುದ್ಧ ದೂರು ದಾಖಲು
ತನಿಷಾ ಕುಪ್ಪಂಡ
Follow us
|

Updated on: Nov 14, 2023 | 5:07 PM

ಬಿಗ್​ಬಾಸ್ ಕನ್ನಡ ಸೀಸನ್ 10ರ (Bigg Boss) ಮತ್ತೊಬ್ಬ ಸ್ಪರ್ಧಿಯ ವಿರುದ್ಧ ದೂರು ದಾಖಲಾಗಿದೆ. ಈ ಹಿಂದೆ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ದೂರು ದಾಖಲಾಗಿ ಅವರು ಜೈಲಿಗೆ ಸಹ ಹೋಗಿ, ಈಗ ಮತ್ತೆ ಬಿಗ್​ಬಾಸ್​ ಮನೆಗೆ ಬಂದು ಆಟ ಆಡುತ್ತಿದ್ದಾರೆ. ಇದೀಗ ವರ್ತೂರು ಸಂತೋಷ್​ ಜೊತೆ ಬಿಗ್​ಬಾಸ್ ಮನೆಯಲ್ಲಿ ಆತ್ಮೀಯವಾಗಿರುವ ತನಿಷಾ ಕುಪ್ಪಂಡ ಅವರು ವಿವಾದಕ್ಕೆ ಸಿಲುಕಿದ್ದು, ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತನಿಷಾ ಕುಪ್ಪಂಡ, ಬಿಗ್​ಬಾಸ್ ಮನೆಯಲ್ಲಿ ಸ್ಪರ್ಧಿಯೊಬ್ಬರ ಬಗ್ಗೆ ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. ಇತ್ತೀಚೆಗಿನ ಎಪಿಸೋಡ್​ ಒಂದರಲ್ಲಿ ವರ್ತೂರು ಸಂತೋಷ್​ ಬಗ್ಗೆ ಮಾತನಾಡುತ್ತಾ, ”ನೀನು ವಡ್ಡ ಅಲ್ಲ ಆದರೆ ವಡ್ಡನ ರೀತಿ ಆಕ್ಟ್ ಮಾಡುತ್ತೀಯ” ಎಂದಿದ್ದರು. ತನಿಷಾರ ಈ ಮಾತುಗಳು ಭೋವಿ ಸಮುದಾಯದ ಸದಸ್ಯರನ್ನು ಕೆರಳಿಸಿದ್ದು, ಜಾತಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತನಿಷಾ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

”ತನಿಷಾ, ವಡ್ಡ ಎಂಬ ಪದ ಬಳಸೂವ ಮೂಲಕ ಭೋವಿ ಸಮುದಾಯಕ್ಕೆ ಅಪಮಾನ ಎಸಗಿದ್ದಾರೆ. ಭೋವಿ ಸಮುದಾಯವು ಪರಿಶಿಷ್ಟ ಜಾತಿಗೆ ಸೇರಿದೆ ಎಂದು ತಿಳಿದೂ ಸಹ ಅಪಮಾನ ಮಾಡಲಾಗಿದೆ. ತನಿಷಾ ಅವರನ್ನು ಈ ಕೂಡಲೇ ಬಿಗ್​ಬಾಸ್ ಮನೆಯಿಂದ ಹೊರಗೆ ಕಳಿಸಬೇಕು, ಪೊಲೀಸರು ತನಿಷಾರನ್ನು ಬಂಧಿಸಬೇಕು. ಭೋವಿ ಸಮುದಾಯಕ್ಕೆ ಮಾಡಲಾದ ಅಪಮಾನದ ವಿರುದ್ಧ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಭೋವಿ ಸಮುದಾಯವು ಪ್ರತಿಭಟನೆ ನಡೆಸಲಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಬಿಗ್​ಬಾಸ್​ 10ರ ಸ್ಪರ್ಧಿ ತನಿಷಾ ಕುಪ್ಪಂಡ ಬಗ್ಗೆ ನಿಮಗೆಷ್ಟು ಗೊತ್ತು?

ದೂರು ಸ್ವೀಕರಿಸಿರುವ ಕುಂಬಳಗೋಡು ಪೊಲೀಸ್ ಠಾಣೆ ಸಿಬ್ಬಂದಿ ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಬಿಗ್​ಬಾಸ್ ಮನೆಯಲ್ಲಿರುವ ತನಿಷಾಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ಬಿಗ್​ಬಾಸ್ ಮನೆಯಲ್ಲಿಯೇ ತನಿಷಾ ಹೇಳಿಕೆ ದಾಖಲಿಸುತ್ತಾರಾ ಅಥವಾ ಹೊರಗೆ ಬಂದು ಠಾಣೆಗೆ ಭೇಟಿ ನೀಡುತ್ತಾರಾ ಕಾದು ನೋಡಬೇಕಿದೆ.

ಇತ್ತೀಚೆಗೆ ನಟ, ನಿರ್ದೇಶಕ ಉಪೇಂದ್ರ, ಲೈವ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪದವೊಂದನ್ನು ಬಳಕೆ ಮಾಡಿದ್ದು ಸಹ ವಿವಾದಕ್ಕೆ ಕಾರಣವಾಗಿತ್ತು. ಉಪೇಂದ್ರ ವಿರುದ್ಧ ದಲಿತಪರ ಸಂಘಟನೆಗಳು ದೂರು ನೀಡಿದ್ದವು. ಆ ಕುರಿತು ಉಪೇಂದ್ರ ಕ್ಷಮೆಯನ್ನೂ ಸಹ ಕೇಳಿದ್ದರು. ಅದಕ್ಕೂ ಮುನ್ನ ಪ್ರಶಾಂತ್ ಸಂಬರ್ಗಿ ಬಿಗ್​ಬಾಸ್ ಮನೆಯಲ್ಲಿದ್ದಾಗ ರೂಪೇಷ್ ರಾಜಣ್ಣ ಅವರ ಮೆಲೆ ಜಗಳವಾಡುತ್ತಾ ಕನ್ನಡಪರ ಸಂಘಟನೆಗಳ ಬಗ್ಗೆ ಅಗೌರವವಾಗಿ ಮಾತನಾಡಿದ್ದಾಗಲೂ ಕನ್ನಡಪರ ಸಂಘಟನೆಗಳವರು ಸಂಬರ್ಗಿ ವಿರುದ್ಧ ದೂರು ಸಲ್ಲಿಸಿದ ಜೊತೆಗೆ ಬಿಗ್​ಬಾಸ್ ಮನೆಯ ಮುಂದೆ ಪ್ರತಿಭಟನೆ ಸಹ ನಡೆಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು