AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಕನ್ನಡ ಸ್ಪರ್ಧಿ ತನಿಷಾ ಕುಪ್ಪಂದ ವಿರುದ್ಧ ದೂರು ದಾಖಲು

Bigg Boss: ಕೆಲವು ದಿನಗಳ ಹಿಂದಷ್ಟೆ ಬಿಗ್​ಬಾಸ್ ಮನೆಯ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದರು. ಇದೀಗ ಬಿಗ್​ಬಾಸ್ ಮನೆಯ ಮತ್ತೊಬ್ಬ ಸ್ಪರ್ಧಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿಗ್​ಬಾಸ್ ಕನ್ನಡ ಸ್ಪರ್ಧಿ ತನಿಷಾ ಕುಪ್ಪಂದ ವಿರುದ್ಧ ದೂರು ದಾಖಲು
ತನಿಷಾ ಕುಪ್ಪಂಡ
ಮಂಜುನಾಥ ಸಿ.
|

Updated on: Nov 14, 2023 | 5:07 PM

Share

ಬಿಗ್​ಬಾಸ್ ಕನ್ನಡ ಸೀಸನ್ 10ರ (Bigg Boss) ಮತ್ತೊಬ್ಬ ಸ್ಪರ್ಧಿಯ ವಿರುದ್ಧ ದೂರು ದಾಖಲಾಗಿದೆ. ಈ ಹಿಂದೆ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ದೂರು ದಾಖಲಾಗಿ ಅವರು ಜೈಲಿಗೆ ಸಹ ಹೋಗಿ, ಈಗ ಮತ್ತೆ ಬಿಗ್​ಬಾಸ್​ ಮನೆಗೆ ಬಂದು ಆಟ ಆಡುತ್ತಿದ್ದಾರೆ. ಇದೀಗ ವರ್ತೂರು ಸಂತೋಷ್​ ಜೊತೆ ಬಿಗ್​ಬಾಸ್ ಮನೆಯಲ್ಲಿ ಆತ್ಮೀಯವಾಗಿರುವ ತನಿಷಾ ಕುಪ್ಪಂಡ ಅವರು ವಿವಾದಕ್ಕೆ ಸಿಲುಕಿದ್ದು, ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತನಿಷಾ ಕುಪ್ಪಂಡ, ಬಿಗ್​ಬಾಸ್ ಮನೆಯಲ್ಲಿ ಸ್ಪರ್ಧಿಯೊಬ್ಬರ ಬಗ್ಗೆ ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. ಇತ್ತೀಚೆಗಿನ ಎಪಿಸೋಡ್​ ಒಂದರಲ್ಲಿ ವರ್ತೂರು ಸಂತೋಷ್​ ಬಗ್ಗೆ ಮಾತನಾಡುತ್ತಾ, ”ನೀನು ವಡ್ಡ ಅಲ್ಲ ಆದರೆ ವಡ್ಡನ ರೀತಿ ಆಕ್ಟ್ ಮಾಡುತ್ತೀಯ” ಎಂದಿದ್ದರು. ತನಿಷಾರ ಈ ಮಾತುಗಳು ಭೋವಿ ಸಮುದಾಯದ ಸದಸ್ಯರನ್ನು ಕೆರಳಿಸಿದ್ದು, ಜಾತಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತನಿಷಾ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

”ತನಿಷಾ, ವಡ್ಡ ಎಂಬ ಪದ ಬಳಸೂವ ಮೂಲಕ ಭೋವಿ ಸಮುದಾಯಕ್ಕೆ ಅಪಮಾನ ಎಸಗಿದ್ದಾರೆ. ಭೋವಿ ಸಮುದಾಯವು ಪರಿಶಿಷ್ಟ ಜಾತಿಗೆ ಸೇರಿದೆ ಎಂದು ತಿಳಿದೂ ಸಹ ಅಪಮಾನ ಮಾಡಲಾಗಿದೆ. ತನಿಷಾ ಅವರನ್ನು ಈ ಕೂಡಲೇ ಬಿಗ್​ಬಾಸ್ ಮನೆಯಿಂದ ಹೊರಗೆ ಕಳಿಸಬೇಕು, ಪೊಲೀಸರು ತನಿಷಾರನ್ನು ಬಂಧಿಸಬೇಕು. ಭೋವಿ ಸಮುದಾಯಕ್ಕೆ ಮಾಡಲಾದ ಅಪಮಾನದ ವಿರುದ್ಧ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಭೋವಿ ಸಮುದಾಯವು ಪ್ರತಿಭಟನೆ ನಡೆಸಲಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಬಿಗ್​ಬಾಸ್​ 10ರ ಸ್ಪರ್ಧಿ ತನಿಷಾ ಕುಪ್ಪಂಡ ಬಗ್ಗೆ ನಿಮಗೆಷ್ಟು ಗೊತ್ತು?

ದೂರು ಸ್ವೀಕರಿಸಿರುವ ಕುಂಬಳಗೋಡು ಪೊಲೀಸ್ ಠಾಣೆ ಸಿಬ್ಬಂದಿ ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಬಿಗ್​ಬಾಸ್ ಮನೆಯಲ್ಲಿರುವ ತನಿಷಾಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ಬಿಗ್​ಬಾಸ್ ಮನೆಯಲ್ಲಿಯೇ ತನಿಷಾ ಹೇಳಿಕೆ ದಾಖಲಿಸುತ್ತಾರಾ ಅಥವಾ ಹೊರಗೆ ಬಂದು ಠಾಣೆಗೆ ಭೇಟಿ ನೀಡುತ್ತಾರಾ ಕಾದು ನೋಡಬೇಕಿದೆ.

ಇತ್ತೀಚೆಗೆ ನಟ, ನಿರ್ದೇಶಕ ಉಪೇಂದ್ರ, ಲೈವ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪದವೊಂದನ್ನು ಬಳಕೆ ಮಾಡಿದ್ದು ಸಹ ವಿವಾದಕ್ಕೆ ಕಾರಣವಾಗಿತ್ತು. ಉಪೇಂದ್ರ ವಿರುದ್ಧ ದಲಿತಪರ ಸಂಘಟನೆಗಳು ದೂರು ನೀಡಿದ್ದವು. ಆ ಕುರಿತು ಉಪೇಂದ್ರ ಕ್ಷಮೆಯನ್ನೂ ಸಹ ಕೇಳಿದ್ದರು. ಅದಕ್ಕೂ ಮುನ್ನ ಪ್ರಶಾಂತ್ ಸಂಬರ್ಗಿ ಬಿಗ್​ಬಾಸ್ ಮನೆಯಲ್ಲಿದ್ದಾಗ ರೂಪೇಷ್ ರಾಜಣ್ಣ ಅವರ ಮೆಲೆ ಜಗಳವಾಡುತ್ತಾ ಕನ್ನಡಪರ ಸಂಘಟನೆಗಳ ಬಗ್ಗೆ ಅಗೌರವವಾಗಿ ಮಾತನಾಡಿದ್ದಾಗಲೂ ಕನ್ನಡಪರ ಸಂಘಟನೆಗಳವರು ಸಂಬರ್ಗಿ ವಿರುದ್ಧ ದೂರು ಸಲ್ಲಿಸಿದ ಜೊತೆಗೆ ಬಿಗ್​ಬಾಸ್ ಮನೆಯ ಮುಂದೆ ಪ್ರತಿಭಟನೆ ಸಹ ನಡೆಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ