AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಾಗರೂಕ ಚಾಲನೆ: ಸ್ಯಾಂಡಲ್ವುಡ್ ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್​ಐಆರ್

ಅಕ್ಟೋಬರ್ 29 ರಂದು ತಾರಾ ಅವರು ಬೆಂಗಳೂರಿನ ಕತ್ರಿಗುಪ್ಪೆ ಬಳಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಕ್ಷಯ್ ಅವರು ಕಾರು ಓಡಿಸುತ್ತಿದ್ದರು. ಆಗ ತಾರಾ ಅವರ ಕಾರು ಮುಂಭಾಗ ಚಲಿಸ್ತಿದ್ದ ಮತ್ತೊಂದು ಕಾರಿಗೆ ಗುದ್ದಿದೆ.

ಅಜಾಗರೂಕ ಚಾಲನೆ: ಸ್ಯಾಂಡಲ್ವುಡ್ ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್​ಐಆರ್
ತಾರಾ
TV9 Web
| Edited By: |

Updated on: Nov 09, 2022 | 4:52 PM

Share

ನಟಿ ತಾರಾ (Actress Tara) ಅವರು ಸ್ಯಾಂಡಲ್​​ವುಡ್​ನಲ್ಲಿ ಸಾಕಷ್ಟು ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಅವರು ಈ ಮೊದಲು ಎಂಎಲ್​ಸಿ ಆಗಿಯೂ ಸೇವೆ ಸಲ್ಲಿಸಿದ್ದರು. ಈಗ ತಾರಾ ಕಾರು ಚಾಲಕನ ಹೆಸರು ವಿವಾದದಲ್ಲಿ ಸಿಲುಕಿಕೊಂಡಿದೆ. ಅಜಾಗರೂಕತನದಿಂದ ತಾರಾ ಅವರ ಕಾರು ಚಾಲಕ ಅಕ್ಷಯ್ ಅಪಘಾತ ಮಾಡಿದ್ದಾರೆ. ಅಕ್ಷಯ್ ವಿರುದ್ಧ ಈಗ ಕೇಸ್ ದಾಖಲಾಗಿದೆ.

ಅಕ್ಟೋಬರ್ 29 ರಂದು ತಾರಾ ಅವರು ಬೆಂಗಳೂರಿನ ಕತ್ರಿಗುಪ್ಪೆ ಬಳಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಕ್ಷಯ್ ಅವರು ಕಾರು ಓಡಿಸುತ್ತಿದ್ದರು. ಆಗ ತಾರಾ ಅವರ ಕಾರು ಮುಂಭಾಗ ಚಲಿಸ್ತಿದ್ದ ಮತ್ತೊಂದು ಕಾರಿಗೆ ಗುದ್ದಿದೆ. ಪರಿಣಾಮ ಎದುರಿನ ಕಾರು ಜಖಂಗೊಂಡಿತ್ತು. ಈ ಅಪಘಾತದಲ್ಲಿ ಅಕ್ಷಯ್ ಅವರದ್ದೇ ತಪ್ಪು ಎನ್ನಲಾಗಿದೆ. ಅಕ್ಷಯ್ ಅವರ ಅಜಾಗರೂಕ ಚಾಲನೆಯಿಂದ ಈ ರೀತಿ ಆಗಿದೆ ಎಂದು ಎದುರಿನ ಕಾರಿನಲ್ಲಿದ್ದ ಗಿರೀಶ್ ಅವರು ಆರೋಪಿಸಿದ್ದರು.

ಇದನ್ನೂ ಓದಿ: ‘ಸಿರಿ ಕನ್ನಡ’ದಲ್ಲಿ ‘ಮತ್ತೆ ಮಾಯಾಮೃಗ’; ಅಕ್ಟೋಬರ್ 31ರಿಂದ ಪ್ರಸಾರ ಕಾಣಲಿದೆ ಟಿ.ಎನ್​. ಸೀತಾರಾಮ್ ಧಾರಾವಾಹಿ

ಈ ಘಟನೆ ನಂತರ ಕಾರು ರಿಪೇರಿ ಮಾಡಿಸಿಕೊಡುವುದಾಗಿ ಅಕ್ಷಯ್ ಅವರು ಭರವಸೆ ನೀಡಿದ್ದರು. ನಂತರ ಸಾಕಷ್ಟು ಅಲೆದಾಡಿಸಿದ್ದರು. ಹೀಗಾಗಿ, ಗಿರೀಶ್ ಅವರು ದೂರು ನೀಡಿದ್ದಾರೆ. ದೂರನ್ನು ಸ್ವೀಕರಿಸಿರುವ ಪೊಲೀಸರು ಐಪಿಸಿ ಸೆಕ್ಷನ್ 279 ಅಡಿ ‘ಅಜಾಗರೂಕ ಚಾಲನೆ’ ಎಂದು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಬನಶಂಕರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ