ಹಾಸ್ಯ ನಟ ‘ಹುಲಿ’ ಕಾರ್ತಿಕ್​ ಮೇಲೆ ದಾಖಲಾಯ್ತು ಎಫ್​ಐಆರ್; ಕಾರಣ ಏನು?

ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಹಾಸ್ಯ ನಟ ‘ಹುಲಿ' ಕಾರ್ತಿಕ್​ ಮೇಲೆ ದಾಖಲಾಯ್ತು ಎಫ್​ಐಆರ್; ಕಾರಣ ಏನು?
ಕಾರ್ತಿಕ್
Follow us
|

Updated on: Oct 08, 2024 | 11:08 AM

ಹಾಸ್ಯ ನಟ ‘ಹುಲಿ’ ಕಾರ್ತಿಕ್ ಅವರು ಇತ್ತೀಚೆಗಷ್ಟೇ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್​ನ ವಿನ್​ ಆಗಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚತ್ತು. ಇತ್ತೀಚೆಗೆ ರಿಲೀಸ್ ಆದ ‘ಪೌಡರ್’ ಸೇರಿ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಆಗುತ್ತಾರೆ ಎಂದು ವರದಿ ಆಗಿತ್ತು. ಆದರೆ, ಹಾಗಾಗಿಲ್ಲ. ಈಗ ಅವರು ಮಾತನಾಡುವಾಗ ಎಡವಿದ್ದಾರೆ. ಈ ಕಾರಣಕ್ಕೆ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಎಲ್ಲಿ?

ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಬಳಕೆ ಮಾಡಿದ ಪದವು ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ’ ಅವಾರ್ಡ್ಸ್​ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ, ನಿರ್ದೇಶಕರ ಮೇಲೂ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ‘ಕಾರ್ತಿಕ್​ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್​ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್

ಹುಲಿ ಕಾರ್ತಿಕ್ ಎ-1

ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್  ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ದ ದೂರು ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಗಿಚ್ಚಿ ಗಿಲಿ ಗಿಲಿ ಬಗ್ಗೆ ಮಾತು

‘ಈ ಬೆಲ್ಟ್​ ನನ್ನ ಕೈಯಲ್ಲಿ ಇದೆ ಎಂದರೆ ಅದಕ್ಕೆ ಕಾರಣ ಸ್ಕ್ರಿಪ್ಟ್ ಕಾರಣ’ ಎಂದಿದ್ದರು ಹುಲಿ ಕಾರ್ತಿಕ್. ಸ್ಕ್ರಿಪ್ಟ್ ರೈಟರ್ ಸಂದೀಪ್ ಅವರಿಗೆ ಧನ್ಯವಾದ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!