AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಯ ನಟ ‘ಹುಲಿ’ ಕಾರ್ತಿಕ್​ ಮೇಲೆ ದಾಖಲಾಯ್ತು ಎಫ್​ಐಆರ್; ಕಾರಣ ಏನು?

ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಹಾಸ್ಯ ನಟ ‘ಹುಲಿ' ಕಾರ್ತಿಕ್​ ಮೇಲೆ ದಾಖಲಾಯ್ತು ಎಫ್​ಐಆರ್; ಕಾರಣ ಏನು?
ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Oct 08, 2024 | 11:08 AM

Share

ಹಾಸ್ಯ ನಟ ‘ಹುಲಿ’ ಕಾರ್ತಿಕ್ ಅವರು ಇತ್ತೀಚೆಗಷ್ಟೇ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್​ನ ವಿನ್​ ಆಗಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚತ್ತು. ಇತ್ತೀಚೆಗೆ ರಿಲೀಸ್ ಆದ ‘ಪೌಡರ್’ ಸೇರಿ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಆಗುತ್ತಾರೆ ಎಂದು ವರದಿ ಆಗಿತ್ತು. ಆದರೆ, ಹಾಗಾಗಿಲ್ಲ. ಈಗ ಅವರು ಮಾತನಾಡುವಾಗ ಎಡವಿದ್ದಾರೆ. ಈ ಕಾರಣಕ್ಕೆ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಎಲ್ಲಿ?

ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಬಳಕೆ ಮಾಡಿದ ಪದವು ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ’ ಅವಾರ್ಡ್ಸ್​ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ, ನಿರ್ದೇಶಕರ ಮೇಲೂ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ‘ಕಾರ್ತಿಕ್​ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್​ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್

ಹುಲಿ ಕಾರ್ತಿಕ್ ಎ-1

ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್  ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ದ ದೂರು ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಗಿಚ್ಚಿ ಗಿಲಿ ಗಿಲಿ ಬಗ್ಗೆ ಮಾತು

‘ಈ ಬೆಲ್ಟ್​ ನನ್ನ ಕೈಯಲ್ಲಿ ಇದೆ ಎಂದರೆ ಅದಕ್ಕೆ ಕಾರಣ ಸ್ಕ್ರಿಪ್ಟ್ ಕಾರಣ’ ಎಂದಿದ್ದರು ಹುಲಿ ಕಾರ್ತಿಕ್. ಸ್ಕ್ರಿಪ್ಟ್ ರೈಟರ್ ಸಂದೀಪ್ ಅವರಿಗೆ ಧನ್ಯವಾದ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್