AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಯ ನಟ ‘ಹುಲಿ’ ಕಾರ್ತಿಕ್​ ಮೇಲೆ ದಾಖಲಾಯ್ತು ಎಫ್​ಐಆರ್; ಕಾರಣ ಏನು?

ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಹಾಸ್ಯ ನಟ ‘ಹುಲಿ' ಕಾರ್ತಿಕ್​ ಮೇಲೆ ದಾಖಲಾಯ್ತು ಎಫ್​ಐಆರ್; ಕಾರಣ ಏನು?
ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Oct 08, 2024 | 11:08 AM

Share

ಹಾಸ್ಯ ನಟ ‘ಹುಲಿ’ ಕಾರ್ತಿಕ್ ಅವರು ಇತ್ತೀಚೆಗಷ್ಟೇ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್​ನ ವಿನ್​ ಆಗಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚತ್ತು. ಇತ್ತೀಚೆಗೆ ರಿಲೀಸ್ ಆದ ‘ಪೌಡರ್’ ಸೇರಿ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಆಗುತ್ತಾರೆ ಎಂದು ವರದಿ ಆಗಿತ್ತು. ಆದರೆ, ಹಾಗಾಗಿಲ್ಲ. ಈಗ ಅವರು ಮಾತನಾಡುವಾಗ ಎಡವಿದ್ದಾರೆ. ಈ ಕಾರಣಕ್ಕೆ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಎಲ್ಲಿ?

ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಬಳಕೆ ಮಾಡಿದ ಪದವು ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ’ ಅವಾರ್ಡ್ಸ್​ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ, ನಿರ್ದೇಶಕರ ಮೇಲೂ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ‘ಕಾರ್ತಿಕ್​ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್​ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್

ಹುಲಿ ಕಾರ್ತಿಕ್ ಎ-1

ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್  ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ದ ದೂರು ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಗಿಚ್ಚಿ ಗಿಲಿ ಗಿಲಿ ಬಗ್ಗೆ ಮಾತು

‘ಈ ಬೆಲ್ಟ್​ ನನ್ನ ಕೈಯಲ್ಲಿ ಇದೆ ಎಂದರೆ ಅದಕ್ಕೆ ಕಾರಣ ಸ್ಕ್ರಿಪ್ಟ್ ಕಾರಣ’ ಎಂದಿದ್ದರು ಹುಲಿ ಕಾರ್ತಿಕ್. ಸ್ಕ್ರಿಪ್ಟ್ ರೈಟರ್ ಸಂದೀಪ್ ಅವರಿಗೆ ಧನ್ಯವಾದ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್