AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಯ ನಟ ‘ಹುಲಿ’ ಕಾರ್ತಿಕ್​ ಮೇಲೆ ದಾಖಲಾಯ್ತು ಎಫ್​ಐಆರ್; ಕಾರಣ ಏನು?

ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಹಾಸ್ಯ ನಟ ‘ಹುಲಿ' ಕಾರ್ತಿಕ್​ ಮೇಲೆ ದಾಖಲಾಯ್ತು ಎಫ್​ಐಆರ್; ಕಾರಣ ಏನು?
ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Oct 08, 2024 | 11:08 AM

Share

ಹಾಸ್ಯ ನಟ ‘ಹುಲಿ’ ಕಾರ್ತಿಕ್ ಅವರು ಇತ್ತೀಚೆಗಷ್ಟೇ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್​ನ ವಿನ್​ ಆಗಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚತ್ತು. ಇತ್ತೀಚೆಗೆ ರಿಲೀಸ್ ಆದ ‘ಪೌಡರ್’ ಸೇರಿ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಆಗುತ್ತಾರೆ ಎಂದು ವರದಿ ಆಗಿತ್ತು. ಆದರೆ, ಹಾಗಾಗಿಲ್ಲ. ಈಗ ಅವರು ಮಾತನಾಡುವಾಗ ಎಡವಿದ್ದಾರೆ. ಈ ಕಾರಣಕ್ಕೆ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಎಲ್ಲಿ?

ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಬಳಕೆ ಮಾಡಿದ ಪದವು ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ’ ಅವಾರ್ಡ್ಸ್​ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ, ನಿರ್ದೇಶಕರ ಮೇಲೂ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ‘ಕಾರ್ತಿಕ್​ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್​ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್

ಹುಲಿ ಕಾರ್ತಿಕ್ ಎ-1

ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್  ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ದ ದೂರು ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಗಿಚ್ಚಿ ಗಿಲಿ ಗಿಲಿ ಬಗ್ಗೆ ಮಾತು

‘ಈ ಬೆಲ್ಟ್​ ನನ್ನ ಕೈಯಲ್ಲಿ ಇದೆ ಎಂದರೆ ಅದಕ್ಕೆ ಕಾರಣ ಸ್ಕ್ರಿಪ್ಟ್ ಕಾರಣ’ ಎಂದಿದ್ದರು ಹುಲಿ ಕಾರ್ತಿಕ್. ಸ್ಕ್ರಿಪ್ಟ್ ರೈಟರ್ ಸಂದೀಪ್ ಅವರಿಗೆ ಧನ್ಯವಾದ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ