AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್​​ನಲ್ಲಿ ಕನ್ನಡ ಕಿರುತೆರೆ ನಟನ ಕಿರಿಕ್; ದಾಖಲಾಯ್ತು ಎಫ್​ಐಆರ್​

ಕನ್ನಡ ಕಿರುತೆರೆ ನಟ ಪ್ರಜ್ವಲ್ ಮೇಲೆ ಎಫ್​ಐಆರ್ ದಾಖಲಾಗಿದೆ. ಬಾರ್​ನಲ್ಲಿ ಉಂಟಾದ ಕಿರಿಕ್​ನಿಂದ ಅವರು ಹೆಸರು ಕೆಡಿಸಿಕೊಂಡಿದ್ದಾರೆ.

ಬಾರ್​​ನಲ್ಲಿ ಕನ್ನಡ ಕಿರುತೆರೆ ನಟನ ಕಿರಿಕ್; ದಾಖಲಾಯ್ತು ಎಫ್​ಐಆರ್​
ಪ್ರಜ್ವಲ್
TV9 Web
| Edited By: |

Updated on: Jun 21, 2023 | 8:18 AM

Share

ಬಣ್ಣದ ಲೋಕದಲ್ಲಿ ಇರುವವರು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಸಾರ್ವಜನಿಕವಾಗಿ ಅವರು ಹೆಚ್ಚು ಕನೆಕ್ಟ್ ಆಗಿ ಇರುವುದರಿಂದ ಜನರು ಬೇಗ ಗುರುತಿಸುತ್ತಾರೆ. ಏನಾದರೂ ಕಿರಿಕ್ ಮಾಡಿಕೊಂಡರೆ ಬಹುಬೇಗ ಸುದ್ದಿ ಆಗುತ್ತಾರೆ. ಈಗ ಕನ್ನಡ ಕಿರುತೆರೆ ನಟ ಪ್ರಜ್ವಲ್ (Prajwal) ಮೇಲೆ ಎಫ್​ಐಆರ್ ದಾಖಲಾಗಿದೆ. ಕನ್ನಡದ ಕೆಲವು ಧಾರಾವಾಹಿಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಬಾರ್​ನಲ್ಲಿ ಉಂಟಾದ ಕಿರಿಕ್​ನಿಂದ ಅವರು ಹೆಸರು ಕೆಡಿಸಿಕೊಂಡಿದ್ದಾರೆ. ಸದ್ಯ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಪ್ರಜ್ವಲ್ ವಿರುದ್ಧ ಆರ್​ಆರ್​ ನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲು ಆಗಿದೆ. ‘ಅಮೃತವರ್ಷಿಣಿ’ ಹಾಗೂ ‘ಅಣ್ಣ ತಂಗಿ’ ಧಾರಾವಾಹಿ ಮೂಲಕ ಪ್ರಜ್ವಲ್ ಖ್ಯಾತಿ ಪಡೆದಿದ್ದಾರೆ. ಮೂರು ದಿನದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚೇತನ್ ಎಂಬುವರ ಜೊತೆ ಪ್ರಜ್ವಲ್​ ಬಾರ್​​ನಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ.

ಆರ್​ಆರ್ ನಗರದ ‘ಅಮೃತ ಬಾರ್ ಆ್ಯಂಡ್ ರೆಸ್ಟೋರೆಂಟ್’ನಲ್ಲಿ ಈ ಗಲಾಟೆ ನಡೆದಿದೆ. ಪ್ರಜ್ವಲ್ ತಮ್ಮ ಸ್ನೇಹಿತರ ಜೊತೆ ಅಮೃತ ಬಾರ್​ಗೆ ಹೋಗಿದ್ದರು. ಇದೇ ಬಾರ್​ಗೆ ಚೇತನ್ ಕೂಡ ತನ್ನ ಸ್ನೇಹಿತರ ಜೊತೆ ಬಂದಿದ್ದರು. ಈ ವೇಳೆ ಪ್ರಜ್ವಲ್​ನ ಸ್ನೇಹಿತ ಮನು ಎಂಬುವವರನ್ನು ಚೇತನ್ ಕರೆದಿದ್ದಾರೆ. ಇದರಿಂದ ಅಲ್ಲಿಯೇ ಇದ್ದ ಪ್ರಜ್ವಲ್ ಅವರು ಚೇತನ್ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಒಟಿಟಿಗೆ ಬರುತ್ತಿದೆ ‘ಮತ್ತೆ ಮದುವೆ’ ಸಿನಿಮಾ; ಜೂನ್​ 23ರಿಂದ ‘ಅಮೇಜಾನ್​ ಪ್ರೈಂ ವಿಡಿಯೋ’ದಲ್ಲಿ ಪ್ರಸಾರ

ಮರದ ಪೀಸ್​​​ನಿಂದ ಚೇತನ್ ಹಾಗೂ ಸ್ನೇಹಿತರ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದ ಆರೋಪವನ್ನು ಚೇತನ್ ಮಾಡಿದ್ದಾರೆ. ಬಾರ್​ನಲ್ಲಿ ಅಷ್ಟೇ ಅಲ್ಲದೆ ರಸ್ತೆಯಲ್ಲಿ ಈ ಗುಂಪು ಮತ್ತೆ ಗಲಾಟೆ ಮಾಡಿಕೊಂಡಿದೆ. ಅಮೃತ ಬಾರ್​​ನಲ್ಲಿ ಗಲಾಟೆ ಆದ ಬಳಿಕ ಚೇತನ್ ಸ್ನೇಹಿತರ ಮೇಲೆ ಪ್ರಜ್ವಲ್ ಮತ್ತೆ ಹಲ್ಲೆ ಮಾಡಿದ್ದಾಗಿ ಆರೋಪಿಸಿ ದೂರು ದಾಖಲಾಗಿದೆ. ಸದ್ಯ ಚೇತನ್ ಕೊಟ್ಟು ದೂರಿನನ್ವಯ ಎಫ್​ಐಆರ್​ ದಾಖಲು ಮಾಡಿಕೊಂಡು ಪೊಲೀಸರು‌‌ ನೊಟೀಸ್ ನೀಡಿದ್ದಾರೆ. ಇದರ ಜೊತೆಗೆ ಬಾರ್​​ನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ