AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್​​ನಲ್ಲಿ ಕನ್ನಡ ಕಿರುತೆರೆ ನಟನ ಕಿರಿಕ್; ದಾಖಲಾಯ್ತು ಎಫ್​ಐಆರ್​

ಕನ್ನಡ ಕಿರುತೆರೆ ನಟ ಪ್ರಜ್ವಲ್ ಮೇಲೆ ಎಫ್​ಐಆರ್ ದಾಖಲಾಗಿದೆ. ಬಾರ್​ನಲ್ಲಿ ಉಂಟಾದ ಕಿರಿಕ್​ನಿಂದ ಅವರು ಹೆಸರು ಕೆಡಿಸಿಕೊಂಡಿದ್ದಾರೆ.

ಬಾರ್​​ನಲ್ಲಿ ಕನ್ನಡ ಕಿರುತೆರೆ ನಟನ ಕಿರಿಕ್; ದಾಖಲಾಯ್ತು ಎಫ್​ಐಆರ್​
ಪ್ರಜ್ವಲ್
TV9 Web
| Edited By: |

Updated on: Jun 21, 2023 | 8:18 AM

Share

ಬಣ್ಣದ ಲೋಕದಲ್ಲಿ ಇರುವವರು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಸಾರ್ವಜನಿಕವಾಗಿ ಅವರು ಹೆಚ್ಚು ಕನೆಕ್ಟ್ ಆಗಿ ಇರುವುದರಿಂದ ಜನರು ಬೇಗ ಗುರುತಿಸುತ್ತಾರೆ. ಏನಾದರೂ ಕಿರಿಕ್ ಮಾಡಿಕೊಂಡರೆ ಬಹುಬೇಗ ಸುದ್ದಿ ಆಗುತ್ತಾರೆ. ಈಗ ಕನ್ನಡ ಕಿರುತೆರೆ ನಟ ಪ್ರಜ್ವಲ್ (Prajwal) ಮೇಲೆ ಎಫ್​ಐಆರ್ ದಾಖಲಾಗಿದೆ. ಕನ್ನಡದ ಕೆಲವು ಧಾರಾವಾಹಿಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಬಾರ್​ನಲ್ಲಿ ಉಂಟಾದ ಕಿರಿಕ್​ನಿಂದ ಅವರು ಹೆಸರು ಕೆಡಿಸಿಕೊಂಡಿದ್ದಾರೆ. ಸದ್ಯ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಪ್ರಜ್ವಲ್ ವಿರುದ್ಧ ಆರ್​ಆರ್​ ನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲು ಆಗಿದೆ. ‘ಅಮೃತವರ್ಷಿಣಿ’ ಹಾಗೂ ‘ಅಣ್ಣ ತಂಗಿ’ ಧಾರಾವಾಹಿ ಮೂಲಕ ಪ್ರಜ್ವಲ್ ಖ್ಯಾತಿ ಪಡೆದಿದ್ದಾರೆ. ಮೂರು ದಿನದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚೇತನ್ ಎಂಬುವರ ಜೊತೆ ಪ್ರಜ್ವಲ್​ ಬಾರ್​​ನಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ.

ಆರ್​ಆರ್ ನಗರದ ‘ಅಮೃತ ಬಾರ್ ಆ್ಯಂಡ್ ರೆಸ್ಟೋರೆಂಟ್’ನಲ್ಲಿ ಈ ಗಲಾಟೆ ನಡೆದಿದೆ. ಪ್ರಜ್ವಲ್ ತಮ್ಮ ಸ್ನೇಹಿತರ ಜೊತೆ ಅಮೃತ ಬಾರ್​ಗೆ ಹೋಗಿದ್ದರು. ಇದೇ ಬಾರ್​ಗೆ ಚೇತನ್ ಕೂಡ ತನ್ನ ಸ್ನೇಹಿತರ ಜೊತೆ ಬಂದಿದ್ದರು. ಈ ವೇಳೆ ಪ್ರಜ್ವಲ್​ನ ಸ್ನೇಹಿತ ಮನು ಎಂಬುವವರನ್ನು ಚೇತನ್ ಕರೆದಿದ್ದಾರೆ. ಇದರಿಂದ ಅಲ್ಲಿಯೇ ಇದ್ದ ಪ್ರಜ್ವಲ್ ಅವರು ಚೇತನ್ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಒಟಿಟಿಗೆ ಬರುತ್ತಿದೆ ‘ಮತ್ತೆ ಮದುವೆ’ ಸಿನಿಮಾ; ಜೂನ್​ 23ರಿಂದ ‘ಅಮೇಜಾನ್​ ಪ್ರೈಂ ವಿಡಿಯೋ’ದಲ್ಲಿ ಪ್ರಸಾರ

ಮರದ ಪೀಸ್​​​ನಿಂದ ಚೇತನ್ ಹಾಗೂ ಸ್ನೇಹಿತರ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದ ಆರೋಪವನ್ನು ಚೇತನ್ ಮಾಡಿದ್ದಾರೆ. ಬಾರ್​ನಲ್ಲಿ ಅಷ್ಟೇ ಅಲ್ಲದೆ ರಸ್ತೆಯಲ್ಲಿ ಈ ಗುಂಪು ಮತ್ತೆ ಗಲಾಟೆ ಮಾಡಿಕೊಂಡಿದೆ. ಅಮೃತ ಬಾರ್​​ನಲ್ಲಿ ಗಲಾಟೆ ಆದ ಬಳಿಕ ಚೇತನ್ ಸ್ನೇಹಿತರ ಮೇಲೆ ಪ್ರಜ್ವಲ್ ಮತ್ತೆ ಹಲ್ಲೆ ಮಾಡಿದ್ದಾಗಿ ಆರೋಪಿಸಿ ದೂರು ದಾಖಲಾಗಿದೆ. ಸದ್ಯ ಚೇತನ್ ಕೊಟ್ಟು ದೂರಿನನ್ವಯ ಎಫ್​ಐಆರ್​ ದಾಖಲು ಮಾಡಿಕೊಂಡು ಪೊಲೀಸರು‌‌ ನೊಟೀಸ್ ನೀಡಿದ್ದಾರೆ. ಇದರ ಜೊತೆಗೆ ಬಾರ್​​ನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ