AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​’ ಮನೆಯಲ್ಲಿ ಅಗ್ನಿ ಅವಘಡ; ಸಾವು-ನೋವಿನ ಬಗ್ಗೆ ಆಗಿಲ್ಲ ವರದಿ

ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳೋಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ವರದಿ ಆಗಿದೆ. ಆದರೆ, ಈ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

‘ಬಿಗ್​ ಬಾಸ್​’ ಮನೆಯಲ್ಲಿ ಅಗ್ನಿ ಅವಘಡ; ಸಾವು-ನೋವಿನ ಬಗ್ಗೆ ಆಗಿಲ್ಲ ವರದಿ
ಬಿಗ್​ ಬಾಸ್ ಮನೆ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Feb 13, 2022 | 8:26 PM

Share

ದೇಶದ ಅತಿ ದೊಡ್ಡ ರಿಯಾಲಿಟಿ ಶೋಗಳಲ್ಲಿ ‘ಬಿಗ್​ ಬಾಸ್​’ (Bigg Boss) ಕೂಡ ಒಂದು. ಹಲವು ಭಾಷೆಗಳಲ್ಲಿ ಈ ಶೋ ಪ್ರಸಾರ ಆಗುತ್ತಿದೆ. ಈ ಶೋ ನಡೆಸಿಕೊಡೋಕೆ ದೊಡ್ಡ ಮೊತ್ತದ ಹಣವನ್ನು ಖರ್ಚು ಮಾಡಲಾಗುತ್ತದೆ. ದೇಶದಲ್ಲಿ ಬಿಗ್​ ಬಾಸ್ ಆರಂಭವಾಗಿದ್ದು ಹಿಂದಿಯಲ್ಲಿ ಮೊದಲು. ಈಗಾಗಲೇ ಯಶಸ್ವಿಯಾಗಿ 15 ಸೀಸನ್​ಅನ್ನು ಈ ರಿಯಾಲಿಟಿ ಪೂರ್ಣಗೊಳಿಸಿದೆ. ಇತ್ತೀಚೆಗಷ್ಟೇ ಹಿಂದಿ ‘ಬಿಗ್​ ಬಾಸ್​’ 15ನೇ (Hindi Bigg Boss) ಸೀಸನ್​ನ ಫಿನಾಲೆ ಪೂರ್ಣಗೊಂಡಿತ್ತು. ಈಗ ಬಿಗ್​ ಬಾಸ್​ ಮನೆಯಲ್ಲಿ ಅಗ್ನಿ ಅವಘಡ  ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮುಂಬೈನ ಗೋರೆಗಾಂವ್​ನಲ್ಲಿ ಫಿಲ್ಮ್​ ಸಿಟಿಯಲ್ಲಿ ಬಿಗ್​ ಬಾಸ್ ಮನೆ ಇದೆ. ಭಾನುವಾರ (ಫೆಬ್ರವರಿ 13) ಮಧ್ಯಾಹ್ನ 1 ಗಂಟೆ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಪ್ರತಿ ಬಾರಿಯೂ ಬಿಗ್​ ಬಾಸ್​ ಮನೆಯನ್ನು ನಾನಾ ರೀತಿಯಲ್ಲಿ ರೂಪುಗೊಳಿಸಲಾಗುತ್ತದೆ. ಈ ಬಾರಿಯ ಹಿಂದಿ ಬಿಗ್​ ಬಾಸ್​ ಕಾಡಿನ ಥೀಮ್​ನಲ್ಲಿ ಮೂಡಿ ಬಂದಿತ್ತು. ಇಡೀ ಮನೆಯಲ್ಲಿ ಕಾಡಿನ ಮಾದರಿಯಲ್ಲೇ ಗಿಡಗಳನ್ನು ಬೆಳೆಸಲಾಗಿತ್ತು. ಬಿಗ್​ ಬಾಸ್​ ಪೂರ್ಣಗೊಂಡು 15 ದಿನದ ಒಳಗೆ ಬಿಗ್​ ಬಾಸ್​ ಮನೆಯಲ್ಲಿ ಅಗ್ನಿ ದುರಂತ ನಡೆದಿದೆ.

ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳೋಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ವರದಿ ಆಗಿದೆ. ಆದರೆ, ಈ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ತೇಜಸ್ವಿ ಪ್ರಕಾಶ್ ವಿನ್ನರ್​:

ಹಲವು ರೀತಿಯಲ್ಲಿ ಗಮನ ಸೆಳೆದ ನಟಿ ತೇಜಸ್ವಿ ಪ್ರಕಾಶ್​ ಅವರು ‘ಬಿಗ್​ ಬಾಸ್​ 15’ರ ವಿನ್ನರ್​ ಆಗಿ ಹೊರಹೊಮ್ಮಿದ್ದರು. ಅವರು ವಿನ್ ಆಗುತ್ತಾರೆ ಎಂದು ಬಹುತೇಕರು ಊಹಿಸಿರಲಿಲ್ಲ. ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಅವರೇ ಈ ಬಾರಿ ಬಿಗ್​ ಬಾಸ್​ ಟ್ರೋಫಿ ಎತ್ತಿ ಹಿಡಿಯಬಹುದು ಎಂದು ಅನೇಕರು ಅಂದಾಜಿಸಿದ್ದರು. ಆದರೆ ಆ ಲೆಕ್ಕಾಚಾರ ಉಲ್ಟಾ ಆಗಿತ್ತು. ಅಂತಿಮವಾಗಿ ತೇಜಸ್ವಿ ಪ್ರಕಾಶ್​ ಅವರಿಗೆ ವಿಜಯಲಕ್ಷ್ಮಿ ಒಲಿದಿದ್ದಳು. ಪ್ರತೀಕ್​ ಸೆಹಜ್ಪಾಲ್​ ಅವರು ರನ್ನರ್​ ಅಪ್​ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಸಲ್ಮಾನ್​ ಖಾನ್​ ಅವರು ತೇಜಸ್ವಿ ಪ್ರಕಾಶ್​ ಅವರ ಕೈ ಎತ್ತುವ ಮೂಲಕ ಅವರೇ ವಿನ್ನರ್​ ಎಂಬುದನ್ನು ಘೋಷಿಸಿದರು. ಬರೋಬ್ಬರಿ 40 ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತೇಜಸ್ವಿ ಪ್ರಕಾಶ್​ ಪಡೆದಿದ್ದಾರೆ. ಜ.30ರ ರಾತ್ರಿ ಅದ್ದೂರಿಯಾಗಿ ಬಿಗ್​ ಬಾಸ್​ 15ನೇ ಸೀಸನ್​ ಫಿನಾಲೆ ಕಾರ್ಯಕ್ರಮ ನಡೆದಿತ್ತು.

ಇದನ್ನೂ ಓದಿ: ‘ನೀಲಿಚಿತ್ರ ಅತಿಯಾಗಿ ನೋಡುವವರಿಗೆ ಕಿಸ್​ ಮಾಡೋಕೆ ಬರಲ್ಲ’; ಬಿಗ್​ ಬಾಸ್​ ಸ್ಪರ್ಧಿಯ ವಿಚಿತ್ರ ಹೇಳಿಕೆ 

ಮುಂಬೈ: ಟಾರ್ಡಿಯೋದ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ; ಏಳು ಜನರ ದುರ್ಮರಣ

Published On - 8:03 pm, Sun, 13 February 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ