AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಾ ಕಣ್ಣಿಗೆ ಬಟ್ಟೆ; ಹನುಮಂತ ಫಸ್ಟ್​ ನೈಟ್ ಬೆಡ್​ನ ವಿವರಣೆ ಕೊಟ್ಟ ಪರಿಗೆ ಸುದೀಪ್ ಸುಸ್ತು

ಶೋಭಾ ಶೆಟ್ಟಿ ಹಾಗೂ ರಜತ್ ಅವರು ಬಂದರು. ಶೋಭಾ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಈ ವೇಳೆ ಫಸ್ಟ್​ನೈಟ್ ಬೆಡ್​ನ ಫೋಟೋ ಬಂತು. ಇದನ್ನು ನೋಡಿ ಎಲ್ಲರೂ ನಕ್ಕರು. ರಜತ್ ಬಳಿ ಇದನ್ನು ವಿವರಿಸೋಕೆ ಸಾಧ್ಯ ಆಗಲೇ ಇಲ್ಲ. ಆ ಬಳಿಕ ಶಿಶಿರ್ ಅವರು ತಾವು ಪ್ರಯತ್ನ ಮಾಡುವುದಾಗಿ ಬಂದರು. ಕೊನೆಗೆ ಬಂದ ಹನುಮಂತ ಇದರಲ್ಲಿ ಯಶಸ್ಸು ಕಂಡರು.

ಶೋಭಾ ಕಣ್ಣಿಗೆ ಬಟ್ಟೆ; ಹನುಮಂತ ಫಸ್ಟ್​ ನೈಟ್ ಬೆಡ್​ನ ವಿವರಣೆ ಕೊಟ್ಟ ಪರಿಗೆ ಸುದೀಪ್ ಸುಸ್ತು
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Dec 02, 2024 | 10:35 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಭಾನುವಾರದ ಎಪಿಸೋಡ್​ ಯಾವಾಗಲೂ ಫನ್ ಇಂದ ತುಂಬಿರುತ್ತದೆ. ಕಳೆದ ಭಾನುವಾರ (ಡಿಸೆಂಬರ್ 1) ಈ ಫನ್ ಸ್ವಲ್ಪ ಅಧಿಕವಾಗಿಯೇ ಇತ್ತು. ಸ್ಪರ್ಧಿಯ ಕಣ್ಣಿಗೆ ಬಟ್ಟೆ ಕಟ್ಟಲಾಗುತ್ತದೆ. ಈ ವೇಳೆ ಬೋರ್ಡ್​​ಮೇಲೆ ಒಂದು ವಸ್ತುವನ್ನು ತೋರಿಸಲಾಗುತ್ತದೆ. ಅದು ಏನು ಎಂಬುದನ್ನು ಎದುರು ಇರುವ ವ್ಯಕ್ತಿ ಧ್ವನಿ ಮೂಲಕವೇ ವಿವರಿಸಬೇಕು. ಈ ಎಪಿಸೋಡ್ ಸಖತ್ ಮನರಂಜನಾತ್ಮಕವಾಗಿ ಇತ್ತು.

ಶೋಭಾ ಶೆಟ್ಟಿ ಹಾಗೂ ರಜತ್ ಅವರು ಬಂದರು. ಶೋಭಾ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಈ ವೇಳೆ ಫಸ್ಟ್​ನೈಟ್ ಬೆಡ್​ನ ಫೋಟೋ ಬಂತು. ಇದನ್ನು ನೋಡಿ ಎಲ್ಲರೂ ನಕ್ಕರು. ರಜತ್ ಬಳಿ ಇದನ್ನು ವಿವರಿಸೋಕೆ ಸಾಧ್ಯ ಆಗಲೇ ಇಲ್ಲ. ಆ ಬಳಿಕ ಶಿಶಿರ್ ಅವರು ತಾವು ಪ್ರಯತ್ನ ಮಾಡುವುದಾಗಿ ಬಂದರು. ಅವರ ಬಳಿಯೂ ಸಾಧ್ಯವಾಗಿಲ್ಲ.

ಕೊನೆಗೆ ಸುದೀಪ್ ಅವರು ಈ ಟಾಸ್ಕ್​ನ ತ್ರಿವಿಕ್ರಂಗೆ ನೀಡಿದರು. ‘ಇದನ್ನು ಸರಿಯಾಗಿ ಗೆಸ್ ಮಾಡಿದರೆ ಇಡೀ ಮನೆಗೆ ಲಕ್ಷುರಿ ಬಜೆಟ್ ಸಿಗುತ್ತದೆ’ ಎಂದರು. ಆದರೆ, ತ್ರಿವಿಕ್ರಂ ಬಳಿಯೂ ಇದನ್ನು ಮಾಡೋಕೆ ಸಾಧ್ಯವಾಗಿಲ್ಲ. ಕೊನೆಗೆ ಬಂದಿದ್ದೇ ಹನುಮಂತ ಅವರು. ಹನುಮಂತ ಅವರು ಬರುತ್ತಿದ್ದಂತೆ, ‘ಎ ಏ ಐ ಅಂ ಅಃ..’ ಎಂದರು. ಅವರ ಧ್ವನಿಯಲ್ಲೇ ಶೋಭಾಗೆ ಗೊತ್ತಾಗಿ ಹೋಯಿತು. ‘ಫಸ್ಟ್​ನೈಟ್ ಕೋಣೆ ಅಥವಾ ಬೆಡ್’ ಎಂದು ಶೋಭಾ ಉತ್ತರ ಕೊಟ್ಟರು. ಈ ಮೂಲಕ ಇಡೀ ಮನೆ ಲಕ್ಷುರಿ ಪಡೆಯಿತು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಮತ್ತೆ ಹೈಡ್ರಾಮಾ; ಮುಖ್ಯದ್ವಾರ ತೆಗೆದ ಬಳಿಕ ಉಲ್ಟಾ ಹೊಡೆದ ಶೋಭಾ ಶೆಟ್ಟಿ

ರಜತ್, ಶಿಶಿರ್ ಹಾಗೂ ತ್ರಿವಿಕ್ರಂ ಬಳಿ ಸಾಧ್ಯವಾಗದೇ ಇದ್ದಿದ್ದನ್ನು ಹನುಮಂತ ಅವರು ಮಾಡಿ ತೋರಿಸಿದರು. ಈ ಮೂಲಕ ಇಡೀ ಮನೆಗೆ ಲಕ್ಷುರಿ ಕೊಡಿಸಿ ಅವರು ಹಿರೋ ಆದರು. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು