AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಾ ಕಣ್ಣಿಗೆ ಬಟ್ಟೆ; ಹನುಮಂತ ಫಸ್ಟ್​ ನೈಟ್ ಬೆಡ್​ನ ವಿವರಣೆ ಕೊಟ್ಟ ಪರಿಗೆ ಸುದೀಪ್ ಸುಸ್ತು

ಶೋಭಾ ಶೆಟ್ಟಿ ಹಾಗೂ ರಜತ್ ಅವರು ಬಂದರು. ಶೋಭಾ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಈ ವೇಳೆ ಫಸ್ಟ್​ನೈಟ್ ಬೆಡ್​ನ ಫೋಟೋ ಬಂತು. ಇದನ್ನು ನೋಡಿ ಎಲ್ಲರೂ ನಕ್ಕರು. ರಜತ್ ಬಳಿ ಇದನ್ನು ವಿವರಿಸೋಕೆ ಸಾಧ್ಯ ಆಗಲೇ ಇಲ್ಲ. ಆ ಬಳಿಕ ಶಿಶಿರ್ ಅವರು ತಾವು ಪ್ರಯತ್ನ ಮಾಡುವುದಾಗಿ ಬಂದರು. ಕೊನೆಗೆ ಬಂದ ಹನುಮಂತ ಇದರಲ್ಲಿ ಯಶಸ್ಸು ಕಂಡರು.

ಶೋಭಾ ಕಣ್ಣಿಗೆ ಬಟ್ಟೆ; ಹನುಮಂತ ಫಸ್ಟ್​ ನೈಟ್ ಬೆಡ್​ನ ವಿವರಣೆ ಕೊಟ್ಟ ಪರಿಗೆ ಸುದೀಪ್ ಸುಸ್ತು
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Dec 02, 2024 | 10:35 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಭಾನುವಾರದ ಎಪಿಸೋಡ್​ ಯಾವಾಗಲೂ ಫನ್ ಇಂದ ತುಂಬಿರುತ್ತದೆ. ಕಳೆದ ಭಾನುವಾರ (ಡಿಸೆಂಬರ್ 1) ಈ ಫನ್ ಸ್ವಲ್ಪ ಅಧಿಕವಾಗಿಯೇ ಇತ್ತು. ಸ್ಪರ್ಧಿಯ ಕಣ್ಣಿಗೆ ಬಟ್ಟೆ ಕಟ್ಟಲಾಗುತ್ತದೆ. ಈ ವೇಳೆ ಬೋರ್ಡ್​​ಮೇಲೆ ಒಂದು ವಸ್ತುವನ್ನು ತೋರಿಸಲಾಗುತ್ತದೆ. ಅದು ಏನು ಎಂಬುದನ್ನು ಎದುರು ಇರುವ ವ್ಯಕ್ತಿ ಧ್ವನಿ ಮೂಲಕವೇ ವಿವರಿಸಬೇಕು. ಈ ಎಪಿಸೋಡ್ ಸಖತ್ ಮನರಂಜನಾತ್ಮಕವಾಗಿ ಇತ್ತು.

ಶೋಭಾ ಶೆಟ್ಟಿ ಹಾಗೂ ರಜತ್ ಅವರು ಬಂದರು. ಶೋಭಾ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಈ ವೇಳೆ ಫಸ್ಟ್​ನೈಟ್ ಬೆಡ್​ನ ಫೋಟೋ ಬಂತು. ಇದನ್ನು ನೋಡಿ ಎಲ್ಲರೂ ನಕ್ಕರು. ರಜತ್ ಬಳಿ ಇದನ್ನು ವಿವರಿಸೋಕೆ ಸಾಧ್ಯ ಆಗಲೇ ಇಲ್ಲ. ಆ ಬಳಿಕ ಶಿಶಿರ್ ಅವರು ತಾವು ಪ್ರಯತ್ನ ಮಾಡುವುದಾಗಿ ಬಂದರು. ಅವರ ಬಳಿಯೂ ಸಾಧ್ಯವಾಗಿಲ್ಲ.

ಕೊನೆಗೆ ಸುದೀಪ್ ಅವರು ಈ ಟಾಸ್ಕ್​ನ ತ್ರಿವಿಕ್ರಂಗೆ ನೀಡಿದರು. ‘ಇದನ್ನು ಸರಿಯಾಗಿ ಗೆಸ್ ಮಾಡಿದರೆ ಇಡೀ ಮನೆಗೆ ಲಕ್ಷುರಿ ಬಜೆಟ್ ಸಿಗುತ್ತದೆ’ ಎಂದರು. ಆದರೆ, ತ್ರಿವಿಕ್ರಂ ಬಳಿಯೂ ಇದನ್ನು ಮಾಡೋಕೆ ಸಾಧ್ಯವಾಗಿಲ್ಲ. ಕೊನೆಗೆ ಬಂದಿದ್ದೇ ಹನುಮಂತ ಅವರು. ಹನುಮಂತ ಅವರು ಬರುತ್ತಿದ್ದಂತೆ, ‘ಎ ಏ ಐ ಅಂ ಅಃ..’ ಎಂದರು. ಅವರ ಧ್ವನಿಯಲ್ಲೇ ಶೋಭಾಗೆ ಗೊತ್ತಾಗಿ ಹೋಯಿತು. ‘ಫಸ್ಟ್​ನೈಟ್ ಕೋಣೆ ಅಥವಾ ಬೆಡ್’ ಎಂದು ಶೋಭಾ ಉತ್ತರ ಕೊಟ್ಟರು. ಈ ಮೂಲಕ ಇಡೀ ಮನೆ ಲಕ್ಷುರಿ ಪಡೆಯಿತು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಮತ್ತೆ ಹೈಡ್ರಾಮಾ; ಮುಖ್ಯದ್ವಾರ ತೆಗೆದ ಬಳಿಕ ಉಲ್ಟಾ ಹೊಡೆದ ಶೋಭಾ ಶೆಟ್ಟಿ

ರಜತ್, ಶಿಶಿರ್ ಹಾಗೂ ತ್ರಿವಿಕ್ರಂ ಬಳಿ ಸಾಧ್ಯವಾಗದೇ ಇದ್ದಿದ್ದನ್ನು ಹನುಮಂತ ಅವರು ಮಾಡಿ ತೋರಿಸಿದರು. ಈ ಮೂಲಕ ಇಡೀ ಮನೆಗೆ ಲಕ್ಷುರಿ ಕೊಡಿಸಿ ಅವರು ಹಿರೋ ಆದರು. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್