AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಡ್ ಪಾಯ್ಸನ್ ವಿಚಾರ: ಪ್ರತಾಪ್ ಬಿಗ್ ಬಾಸ್ ಮನೆಯಲ್ಲಿ ಹೇಳಿದ್ದೊಂದು, ಹೊರಗೆ ಹೇಳ್ತಿರೋದೇ ಇನ್ನೊಂದು

ಪ್ರತಾಪ್ ಎರಡು ದಿನ ಸರಿಯಾಗಿ ಊಟ ಮಾಡಿರಲಿಲ್ಲ. ಆ ಬಳಿಕ ಅವರು ಆಸ್ಪತ್ರೆ ಸೇರಿದರು. ‘ಪ್ರತಾಪ್ ಆತ್ಮಹತ್ಯೆಗೆ ಪ್ರಯತ್ನಿಸಿದರು’ ಎನ್ನುವ ಸುದ್ದಿ ಎಲ್ಲ ಕಡೆ ಹರಿದಾಡಿತು.

ಫುಡ್ ಪಾಯ್ಸನ್ ವಿಚಾರ: ಪ್ರತಾಪ್ ಬಿಗ್ ಬಾಸ್ ಮನೆಯಲ್ಲಿ ಹೇಳಿದ್ದೊಂದು, ಹೊರಗೆ ಹೇಳ್ತಿರೋದೇ ಇನ್ನೊಂದು
ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on:Jan 31, 2024 | 8:14 AM

Share

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ (Drone Prathap) ಸಾಕಷ್ಟು ಸುದ್ದಿ ಆದರು. ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಇದಕ್ಕೆ ಅವರಿಗೆ ಸಾಕಷ್ಟು ಖುಷಿ ಇದೆ. ಬಿಗ್ ಬಾಸ್ ಮನೆಯಲ್ಲಿದ್ದಾಗ ಪ್ರತಾಪ್ ಅವರು ಆಸ್ಪತ್ರೆಗೂ ಹೋಗಿದ್ದರು. ಇದೆಲ್ಲವನ್ನು ಅವರು ಸಮರ್ಥವಾಗಿ ಎದುರಿಸಿದ್ದಾರೆ. ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಪ್ರತಾಪ್ ಕಡೆಯಿಂದ ಬಿಗ್ ಬಾಸ್ ಮನೆಯಲ್ಲೇ ಸ್ಪಷ್ಟನೆ ಸಿಕ್ಕಿತ್ತು. ಈಗ ಅವರು ಮಾಧ್ಯಮಗಳಲ್ಲಿ ಮತ್ತೊಮ್ಮೆ ಈ ಬಗ್ಗೆ ಮಾತನಾಡಿದ್ದಾರೆ. ಅಲ್ಲಿ ಕೊಟ್ಟ ಸ್ಪಷ್ಟನೆಗೂ ಈಗ ನೀಡುತ್ತಿರುವ ಸ್ಪಷ್ಟನೆಗೂ ಸಾಕಷ್ಟು ವ್ಯತ್ಯಾಸ ಇದೆ.

ಬಿಗ್ ಬಾಸ್ ಮನೆಗೆ ಗುರೂಜಿ ಒಬ್ಬರು ಬಂದಿದ್ದರು. ‘ನೀನು ಕುಟುಂಬದಿಂದ ದೂರವೇ ಇರಬೇಕು’ ಎಂದು ಪ್ರತಾಪ್​ಗೆ ಸೂಚಿಸಿದ್ದರು. ಇದಾದ ಬಳಿಕ ಪ್ರತಾಪ್ ಸೈಲೆಂಟ್ ಆದರು. ಅವರು ಎರಡು ದಿನ ಸರಿಯಾಗಿ ಊಟವನ್ನೇ ಮಾಡಿರಲಿಲ್ಲ. ಆ ಬಳಿಕ ಅವರು ಆಸ್ಪತ್ರೆ ಸೇರಿದರು. ‘ಪ್ರತಾಪ್ ಆತ್ಮಹತ್ಯೆಗೆ ಪ್ರಯತ್ನಿಸಿದರು’ ಎನ್ನುವ ಸುದ್ದಿ ಹರಿದಾಡಿತು. ಈ ವಿಚಾರವಾಗಿ ಪ್ರತಾಪ್ ದೊಡ್ಮನೆಯಲ್ಲೇ ಸ್ಪಷ್ಟನೆ ನೀಡಿದ್ದರು.

‘ಎರಡು ದಿನ ಉಪವಾಸ ಇದ್ದೆ. ಆಗ ಅಲ್ಲಿಯೇ ಇದ್ದ ಕೆಲವು ವಿಟಾಮಿನ್ ಮಾತ್ರೆಗಳನ್ನು ತಿಂದೆ. ಇದರಿಂದ ಹೊಟ್ಟೆ ಹಾಳಾಯಿತು’ ಎಂದು ಪ್ರತಾಪ್ ಹೇಳಿದ್ದರು. ಇದನ್ನು ಎಲ್ಲರೂ ನಂಬಿದ್ದರು. ಆದರೆ, ದೊಡ್ಮನೆಯಿಂದ ಹೊರ ಬಂದ ಬಳಿಕ ಪ್ರತಾಪ್ ಬೇರೆಯದೇ ಕಥೆ ಹೇಳಿದ್ದಾರೆ ಇದು ಸಾಕಷ್ಟು ಅನುಮಾನ ಹುಟ್ಟುಹಾಕಿದೆ.

ಇದನ್ನೂ ಓದಿ: ಡ್ರೋನ್ ಪ್ರತಾಪ್​ಗೆ ಸಿನಿಮಾ-ಧಾರಾವಾಹಿ ಆಫರ್​ಗಳು ಬಂದಿವೆಯೇ? ಒಪ್ಪಿಕೊಂಡಿದ್ದಾರಾ?

‘ಸರಿಯಾಗಿ ಊಟ ಮಾಡುತ್ತಾ ಇರಲಿಲ್ಲ. ರೆಫ್ರಿಜರೇಟರ್​ನಲ್ಲಿರುವ ಯಾವುದೋ ಹಳೆಯ ಊಟ ತಿಂದೆ. ಇದರಿಂದ ಫುಡ್ ಪಾಯ್ಸನ್ ಆಯ್ತು. ಏನೋ ಕೆಲವರು ಈ ರೀತಿ ಹೇಳಿದ್ದಾರೆ. ಇದೆಲ್ಲಾ ಕೇಳಿದಾಗ ನಗು ಬರುತ್ತದೆ’ ಎಂದಿದ್ದಾರೆ ಪ್ರತಾಪ್. ಅವರ ಎರಡು ರೀತಿಯಲ್ಲಿ ಉತ್ತರ ನೀಡಿದ್ದು ಏಕೆ ಎನ್ನುವ ಪ್ರಶ್ನೆ ಕಾಡಿದೆ.

ಬಿಗ್ ಬಾಸ್ ಮನೆಗೆ ಹೋಗುವಾಗ ಪ್ರತಾಪ್​ ಬಗ್ಗೆ ಬೇರೆಯದೇ ರೀತಿಯ ಅಭಿಪ್ರಾಯ ಇತ್ತು. ಅವರು ಹೊರ ಬಂದ ಬಳಿಕ ಅವರ ಮೇಲಿದ್ದ ಅಭಿಪ್ರಾಯ ಸಂಪೂರ್ಣವಾಗಿ ಬದಲಾಗಿದೆ. ಅವರ ಮೇಲೆ ಕೆಲವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:27 am, Wed, 31 January 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ