AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಡ್ ಪಾಯ್ಸನ್ ವಿಚಾರ: ಪ್ರತಾಪ್ ಬಿಗ್ ಬಾಸ್ ಮನೆಯಲ್ಲಿ ಹೇಳಿದ್ದೊಂದು, ಹೊರಗೆ ಹೇಳ್ತಿರೋದೇ ಇನ್ನೊಂದು

ಪ್ರತಾಪ್ ಎರಡು ದಿನ ಸರಿಯಾಗಿ ಊಟ ಮಾಡಿರಲಿಲ್ಲ. ಆ ಬಳಿಕ ಅವರು ಆಸ್ಪತ್ರೆ ಸೇರಿದರು. ‘ಪ್ರತಾಪ್ ಆತ್ಮಹತ್ಯೆಗೆ ಪ್ರಯತ್ನಿಸಿದರು’ ಎನ್ನುವ ಸುದ್ದಿ ಎಲ್ಲ ಕಡೆ ಹರಿದಾಡಿತು.

ಫುಡ್ ಪಾಯ್ಸನ್ ವಿಚಾರ: ಪ್ರತಾಪ್ ಬಿಗ್ ಬಾಸ್ ಮನೆಯಲ್ಲಿ ಹೇಳಿದ್ದೊಂದು, ಹೊರಗೆ ಹೇಳ್ತಿರೋದೇ ಇನ್ನೊಂದು
ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on:Jan 31, 2024 | 8:14 AM

Share

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ (Drone Prathap) ಸಾಕಷ್ಟು ಸುದ್ದಿ ಆದರು. ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಇದಕ್ಕೆ ಅವರಿಗೆ ಸಾಕಷ್ಟು ಖುಷಿ ಇದೆ. ಬಿಗ್ ಬಾಸ್ ಮನೆಯಲ್ಲಿದ್ದಾಗ ಪ್ರತಾಪ್ ಅವರು ಆಸ್ಪತ್ರೆಗೂ ಹೋಗಿದ್ದರು. ಇದೆಲ್ಲವನ್ನು ಅವರು ಸಮರ್ಥವಾಗಿ ಎದುರಿಸಿದ್ದಾರೆ. ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಪ್ರತಾಪ್ ಕಡೆಯಿಂದ ಬಿಗ್ ಬಾಸ್ ಮನೆಯಲ್ಲೇ ಸ್ಪಷ್ಟನೆ ಸಿಕ್ಕಿತ್ತು. ಈಗ ಅವರು ಮಾಧ್ಯಮಗಳಲ್ಲಿ ಮತ್ತೊಮ್ಮೆ ಈ ಬಗ್ಗೆ ಮಾತನಾಡಿದ್ದಾರೆ. ಅಲ್ಲಿ ಕೊಟ್ಟ ಸ್ಪಷ್ಟನೆಗೂ ಈಗ ನೀಡುತ್ತಿರುವ ಸ್ಪಷ್ಟನೆಗೂ ಸಾಕಷ್ಟು ವ್ಯತ್ಯಾಸ ಇದೆ.

ಬಿಗ್ ಬಾಸ್ ಮನೆಗೆ ಗುರೂಜಿ ಒಬ್ಬರು ಬಂದಿದ್ದರು. ‘ನೀನು ಕುಟುಂಬದಿಂದ ದೂರವೇ ಇರಬೇಕು’ ಎಂದು ಪ್ರತಾಪ್​ಗೆ ಸೂಚಿಸಿದ್ದರು. ಇದಾದ ಬಳಿಕ ಪ್ರತಾಪ್ ಸೈಲೆಂಟ್ ಆದರು. ಅವರು ಎರಡು ದಿನ ಸರಿಯಾಗಿ ಊಟವನ್ನೇ ಮಾಡಿರಲಿಲ್ಲ. ಆ ಬಳಿಕ ಅವರು ಆಸ್ಪತ್ರೆ ಸೇರಿದರು. ‘ಪ್ರತಾಪ್ ಆತ್ಮಹತ್ಯೆಗೆ ಪ್ರಯತ್ನಿಸಿದರು’ ಎನ್ನುವ ಸುದ್ದಿ ಹರಿದಾಡಿತು. ಈ ವಿಚಾರವಾಗಿ ಪ್ರತಾಪ್ ದೊಡ್ಮನೆಯಲ್ಲೇ ಸ್ಪಷ್ಟನೆ ನೀಡಿದ್ದರು.

‘ಎರಡು ದಿನ ಉಪವಾಸ ಇದ್ದೆ. ಆಗ ಅಲ್ಲಿಯೇ ಇದ್ದ ಕೆಲವು ವಿಟಾಮಿನ್ ಮಾತ್ರೆಗಳನ್ನು ತಿಂದೆ. ಇದರಿಂದ ಹೊಟ್ಟೆ ಹಾಳಾಯಿತು’ ಎಂದು ಪ್ರತಾಪ್ ಹೇಳಿದ್ದರು. ಇದನ್ನು ಎಲ್ಲರೂ ನಂಬಿದ್ದರು. ಆದರೆ, ದೊಡ್ಮನೆಯಿಂದ ಹೊರ ಬಂದ ಬಳಿಕ ಪ್ರತಾಪ್ ಬೇರೆಯದೇ ಕಥೆ ಹೇಳಿದ್ದಾರೆ ಇದು ಸಾಕಷ್ಟು ಅನುಮಾನ ಹುಟ್ಟುಹಾಕಿದೆ.

ಇದನ್ನೂ ಓದಿ: ಡ್ರೋನ್ ಪ್ರತಾಪ್​ಗೆ ಸಿನಿಮಾ-ಧಾರಾವಾಹಿ ಆಫರ್​ಗಳು ಬಂದಿವೆಯೇ? ಒಪ್ಪಿಕೊಂಡಿದ್ದಾರಾ?

‘ಸರಿಯಾಗಿ ಊಟ ಮಾಡುತ್ತಾ ಇರಲಿಲ್ಲ. ರೆಫ್ರಿಜರೇಟರ್​ನಲ್ಲಿರುವ ಯಾವುದೋ ಹಳೆಯ ಊಟ ತಿಂದೆ. ಇದರಿಂದ ಫುಡ್ ಪಾಯ್ಸನ್ ಆಯ್ತು. ಏನೋ ಕೆಲವರು ಈ ರೀತಿ ಹೇಳಿದ್ದಾರೆ. ಇದೆಲ್ಲಾ ಕೇಳಿದಾಗ ನಗು ಬರುತ್ತದೆ’ ಎಂದಿದ್ದಾರೆ ಪ್ರತಾಪ್. ಅವರ ಎರಡು ರೀತಿಯಲ್ಲಿ ಉತ್ತರ ನೀಡಿದ್ದು ಏಕೆ ಎನ್ನುವ ಪ್ರಶ್ನೆ ಕಾಡಿದೆ.

ಬಿಗ್ ಬಾಸ್ ಮನೆಗೆ ಹೋಗುವಾಗ ಪ್ರತಾಪ್​ ಬಗ್ಗೆ ಬೇರೆಯದೇ ರೀತಿಯ ಅಭಿಪ್ರಾಯ ಇತ್ತು. ಅವರು ಹೊರ ಬಂದ ಬಳಿಕ ಅವರ ಮೇಲಿದ್ದ ಅಭಿಪ್ರಾಯ ಸಂಪೂರ್ಣವಾಗಿ ಬದಲಾಗಿದೆ. ಅವರ ಮೇಲೆ ಕೆಲವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:27 am, Wed, 31 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು