AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು ಹಿಡಿದ ಪ್ರಕರಣ: ವಿನಯ್, ರಜತ್​ಗೆ ಜಾಮೀನು ಮಂಜೂರು

Vinay and Rajath: ವಿನಯ್ ಹಾಗೂ ರಜತ್ ಅವರು ಕೆಲ ದಿನಗಳ ಹಿಂದೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ವಿಡಿಯೋನಲ್ಲಿ ವಿನಯ್ ಮತ್ತು ರಜತ್ ಇಬ್ಬರೂ ಸಹ ಮಚ್ಚೊಂದನ್ನು ಹಿಡಿದುಕೊಂಡಿದ್ದರು. ಇದೇ ಕಾರಣಕ್ಕೆ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ ಇಬ್ಬರನ್ನೂ ಬಂಧಿಸಿದ್ದರು. ಇದೀಗ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿದೆ.

ಮಚ್ಚು ಹಿಡಿದ ಪ್ರಕರಣ: ವಿನಯ್, ರಜತ್​ಗೆ ಜಾಮೀನು ಮಂಜೂರು
Rajath Kishan, Vinay Gowda
ಮಂಜುನಾಥ ಸಿ.
|

Updated on:Mar 28, 2025 | 4:39 PM

Share

ರೀಲ್ಸ್ ಮಾಡುವಾಗ ಮಚ್ಚು ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್​ಬಾಸ್ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ಅವರುಗಳು ಜಾಮೀನು ಮಂಜೂರಾಗಿದೆ. ವಿನಯ್ ಹಾಗೂ ರಜತ್ ಅವರು ಕೆಲ ದಿನಗಳ ಹಿಂದೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ವಿಡಿಯೋನಲ್ಲಿ ವಿನಯ್ ಮತ್ತು ರಜತ್ ಇಬ್ಬರೂ ಸಹ ಮಚ್ಚೊಂದನ್ನು ಹಿಡಿದುಕೊಂಡಿದ್ದರು. ಇದೇ ಕಾರಣಕ್ಕೆ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ ಸಾಕ್ಷ್ಯ ನಾಶ ಪ್ರಕರಣದಡಿ ಇಬ್ಬರನ್ನೂ ಬಂಧಿಸಲಾಗಿತ್ತು. ಇದೀಗ ಇಬ್ಬರಿಗೂ ಸಹ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

24ನೇ ಎಸಿಜೆಎಂ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಿದೆ. ಇಬ್ಬರಿಗೂ ಸಹ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, 10 ಸಾವಿರ ರೂಪಾಯಿ ಶೂರಿಟಿ ನೀಡುವ ಷರತ್ತನ್ನು ನ್ಯಾಯಾಲಯ ವಿಧಿಸಿದೆ. ಇಂದು ನಡೆದ ವಿಚಾರಣೆಯಲ್ಲಿ ಪೊಲೀಸರ ಪರ ವಾದ ಮಾಡಿದ ವಕೀಲ ಚಂದ್ರೇಗೌಡ ಅವರು, ಆರೋಪಿಗಳು ಸಾಕ್ಷ್ಯನಾಶ ಮಾಡಿದ್ದು ಅವರಿಗೆ ಜಾಮೀನು ನೀಡಬಾರದು ಎಂದು ವಾದಿಸಿದರು.

ಆದರೆ ಆರೋಪಿಗಳ ಪರ ವಾದ ಮಂಡಿಸಿದ ವಕೀಲ, ಸರ್ಚ್ ವಾರಂಟ್ ತೆಗೆದುಕೊಂಡು ಮನೆಯನ್ನೆಲ್ಲಾ ಸರ್ಚ್ ಮಾಡಿದ್ದಾರೆ, ಮುಂದೆ ಏನೇ ಇದ್ದರೂ ಸಹಕಾರ ನೀಡ್ತಾರೆ. ವಿನಯ್ ಗೆ ಭಾನುವಾರ ಶೂಟಿಂಗ್ ಸಹ ಇದೆ. ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಅವರು ಚಿತ್ರೀಕರಣದಲ್ಲಿ ಭಾಗಿ ಆಗಬೇಕಾದ ಅವಶ್ಯಕತೆ ಇದೆ. ಅವರಿಗೆ ಕಣ್ಣಿನ ಸಮಸ್ಯೆಯೂ ಇದೆ. ಹೀಗಾಗಿ ಬೇಲ್ ನೀಡಬೇಕೆಂದು ವಿನಯ್ ಪರ ವಕೀಲರ ಮನವಿ ಮಾಡಿದರು.

ಇದನ್ನೂ ಓದಿ:ಮಚ್ಚು ಹಿಡಿದ ಪ್ರಕರಣ: 3 ದಿನ ಪೊಲೀಸ್ ಕಸ್ಟಡಿಗೆ ವಿನಯ್ ಗೌಡ, ರಜತ್ ಕಿಶನ್

ಈ ವೇಳೆ ನ್ಯಾಯಾಧೀಶರು, ಶೂಟಿಂಗ್​ನಲ್ಲಿ ಮಚ್ಚು ಹಿಡಿದರೆ ಏನು ಮಾಡೋದು ಎಂದು ಕೇಳಿದರು. ಅದಕ್ಕೆ ವಕೀಲರು, ಕನಸಿನಲ್ಲಿಯೂ ಹಾಗೆ ಮಾಡೊಲ್ಲ, ಜಾಮೀನು ಮಂಜೂರು ಮಾಡಿ ಎಂದು ಮನವಿ ಮಾಡಿದರು. ಪೊಲೀಸರು ಸಹ ತಮಗೆ ವಿನಯ್ ಮತ್ತು ರಜತ್ ಅವರ ಕಸ್ಟಡಿಯ ಅವಶ್ಯಕತೆ ಇಲ್ಲವೆಂದು ಹೇಳಿದರು. ಹಾಗಾಗಿ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

ಪೊಲೀಸರ ಕಸ್ಟಡಿಯಲ್ಲಿದ್ದ ವಿನಯ್ ಮತ್ತು ರಜತ್ ಅವರನ್ನು ಇದೀಗ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗುತ್ತದೆ. ಇಂದೇ ಷರತ್ತುಗಳನ್ನು ಪೂರೈಸಿ, ಜಾಮೀನು ಕಾಪಿಯನ್ನು ಸಂಜೆ ವೇಳೆಗೆ ಜೈಲಿಗೆ ಕೊಂಡೊಯ್ದರೆ ಇಂದೇ ವಿನಯ್ ಹಾಗೂ ರಜತ್​ ಬಿಡುಗಡೆ ಆಗಲಿದೆ. ಇಲ್ಲವಾದರೆ ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆದು ನಾಳೆ (ಮಾರ್ಚ್ 29) ಬಿಡುಗಡೆ ಆಗಬೇಕಾಗುತ್ತದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Fri, 28 March 25

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ