AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?

‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ರಾಜೀವ್​ ಪಾತ್ರದ ಮೂಲಕ ಗುರುತಿಸಿಕೊಂಡ ಗಗನ್​ ಚಿನ್ನಪ್ಪ ಅವರು ಮೂರನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ.

ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?
ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?
TV9 Web
| Edited By: |

Updated on: Aug 15, 2021 | 8:33 PM

Share

ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಅನೇಕ ಅಭಿಮಾನಿಗಳು ಪ್ರಯತ್ನಪಡುತ್ತಿರುತ್ತಾರೆ. ಆದರೆ, ಬಹುತೇಕ ಸೆಲೆಬ್ರಿಟಿಗಳು ಇದಕ್ಕೆ ಆಸ್ಪದ ಕೊಡುವುದಿಲ್ಲ. ಆದರೆ, ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ಮಾಹಿತಿ ಹಂಚಿಕೊಳ್ಳೋಕೆ ಬಿಗ್​ ಬಾಸ್ ಮಿನಿ ಸೀಸನ್​ ಆರಂಭಗೊಂಡಿದೆ. ತೆರೆಮೇಲೆ ಮಿಂಚುತ್ತಿದ್ದ ಕಲರ್ಸ್​ ಕನ್ನಡ ಕಿರುತೆರೆ ಕಲಾವಿದರು ಒಂದು ಕಡೆ ಸೇರಿದ್ದು, ವೀಕ್ಷಕರಿಗೆ ಭರಪೂರ ಮನರಂಜನೆ ಸಿಗುತ್ತಿದೆ.

‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ರಾಜೀವ್​ ಪಾತ್ರದ ಮೂಲಕ ಗುರುತಿಸಿಕೊಂಡ ಗಗನ್​ ಚಿನ್ನಪ್ಪ ಅವರು ಮೂರನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ಪ್ರವೇಶಿಸಿರುವುದಕ್ಕೆ ಅವರು ಸಖತ್​ ಥ್ರಿಲ್​ ಆಗಿದ್ದಾರೆ. ಬಿಗ್​ ಬಾಸ್​ ಮನೆ ಪ್ರವೇಶಿಸುತ್ತಿದ್ದಂತೆ ಅವರಿಗೆ ಎದುರಾದ ಅಕುಲ್​ ಬಾಲಾಜಿ ಅವರು ನಾನಾ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ಕೆಲ ವೈಯಕ್ತಿಕ ವಿಚಾರಗಳನ್ನು ಗಗನ್​ ಚಿನ್ನಪ್ಪ ಹಂಚಿಕೊಂಡಿದ್ದಾರೆ.

ನಿಮಗಿಂತ ವಯಸ್ಸಿನಲ್ಲಿ ದೊಡ್ಡವರ ಜತೆ ನೀವು ಹೆಚ್ಚು ಬೆರೆಯುತ್ತೀರಂತೆ ಹೌದಾ? ಎಂದು ಪ್ರಶ್ನೆ ಮಾಡಲಾಯಿತು. ಇದನ್ನು ಗಗನ್ ಒಪ್ಪಿಕೊಂಡಿದ್ದಾರೆ. ‘ಅಪ್ಪನ ಫ್ರೆಂಡ್ಸ್​ ನನ್ನ ತಂದೆ ಜತೆ ಬೆರೆಯೋದು ಕಡಿಮೆ. ಅವರು ನನ್ನ ಜತೆ ಸಮಯ ಕಳೆದಿದ್ದೇ ಹೆಚ್ಚು. ನಾವೆಲ್ಲರೂ ಒಟ್ಟಿಗೆ ಕೂತು ಕುಡಿತೀವಿ’ ಎಂದರು ಅವರು.

ಗಗನ್​ಗೆ ಸೂಪರ್​ ಸೀನಿಯರ್​ಮೇಲೆ ಕ್ರಶ್​ ಆಗಿತ್ತು ಎನ್ನುವ ವಿಚಾರ ಕೂಡ ಬಯಲಾಗಿದೆ. ‘ಪದವಿ ಸೇರಿದ್ದೆ. ಆ ಹುಡುಗಿ ಫೈನಲ್​ ಇಯರ್​ ಅಲ್ಲಿದ್ದಳು. ಅವಳ ಮೇಲೆ ಕ್ರಶ್​ ಆಗಿತ್ತು. ಅನೇಕ ಬಾರಿ ನಾವು ಒಟ್ಟಿಗೆ ಕಾಣಿಸಿಕೊಂಡಿದ್ವಿ’ ಎಂದಿದ್ದಾರೆ ಗಗನ್.

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಮಿನಿ ಬಿಗ್​ ಬಾಸ್​ ಆರಂಭವಾಗಿದೆ. ಕಲರ್ಸ್​ ಕನ್ನಡ ವಾಹಿನಿ ಸೀರಿಯಲ್​ನಲ್ಲಿ ನಟಿಸುತ್ತಿರುವ ಕಲಾವಿದರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿರೋದು ವಿಶೇಷ. ಕೊನೆಯ ಎಪಿಸೋಡ್​ಅನ್ನು ಕಿಚ್ಚ ಸುದೀಪ್​ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮಿನಿ ಸೀಸನ್​ ನಿರೂಪಣೆಗೆ ಸುದೀಪ್​ ಬರೋದು ಪಕ್ಕಾ; ಆದರೆ ಯಾವಾಗ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್