AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?

‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ರಾಜೀವ್​ ಪಾತ್ರದ ಮೂಲಕ ಗುರುತಿಸಿಕೊಂಡ ಗಗನ್​ ಚಿನ್ನಪ್ಪ ಅವರು ಮೂರನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ.

ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?
ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?
TV9 Web
| Edited By: |

Updated on: Aug 15, 2021 | 8:33 PM

Share

ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಅನೇಕ ಅಭಿಮಾನಿಗಳು ಪ್ರಯತ್ನಪಡುತ್ತಿರುತ್ತಾರೆ. ಆದರೆ, ಬಹುತೇಕ ಸೆಲೆಬ್ರಿಟಿಗಳು ಇದಕ್ಕೆ ಆಸ್ಪದ ಕೊಡುವುದಿಲ್ಲ. ಆದರೆ, ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ಮಾಹಿತಿ ಹಂಚಿಕೊಳ್ಳೋಕೆ ಬಿಗ್​ ಬಾಸ್ ಮಿನಿ ಸೀಸನ್​ ಆರಂಭಗೊಂಡಿದೆ. ತೆರೆಮೇಲೆ ಮಿಂಚುತ್ತಿದ್ದ ಕಲರ್ಸ್​ ಕನ್ನಡ ಕಿರುತೆರೆ ಕಲಾವಿದರು ಒಂದು ಕಡೆ ಸೇರಿದ್ದು, ವೀಕ್ಷಕರಿಗೆ ಭರಪೂರ ಮನರಂಜನೆ ಸಿಗುತ್ತಿದೆ.

‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ರಾಜೀವ್​ ಪಾತ್ರದ ಮೂಲಕ ಗುರುತಿಸಿಕೊಂಡ ಗಗನ್​ ಚಿನ್ನಪ್ಪ ಅವರು ಮೂರನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ಪ್ರವೇಶಿಸಿರುವುದಕ್ಕೆ ಅವರು ಸಖತ್​ ಥ್ರಿಲ್​ ಆಗಿದ್ದಾರೆ. ಬಿಗ್​ ಬಾಸ್​ ಮನೆ ಪ್ರವೇಶಿಸುತ್ತಿದ್ದಂತೆ ಅವರಿಗೆ ಎದುರಾದ ಅಕುಲ್​ ಬಾಲಾಜಿ ಅವರು ನಾನಾ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ಕೆಲ ವೈಯಕ್ತಿಕ ವಿಚಾರಗಳನ್ನು ಗಗನ್​ ಚಿನ್ನಪ್ಪ ಹಂಚಿಕೊಂಡಿದ್ದಾರೆ.

ನಿಮಗಿಂತ ವಯಸ್ಸಿನಲ್ಲಿ ದೊಡ್ಡವರ ಜತೆ ನೀವು ಹೆಚ್ಚು ಬೆರೆಯುತ್ತೀರಂತೆ ಹೌದಾ? ಎಂದು ಪ್ರಶ್ನೆ ಮಾಡಲಾಯಿತು. ಇದನ್ನು ಗಗನ್ ಒಪ್ಪಿಕೊಂಡಿದ್ದಾರೆ. ‘ಅಪ್ಪನ ಫ್ರೆಂಡ್ಸ್​ ನನ್ನ ತಂದೆ ಜತೆ ಬೆರೆಯೋದು ಕಡಿಮೆ. ಅವರು ನನ್ನ ಜತೆ ಸಮಯ ಕಳೆದಿದ್ದೇ ಹೆಚ್ಚು. ನಾವೆಲ್ಲರೂ ಒಟ್ಟಿಗೆ ಕೂತು ಕುಡಿತೀವಿ’ ಎಂದರು ಅವರು.

ಗಗನ್​ಗೆ ಸೂಪರ್​ ಸೀನಿಯರ್​ಮೇಲೆ ಕ್ರಶ್​ ಆಗಿತ್ತು ಎನ್ನುವ ವಿಚಾರ ಕೂಡ ಬಯಲಾಗಿದೆ. ‘ಪದವಿ ಸೇರಿದ್ದೆ. ಆ ಹುಡುಗಿ ಫೈನಲ್​ ಇಯರ್​ ಅಲ್ಲಿದ್ದಳು. ಅವಳ ಮೇಲೆ ಕ್ರಶ್​ ಆಗಿತ್ತು. ಅನೇಕ ಬಾರಿ ನಾವು ಒಟ್ಟಿಗೆ ಕಾಣಿಸಿಕೊಂಡಿದ್ವಿ’ ಎಂದಿದ್ದಾರೆ ಗಗನ್.

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಮಿನಿ ಬಿಗ್​ ಬಾಸ್​ ಆರಂಭವಾಗಿದೆ. ಕಲರ್ಸ್​ ಕನ್ನಡ ವಾಹಿನಿ ಸೀರಿಯಲ್​ನಲ್ಲಿ ನಟಿಸುತ್ತಿರುವ ಕಲಾವಿದರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿರೋದು ವಿಶೇಷ. ಕೊನೆಯ ಎಪಿಸೋಡ್​ಅನ್ನು ಕಿಚ್ಚ ಸುದೀಪ್​ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮಿನಿ ಸೀಸನ್​ ನಿರೂಪಣೆಗೆ ಸುದೀಪ್​ ಬರೋದು ಪಕ್ಕಾ; ಆದರೆ ಯಾವಾಗ?

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್