ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?

‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ರಾಜೀವ್​ ಪಾತ್ರದ ಮೂಲಕ ಗುರುತಿಸಿಕೊಂಡ ಗಗನ್​ ಚಿನ್ನಪ್ಪ ಅವರು ಮೂರನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ.

ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?
ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 15, 2021 | 8:33 PM

ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಅನೇಕ ಅಭಿಮಾನಿಗಳು ಪ್ರಯತ್ನಪಡುತ್ತಿರುತ್ತಾರೆ. ಆದರೆ, ಬಹುತೇಕ ಸೆಲೆಬ್ರಿಟಿಗಳು ಇದಕ್ಕೆ ಆಸ್ಪದ ಕೊಡುವುದಿಲ್ಲ. ಆದರೆ, ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ಮಾಹಿತಿ ಹಂಚಿಕೊಳ್ಳೋಕೆ ಬಿಗ್​ ಬಾಸ್ ಮಿನಿ ಸೀಸನ್​ ಆರಂಭಗೊಂಡಿದೆ. ತೆರೆಮೇಲೆ ಮಿಂಚುತ್ತಿದ್ದ ಕಲರ್ಸ್​ ಕನ್ನಡ ಕಿರುತೆರೆ ಕಲಾವಿದರು ಒಂದು ಕಡೆ ಸೇರಿದ್ದು, ವೀಕ್ಷಕರಿಗೆ ಭರಪೂರ ಮನರಂಜನೆ ಸಿಗುತ್ತಿದೆ.

‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ರಾಜೀವ್​ ಪಾತ್ರದ ಮೂಲಕ ಗುರುತಿಸಿಕೊಂಡ ಗಗನ್​ ಚಿನ್ನಪ್ಪ ಅವರು ಮೂರನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ಪ್ರವೇಶಿಸಿರುವುದಕ್ಕೆ ಅವರು ಸಖತ್​ ಥ್ರಿಲ್​ ಆಗಿದ್ದಾರೆ. ಬಿಗ್​ ಬಾಸ್​ ಮನೆ ಪ್ರವೇಶಿಸುತ್ತಿದ್ದಂತೆ ಅವರಿಗೆ ಎದುರಾದ ಅಕುಲ್​ ಬಾಲಾಜಿ ಅವರು ನಾನಾ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ಕೆಲ ವೈಯಕ್ತಿಕ ವಿಚಾರಗಳನ್ನು ಗಗನ್​ ಚಿನ್ನಪ್ಪ ಹಂಚಿಕೊಂಡಿದ್ದಾರೆ.

ನಿಮಗಿಂತ ವಯಸ್ಸಿನಲ್ಲಿ ದೊಡ್ಡವರ ಜತೆ ನೀವು ಹೆಚ್ಚು ಬೆರೆಯುತ್ತೀರಂತೆ ಹೌದಾ? ಎಂದು ಪ್ರಶ್ನೆ ಮಾಡಲಾಯಿತು. ಇದನ್ನು ಗಗನ್ ಒಪ್ಪಿಕೊಂಡಿದ್ದಾರೆ. ‘ಅಪ್ಪನ ಫ್ರೆಂಡ್ಸ್​ ನನ್ನ ತಂದೆ ಜತೆ ಬೆರೆಯೋದು ಕಡಿಮೆ. ಅವರು ನನ್ನ ಜತೆ ಸಮಯ ಕಳೆದಿದ್ದೇ ಹೆಚ್ಚು. ನಾವೆಲ್ಲರೂ ಒಟ್ಟಿಗೆ ಕೂತು ಕುಡಿತೀವಿ’ ಎಂದರು ಅವರು.

ಗಗನ್​ಗೆ ಸೂಪರ್​ ಸೀನಿಯರ್​ಮೇಲೆ ಕ್ರಶ್​ ಆಗಿತ್ತು ಎನ್ನುವ ವಿಚಾರ ಕೂಡ ಬಯಲಾಗಿದೆ. ‘ಪದವಿ ಸೇರಿದ್ದೆ. ಆ ಹುಡುಗಿ ಫೈನಲ್​ ಇಯರ್​ ಅಲ್ಲಿದ್ದಳು. ಅವಳ ಮೇಲೆ ಕ್ರಶ್​ ಆಗಿತ್ತು. ಅನೇಕ ಬಾರಿ ನಾವು ಒಟ್ಟಿಗೆ ಕಾಣಿಸಿಕೊಂಡಿದ್ವಿ’ ಎಂದಿದ್ದಾರೆ ಗಗನ್.

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಮಿನಿ ಬಿಗ್​ ಬಾಸ್​ ಆರಂಭವಾಗಿದೆ. ಕಲರ್ಸ್​ ಕನ್ನಡ ವಾಹಿನಿ ಸೀರಿಯಲ್​ನಲ್ಲಿ ನಟಿಸುತ್ತಿರುವ ಕಲಾವಿದರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿರೋದು ವಿಶೇಷ. ಕೊನೆಯ ಎಪಿಸೋಡ್​ಅನ್ನು ಕಿಚ್ಚ ಸುದೀಪ್​ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮಿನಿ ಸೀಸನ್​ ನಿರೂಪಣೆಗೆ ಸುದೀಪ್​ ಬರೋದು ಪಕ್ಕಾ; ಆದರೆ ಯಾವಾಗ?

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ