AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಟ್ಟಿಮೇಳ’ ಧಾರಾವಾಹಿಯ ಅಂತಿಮ ಸಂಚಿಕೆಯ ಪ್ರಚಾರಕ್ಕೆ ಜೀ ಕನ್ನಡ ಸಿದ್ಧತೆ

ಕಳೆದ ಕೆಲ ತಿಂಗಳಿಂದ ‘ಗಟ್ಟಿಮೇಳ’ ಧಾರಾವಾಹಿ ಪೂರ್ಣಗೊಳ್ಳುವ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು. ಈಗ ಕಥೆ ಅಂತಿಮ ಹಂತ ತಲುಪಿದೆ. ಈ ಜಾಗದಲ್ಲಿ ಹೊಸ ಧಾರಾವಾಹಿ ಪ್ರಸಾರ ಕಾಣಲಿದೆ.

‘ಗಟ್ಟಿಮೇಳ’ ಧಾರಾವಾಹಿಯ ಅಂತಿಮ ಸಂಚಿಕೆಯ ಪ್ರಚಾರಕ್ಕೆ ಜೀ ಕನ್ನಡ ಸಿದ್ಧತೆ
ನಿಶಾ
ರಾಜೇಶ್ ದುಗ್ಗುಮನೆ
|

Updated on: Dec 28, 2023 | 12:26 PM

Share

‘ಗಟ್ಟಿಮೇಳ’ ಧಾರಾವಾಹಿ (Gattimela Serial) ಸಾವಿರಾರು ಸಂಚಿಕೆಗಳನ್ನು ಪೂರ್ಣಗೊಳಿಸಿದೆ. ಆದಾಗ್ಯೂ ಟಿಆರ್​ಪಿಯಲ್ಲಿ ಈ ಧಾರಾವಾಹಿ ಹಿಂದೆ ಬಿದ್ದಿಲ್ಲ. ಟಿಆರ್​ಪಿ ಲಿಸ್ಟ್​​ನಲ್ಲಿ ಎರಡು ಅಥವಾ ಮೂರನೇ ಸ್ಥಾನದಲ್ಲಿ ಈ ಧಾರಾವಾಹಿ ಇರುತ್ತಿತ್ತು. ಆರಂಭ ಆದಮೇಲೆ ಕೊನೆ ಆಗಲೇಬೇಕು. ಅದೇ ರೀತಿ 2019ರಲ್ಲಿ ಪ್ರಸಾರ ಆರಂಭಿಸಿದ ‘ಗಟ್ಟಿಮೇಳ’ ಧಾರಾವಾಹಿಯೂ ಕೊನೆ ಆಗುತ್ತಿದೆ.  ಜನವರಿ 1ರಿಂದ ಅಂತಿಮ ಸಂಚಿಕೆಗಳ ಪ್ರಸಾರ ಆರಂಭ ಆಗಲಿದೆ. ಜನವರಿ 5ರಂದು (ಶುಕ್ರವಾರ) ಧಾರಾವಾಹಿ ಕೊನೆಗೊಳ್ಳಲಿದೆ.

ರಕ್ಷ್ ಹಾಗೂ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಜನರಿಗೆ ಸಾಕಷ್ಟು ಇಷ್ಟ ಆಗಿದೆ. ಇದು ಅನೇಕರ ಫೇವರಿಟ್ ಧಾರಾವಾಹಿ ಆಗಿದೆ. ಕಳೆದ ಕೆಲ ತಿಂಗಳಿಂದ ಧಾರಾವಾಹಿ ಪೂರ್ಣಗೊಳ್ಳುವ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು. ಈಗ ಕಥೆ ಅಂತಿಮ ಹಂತ ತಲುಪಿದೆ. ಈ ಜಾಗದಲ್ಲಿ ಹೊಸ ಧಾರಾವಾಹಿ ಪ್ರಸಾರ ಕಾಣಲಿದೆ. ಈ ವಿಚಾರ ಕೇಳಿ ‘ಗಟ್ಟಿಮೇಳ’ ಧಾರಾವಾಹಿ ವೀಕ್ಷರಿಗೆ ಬೇಸರ ಆಗಿದೆ.

2019ರ ಮಾರ್ಚ್ ತಿಂಗಳಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಪ್ರಸಾರ ಆರಂಭಿಸಿತು. ಈ ಧಾರಾವಾಹಿ 1200 ಎಪಿಸೋಡ್ ಪೂರ್ಣಗೊಳಿಸಿದೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈಗ ಧಾರಾವಾಹಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ನಾಲ್ಕು ಮುಕ್ಕಾಲು ವರ್ಷಗಳ ಕಾಲ ಈ ಧಾರಾವಾಹಿ ಪ್ರಸಾರ ಕಂಡಿದೆ.

ಇದನ್ನೂ ಓದಿ: Exclusive: ಶೀಘ್ರವೇ ಪೂರ್ಣಗೊಳ್ಳಲಿದೆ ‘ಗಟ್ಟಿಮೇಳ’; ಹೊಸ ಧಾರಾವಾಹಿ ಶೂಟ್​ಗೆ ನಡೆದಿದೆ ಸಿದ್ಧತೆ

‘ಗಟ್ಟಿಮೇಳ’ ಧಾರಾವಾಹಿ ನಟ ರಕ್ಷ್ ರಾಮ್ ಅವರು ಹಿರಿತೆರೆಗೆ ಕಾಲಿಡುತ್ತಿದ್ದಾರೆ. ಅವರು ‘ಬರ್ಮ’ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ‘ಬಹದ್ದೂರ್’, ‘ಭರ್ಜರಿ’ ನಿರ್ದೇಶಕ ಚೇತನ್ ಕುಮಾರ್ ಅವರು ‘ಬರ್ಮ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಈಗಲೇ ನಿರೀಕ್ಷೆ ಸೃಷ್ಟಿ ಆಗಿದೆ. ‘ಗಟ್ಟಿಮೇಳ’ ಬಳಿಕ ಈ ಸಿನಿಮಾದ ಕೆಲಸದಲ್ಲಿ ಅವರು ಬ್ಯುಸಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ