AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಟ್ಟಿಮೇಳ’ ಧಾರಾವಾಹಿಯ ಅಂತಿಮ ಸಂಚಿಕೆಯ ಪ್ರಚಾರಕ್ಕೆ ಜೀ ಕನ್ನಡ ಸಿದ್ಧತೆ

ಕಳೆದ ಕೆಲ ತಿಂಗಳಿಂದ ‘ಗಟ್ಟಿಮೇಳ’ ಧಾರಾವಾಹಿ ಪೂರ್ಣಗೊಳ್ಳುವ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು. ಈಗ ಕಥೆ ಅಂತಿಮ ಹಂತ ತಲುಪಿದೆ. ಈ ಜಾಗದಲ್ಲಿ ಹೊಸ ಧಾರಾವಾಹಿ ಪ್ರಸಾರ ಕಾಣಲಿದೆ.

‘ಗಟ್ಟಿಮೇಳ’ ಧಾರಾವಾಹಿಯ ಅಂತಿಮ ಸಂಚಿಕೆಯ ಪ್ರಚಾರಕ್ಕೆ ಜೀ ಕನ್ನಡ ಸಿದ್ಧತೆ
ನಿಶಾ
ರಾಜೇಶ್ ದುಗ್ಗುಮನೆ
|

Updated on: Dec 28, 2023 | 12:26 PM

Share

‘ಗಟ್ಟಿಮೇಳ’ ಧಾರಾವಾಹಿ (Gattimela Serial) ಸಾವಿರಾರು ಸಂಚಿಕೆಗಳನ್ನು ಪೂರ್ಣಗೊಳಿಸಿದೆ. ಆದಾಗ್ಯೂ ಟಿಆರ್​ಪಿಯಲ್ಲಿ ಈ ಧಾರಾವಾಹಿ ಹಿಂದೆ ಬಿದ್ದಿಲ್ಲ. ಟಿಆರ್​ಪಿ ಲಿಸ್ಟ್​​ನಲ್ಲಿ ಎರಡು ಅಥವಾ ಮೂರನೇ ಸ್ಥಾನದಲ್ಲಿ ಈ ಧಾರಾವಾಹಿ ಇರುತ್ತಿತ್ತು. ಆರಂಭ ಆದಮೇಲೆ ಕೊನೆ ಆಗಲೇಬೇಕು. ಅದೇ ರೀತಿ 2019ರಲ್ಲಿ ಪ್ರಸಾರ ಆರಂಭಿಸಿದ ‘ಗಟ್ಟಿಮೇಳ’ ಧಾರಾವಾಹಿಯೂ ಕೊನೆ ಆಗುತ್ತಿದೆ.  ಜನವರಿ 1ರಿಂದ ಅಂತಿಮ ಸಂಚಿಕೆಗಳ ಪ್ರಸಾರ ಆರಂಭ ಆಗಲಿದೆ. ಜನವರಿ 5ರಂದು (ಶುಕ್ರವಾರ) ಧಾರಾವಾಹಿ ಕೊನೆಗೊಳ್ಳಲಿದೆ.

ರಕ್ಷ್ ಹಾಗೂ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಜನರಿಗೆ ಸಾಕಷ್ಟು ಇಷ್ಟ ಆಗಿದೆ. ಇದು ಅನೇಕರ ಫೇವರಿಟ್ ಧಾರಾವಾಹಿ ಆಗಿದೆ. ಕಳೆದ ಕೆಲ ತಿಂಗಳಿಂದ ಧಾರಾವಾಹಿ ಪೂರ್ಣಗೊಳ್ಳುವ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು. ಈಗ ಕಥೆ ಅಂತಿಮ ಹಂತ ತಲುಪಿದೆ. ಈ ಜಾಗದಲ್ಲಿ ಹೊಸ ಧಾರಾವಾಹಿ ಪ್ರಸಾರ ಕಾಣಲಿದೆ. ಈ ವಿಚಾರ ಕೇಳಿ ‘ಗಟ್ಟಿಮೇಳ’ ಧಾರಾವಾಹಿ ವೀಕ್ಷರಿಗೆ ಬೇಸರ ಆಗಿದೆ.

2019ರ ಮಾರ್ಚ್ ತಿಂಗಳಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಪ್ರಸಾರ ಆರಂಭಿಸಿತು. ಈ ಧಾರಾವಾಹಿ 1200 ಎಪಿಸೋಡ್ ಪೂರ್ಣಗೊಳಿಸಿದೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈಗ ಧಾರಾವಾಹಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ನಾಲ್ಕು ಮುಕ್ಕಾಲು ವರ್ಷಗಳ ಕಾಲ ಈ ಧಾರಾವಾಹಿ ಪ್ರಸಾರ ಕಂಡಿದೆ.

ಇದನ್ನೂ ಓದಿ: Exclusive: ಶೀಘ್ರವೇ ಪೂರ್ಣಗೊಳ್ಳಲಿದೆ ‘ಗಟ್ಟಿಮೇಳ’; ಹೊಸ ಧಾರಾವಾಹಿ ಶೂಟ್​ಗೆ ನಡೆದಿದೆ ಸಿದ್ಧತೆ

‘ಗಟ್ಟಿಮೇಳ’ ಧಾರಾವಾಹಿ ನಟ ರಕ್ಷ್ ರಾಮ್ ಅವರು ಹಿರಿತೆರೆಗೆ ಕಾಲಿಡುತ್ತಿದ್ದಾರೆ. ಅವರು ‘ಬರ್ಮ’ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ‘ಬಹದ್ದೂರ್’, ‘ಭರ್ಜರಿ’ ನಿರ್ದೇಶಕ ಚೇತನ್ ಕುಮಾರ್ ಅವರು ‘ಬರ್ಮ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಈಗಲೇ ನಿರೀಕ್ಷೆ ಸೃಷ್ಟಿ ಆಗಿದೆ. ‘ಗಟ್ಟಿಮೇಳ’ ಬಳಿಕ ಈ ಸಿನಿಮಾದ ಕೆಲಸದಲ್ಲಿ ಅವರು ಬ್ಯುಸಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ