AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಟ್ಟಿಮೇಳ’ ಧಾರಾವಾಹಿಯ ಅಂತಿಮ ಸಂಚಿಕೆಯ ಪ್ರಚಾರಕ್ಕೆ ಜೀ ಕನ್ನಡ ಸಿದ್ಧತೆ

ಕಳೆದ ಕೆಲ ತಿಂಗಳಿಂದ ‘ಗಟ್ಟಿಮೇಳ’ ಧಾರಾವಾಹಿ ಪೂರ್ಣಗೊಳ್ಳುವ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು. ಈಗ ಕಥೆ ಅಂತಿಮ ಹಂತ ತಲುಪಿದೆ. ಈ ಜಾಗದಲ್ಲಿ ಹೊಸ ಧಾರಾವಾಹಿ ಪ್ರಸಾರ ಕಾಣಲಿದೆ.

‘ಗಟ್ಟಿಮೇಳ’ ಧಾರಾವಾಹಿಯ ಅಂತಿಮ ಸಂಚಿಕೆಯ ಪ್ರಚಾರಕ್ಕೆ ಜೀ ಕನ್ನಡ ಸಿದ್ಧತೆ
ನಿಶಾ
ರಾಜೇಶ್ ದುಗ್ಗುಮನೆ
|

Updated on: Dec 28, 2023 | 12:26 PM

Share

‘ಗಟ್ಟಿಮೇಳ’ ಧಾರಾವಾಹಿ (Gattimela Serial) ಸಾವಿರಾರು ಸಂಚಿಕೆಗಳನ್ನು ಪೂರ್ಣಗೊಳಿಸಿದೆ. ಆದಾಗ್ಯೂ ಟಿಆರ್​ಪಿಯಲ್ಲಿ ಈ ಧಾರಾವಾಹಿ ಹಿಂದೆ ಬಿದ್ದಿಲ್ಲ. ಟಿಆರ್​ಪಿ ಲಿಸ್ಟ್​​ನಲ್ಲಿ ಎರಡು ಅಥವಾ ಮೂರನೇ ಸ್ಥಾನದಲ್ಲಿ ಈ ಧಾರಾವಾಹಿ ಇರುತ್ತಿತ್ತು. ಆರಂಭ ಆದಮೇಲೆ ಕೊನೆ ಆಗಲೇಬೇಕು. ಅದೇ ರೀತಿ 2019ರಲ್ಲಿ ಪ್ರಸಾರ ಆರಂಭಿಸಿದ ‘ಗಟ್ಟಿಮೇಳ’ ಧಾರಾವಾಹಿಯೂ ಕೊನೆ ಆಗುತ್ತಿದೆ.  ಜನವರಿ 1ರಿಂದ ಅಂತಿಮ ಸಂಚಿಕೆಗಳ ಪ್ರಸಾರ ಆರಂಭ ಆಗಲಿದೆ. ಜನವರಿ 5ರಂದು (ಶುಕ್ರವಾರ) ಧಾರಾವಾಹಿ ಕೊನೆಗೊಳ್ಳಲಿದೆ.

ರಕ್ಷ್ ಹಾಗೂ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಜನರಿಗೆ ಸಾಕಷ್ಟು ಇಷ್ಟ ಆಗಿದೆ. ಇದು ಅನೇಕರ ಫೇವರಿಟ್ ಧಾರಾವಾಹಿ ಆಗಿದೆ. ಕಳೆದ ಕೆಲ ತಿಂಗಳಿಂದ ಧಾರಾವಾಹಿ ಪೂರ್ಣಗೊಳ್ಳುವ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು. ಈಗ ಕಥೆ ಅಂತಿಮ ಹಂತ ತಲುಪಿದೆ. ಈ ಜಾಗದಲ್ಲಿ ಹೊಸ ಧಾರಾವಾಹಿ ಪ್ರಸಾರ ಕಾಣಲಿದೆ. ಈ ವಿಚಾರ ಕೇಳಿ ‘ಗಟ್ಟಿಮೇಳ’ ಧಾರಾವಾಹಿ ವೀಕ್ಷರಿಗೆ ಬೇಸರ ಆಗಿದೆ.

2019ರ ಮಾರ್ಚ್ ತಿಂಗಳಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಪ್ರಸಾರ ಆರಂಭಿಸಿತು. ಈ ಧಾರಾವಾಹಿ 1200 ಎಪಿಸೋಡ್ ಪೂರ್ಣಗೊಳಿಸಿದೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈಗ ಧಾರಾವಾಹಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ನಾಲ್ಕು ಮುಕ್ಕಾಲು ವರ್ಷಗಳ ಕಾಲ ಈ ಧಾರಾವಾಹಿ ಪ್ರಸಾರ ಕಂಡಿದೆ.

ಇದನ್ನೂ ಓದಿ: Exclusive: ಶೀಘ್ರವೇ ಪೂರ್ಣಗೊಳ್ಳಲಿದೆ ‘ಗಟ್ಟಿಮೇಳ’; ಹೊಸ ಧಾರಾವಾಹಿ ಶೂಟ್​ಗೆ ನಡೆದಿದೆ ಸಿದ್ಧತೆ

‘ಗಟ್ಟಿಮೇಳ’ ಧಾರಾವಾಹಿ ನಟ ರಕ್ಷ್ ರಾಮ್ ಅವರು ಹಿರಿತೆರೆಗೆ ಕಾಲಿಡುತ್ತಿದ್ದಾರೆ. ಅವರು ‘ಬರ್ಮ’ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ‘ಬಹದ್ದೂರ್’, ‘ಭರ್ಜರಿ’ ನಿರ್ದೇಶಕ ಚೇತನ್ ಕುಮಾರ್ ಅವರು ‘ಬರ್ಮ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಈಗಲೇ ನಿರೀಕ್ಷೆ ಸೃಷ್ಟಿ ಆಗಿದೆ. ‘ಗಟ್ಟಿಮೇಳ’ ಬಳಿಕ ಈ ಸಿನಿಮಾದ ಕೆಲಸದಲ್ಲಿ ಅವರು ಬ್ಯುಸಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು