AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಟ್ಟಿಮೇಳ’ ಧಾರಾವಾಹಿಯ ಅಂತಿಮ ಸಂಚಿಕೆಯ ಪ್ರಚಾರಕ್ಕೆ ಜೀ ಕನ್ನಡ ಸಿದ್ಧತೆ

ಕಳೆದ ಕೆಲ ತಿಂಗಳಿಂದ ‘ಗಟ್ಟಿಮೇಳ’ ಧಾರಾವಾಹಿ ಪೂರ್ಣಗೊಳ್ಳುವ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು. ಈಗ ಕಥೆ ಅಂತಿಮ ಹಂತ ತಲುಪಿದೆ. ಈ ಜಾಗದಲ್ಲಿ ಹೊಸ ಧಾರಾವಾಹಿ ಪ್ರಸಾರ ಕಾಣಲಿದೆ.

‘ಗಟ್ಟಿಮೇಳ’ ಧಾರಾವಾಹಿಯ ಅಂತಿಮ ಸಂಚಿಕೆಯ ಪ್ರಚಾರಕ್ಕೆ ಜೀ ಕನ್ನಡ ಸಿದ್ಧತೆ
ನಿಶಾ
ರಾಜೇಶ್ ದುಗ್ಗುಮನೆ
|

Updated on: Dec 28, 2023 | 12:26 PM

Share

‘ಗಟ್ಟಿಮೇಳ’ ಧಾರಾವಾಹಿ (Gattimela Serial) ಸಾವಿರಾರು ಸಂಚಿಕೆಗಳನ್ನು ಪೂರ್ಣಗೊಳಿಸಿದೆ. ಆದಾಗ್ಯೂ ಟಿಆರ್​ಪಿಯಲ್ಲಿ ಈ ಧಾರಾವಾಹಿ ಹಿಂದೆ ಬಿದ್ದಿಲ್ಲ. ಟಿಆರ್​ಪಿ ಲಿಸ್ಟ್​​ನಲ್ಲಿ ಎರಡು ಅಥವಾ ಮೂರನೇ ಸ್ಥಾನದಲ್ಲಿ ಈ ಧಾರಾವಾಹಿ ಇರುತ್ತಿತ್ತು. ಆರಂಭ ಆದಮೇಲೆ ಕೊನೆ ಆಗಲೇಬೇಕು. ಅದೇ ರೀತಿ 2019ರಲ್ಲಿ ಪ್ರಸಾರ ಆರಂಭಿಸಿದ ‘ಗಟ್ಟಿಮೇಳ’ ಧಾರಾವಾಹಿಯೂ ಕೊನೆ ಆಗುತ್ತಿದೆ.  ಜನವರಿ 1ರಿಂದ ಅಂತಿಮ ಸಂಚಿಕೆಗಳ ಪ್ರಸಾರ ಆರಂಭ ಆಗಲಿದೆ. ಜನವರಿ 5ರಂದು (ಶುಕ್ರವಾರ) ಧಾರಾವಾಹಿ ಕೊನೆಗೊಳ್ಳಲಿದೆ.

ರಕ್ಷ್ ಹಾಗೂ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಜನರಿಗೆ ಸಾಕಷ್ಟು ಇಷ್ಟ ಆಗಿದೆ. ಇದು ಅನೇಕರ ಫೇವರಿಟ್ ಧಾರಾವಾಹಿ ಆಗಿದೆ. ಕಳೆದ ಕೆಲ ತಿಂಗಳಿಂದ ಧಾರಾವಾಹಿ ಪೂರ್ಣಗೊಳ್ಳುವ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು. ಈಗ ಕಥೆ ಅಂತಿಮ ಹಂತ ತಲುಪಿದೆ. ಈ ಜಾಗದಲ್ಲಿ ಹೊಸ ಧಾರಾವಾಹಿ ಪ್ರಸಾರ ಕಾಣಲಿದೆ. ಈ ವಿಚಾರ ಕೇಳಿ ‘ಗಟ್ಟಿಮೇಳ’ ಧಾರಾವಾಹಿ ವೀಕ್ಷರಿಗೆ ಬೇಸರ ಆಗಿದೆ.

2019ರ ಮಾರ್ಚ್ ತಿಂಗಳಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಪ್ರಸಾರ ಆರಂಭಿಸಿತು. ಈ ಧಾರಾವಾಹಿ 1200 ಎಪಿಸೋಡ್ ಪೂರ್ಣಗೊಳಿಸಿದೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈಗ ಧಾರಾವಾಹಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ನಾಲ್ಕು ಮುಕ್ಕಾಲು ವರ್ಷಗಳ ಕಾಲ ಈ ಧಾರಾವಾಹಿ ಪ್ರಸಾರ ಕಂಡಿದೆ.

ಇದನ್ನೂ ಓದಿ: Exclusive: ಶೀಘ್ರವೇ ಪೂರ್ಣಗೊಳ್ಳಲಿದೆ ‘ಗಟ್ಟಿಮೇಳ’; ಹೊಸ ಧಾರಾವಾಹಿ ಶೂಟ್​ಗೆ ನಡೆದಿದೆ ಸಿದ್ಧತೆ

‘ಗಟ್ಟಿಮೇಳ’ ಧಾರಾವಾಹಿ ನಟ ರಕ್ಷ್ ರಾಮ್ ಅವರು ಹಿರಿತೆರೆಗೆ ಕಾಲಿಡುತ್ತಿದ್ದಾರೆ. ಅವರು ‘ಬರ್ಮ’ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ‘ಬಹದ್ದೂರ್’, ‘ಭರ್ಜರಿ’ ನಿರ್ದೇಶಕ ಚೇತನ್ ಕುಮಾರ್ ಅವರು ‘ಬರ್ಮ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಈಗಲೇ ನಿರೀಕ್ಷೆ ಸೃಷ್ಟಿ ಆಗಿದೆ. ‘ಗಟ್ಟಿಮೇಳ’ ಬಳಿಕ ಈ ಸಿನಿಮಾದ ಕೆಲಸದಲ್ಲಿ ಅವರು ಬ್ಯುಸಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ