ಟಿಆರ್​ಪಿ ರೇಸ್​ನಲ್ಲಿ ಮತ್ತೆ ಟ್ರ್ಯಾಕ್​ಗೆ ಮರಳಿದ ‘ಭಾಗ್ಯಲಕ್ಷ್ಮೀ’; ಮೊದಲ ಸ್ಥಾನದಲ್ಲಿ ಯಾವ ಧಾರಾವಾಹಿ?

ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಟಿಆರ್​ಪಿ ವಿಚಾರದಲ್ಲಿ ಕೊಂಚ ಡಲ್​ ಆಗಿತ್ತು. ಈಗ ಧಾರಾವಾಹಿಯ ಟಿಆರ್​ಪಿ ಮತ್ತೆ ಹೆಚ್ಚಲು ಆರಂಭಿಸಿದೆ. ಸುಷ್ಮಾ ರಾವ್, ಸುದರ್ಶನ್, ಪದ್ಮಜಾ ರಾವ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸಿದ್ದಾರೆ.

ಟಿಆರ್​ಪಿ ರೇಸ್​ನಲ್ಲಿ ಮತ್ತೆ ಟ್ರ್ಯಾಕ್​ಗೆ ಮರಳಿದ ‘ಭಾಗ್ಯಲಕ್ಷ್ಮೀ’; ಮೊದಲ ಸ್ಥಾನದಲ್ಲಿ ಯಾವ ಧಾರಾವಾಹಿ?
ಭಾಗ್ಯಲಕ್ಷ್ಮಿ ಧಾರಾವಾಹಿ

Updated on: Sep 28, 2023 | 2:52 PM

ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಟಿಆರ್​ಪಿ ವಿಚಾರದಲ್ಲಿ ಕೊಂಚ ಡಲ್​ ಆಗಿತ್ತು. ಈಗ ಧಾರಾವಾಹಿಯ ಟಿಆರ್​ಪಿ ಮತ್ತೆ ಹೆಚ್ಚಲು ಆರಂಭಿಸಿದೆ. ಸುಷ್ಮಾ ರಾವ್ (Sushma Rao) , ಸುದರ್ಶನ್, ಪದ್ಮಜಾ ರಾವ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸಿದ್ದಾರೆ. 38ನೇ ವಾರದ ಟಿಆರ್​ಪಿಯಲ್ಲಿ ಈ ಬದಲಾವಣೆ ಆಗಿದೆ. ಹಾಗಾದರೆ, ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ ಎನ್ನುವ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿ ಟಿಆರ್​ಪಿ ಪಡೆದು ಮುನ್ನುಗ್ಗುತ್ತಿದೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನದಲ್ಲಿದೆ. ಸಂಜನಾ ಬುರ್ಲಿ, ಉಮಾಶ್ರೀ ಮೊದಲಾದವರು ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಗಟ್ಟಿಮೇಳ

ರಕ್ಷ್ ಹಾಗೂ ನಿಶಾ ರವಿಕೃಷ್ಣ ಮುಖ್ಯಭೂಮಿಕೆಯಲ್ಲಿರುವ ‘ಗಟ್ಟಿಮೇಳ’ ಧಾರಾವಾಹಿ ಎಲ್ಲರ ಮೆಚ್ಚುಗೆ ಪಡೆದಿದೆ. ಸಾವಿರ ಎಪಿಸೋಡ್ ಕಳೆದರೂ ಒಂದೇ ರೀತಿಯ ಟಿಆರ್​ಪಿ ಕಾಯ್ದುಕೊಂಡು ಸಾಗುತ್ತಿರುವ ಹೆಚ್ಚುಗಾರಿಕೆ ಈ ಧಾರಾವಾಹಿಯದ್ದು. ಈ ಧಾರಾವಾಹಿ ಎರಡನೇ ಸ್ಥಾನದಲ್ಲಿದೆ.

ಅಮೃತಧಾರೆ

‘ಅಮೃತಧಾರೆ’ ಧಾರಾವಾಹಿಯಲ್ಲಿ ಮದುವೆ ಎಪಿಸೋಡ್​ಗಳು ಹೈಲೈಟ್ ಆಗುತ್ತಿವೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ಅಚ್ಚರಿ ಎಂಬಂತೆ, ‘ಸೀತಾ ರಾಮ’ ಧಾರಾವಾಹಿಯನ್ನು ‘ಅಮೃತಧಾರೆ ಹಿಂದಿಕ್ಕಿದೆ.

ಸೀತಾ ರಾಮ

‘ಸೀತಾ ರಾಮ’ ಭರ್ಜರಿ ಮೆಚ್ಚುಗೆ ಪಡೆದುಕೊಂಡ ಧಾರಾವಾಹಿಗಳಲ್ಲಿ ಒಂದು. ಸೀತಾ ಪಾತ್ರದಲ್ಲಿ ವೈಷ್ಣವಿ ಗೌಡ ಹಾಗೂ ರಾಮನ ಪಾತ್ರದಲ್ಲಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ನಗರ ಭಾಗದ ಟಿಆರ್​ಪಿಯಲ್ಲಿ ಎರಡನೇ ಸ್ಥಾನದಲ್ಲಿದೆ ಅನ್ನೋದು ವಿಶೇಷ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಸುಧಾರಾಣಿ ಮೊದಲಾದವರು ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಟಿಆರ್​ಪಿ ರೇಸ್​​ನಲ್ಲಿ ‘ಗಟ್ಟಿಮೇಳ-ಸೀತಾರಾಮ’ ಮಧ್ಯೆ ಭರ್ಜರಿ ಪೈಪೋಟಿ; ಇಲ್ಲಿದೆ ವಿವರ

‘ಭಾಗ್ಯಲಕ್ಷ್ಮಿ’

‘ಭಾಗ್ಯಲಕ್ಷ್ಮಿ’ ಧಾರಾವಾಹಿ ಟಿಆರ್​ಪಿ ಹೆಚ್ಚಿದೆ. ಈ ವಾರ ಧಾರಾವಾಹಿ ಆರನೇ ಸ್ಥಾನಕ್ಕೆ ಬಂದಿದೆ. ನಗರ ವಿಭಾಗದಲ್ಲಿ ಈ ಧಾರಾವಾಹಿ ‘ಅಮೃತಧಾರೆ’ಗೆ ಸ್ಪರ್ಧೆ ನೀಡಲು ರೆಡಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us