AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಕಿರುತೆರೆ ಜೋಡಿಯ ದಾಂಪತ್ಯ ಜೀವನ ಅಂತ್ಯ; ರಿಯಾಲಿಟಿ ಶೋನಲ್ಲೇ ವಿಚ್ಛೇದನ ಘೋಷಿಸಿದ ನಟಿ

ಹಿಂದಿ ಕಿರುತೆರೆ ತಾರಾ ಜೋಡಿ ಗೌರವ್ ಖನ್ನಾ ಮತ್ತು ಆಕಾಂಕ್ಷಾ ಚಮೋಲಾ ವಿಚ್ಛೇದನ ಪಡೆಯುತ್ತಿದ್ದಾರೆ. 'ಲಾಕ್ ಅಪ್ ಸೀಸನ್ 2' ವೇದಿಕೆಯಲ್ಲಿ ಆಕಾಂಕ್ಷಾ ಈ ವಿಷಯ ಬಹಿರಂಗಪಡಿಸಿದ್ದಾರೆ. ಕಳೆದ ಒಂದು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರೂ, ಕಹಿ ಭಾವನೆ ಇಲ್ಲ ಎಂದಿದ್ದಾರೆ. ಮಕ್ಕಳ ವಿಚಾರದಲ್ಲಿ ಭಿನ್ನಾಭಿಪ್ರಾಯ ಮತ್ತು ವಿಭಿನ್ನ ಗುರಿಗಳು ಇವರ ಸಂಬಂಧ ಮುರಿಯಲು ಪ್ರಮುಖ ಕಾರಣವಾಗಿದೆ.

ಖ್ಯಾತ ಕಿರುತೆರೆ ಜೋಡಿಯ ದಾಂಪತ್ಯ ಜೀವನ ಅಂತ್ಯ; ರಿಯಾಲಿಟಿ ಶೋನಲ್ಲೇ ವಿಚ್ಛೇದನ ಘೋಷಿಸಿದ ನಟಿ
ಆಕಾಂಕ್ಷ-ಗೌರವ್
ರಾಜೇಶ್ ದುಗ್ಗುಮನೆ
|

Updated on: Jun 29, 2026 | 7:33 AM

Share

ಮುಖ್ಯಾಂಶಗಳು

  • 'ಲಾಕ್ ಅಪ್' ವೇದಿಕೆಯಲ್ಲಿ ವಿಚ್ಛೇದನ ಘೋಷಿಸಿದ ಗೌರವ್ ಖನ್ನಾ ಮತ್ತು ಆಕಾಂಕ್ಷಾ ಚಮೋಲಾ
  • ದಾಂಪತ್ಯ ಮುರಿಯಲು ಕಾರಣಗಳೇನು? ಭಿನ್ನ ಗುರಿಗಳು, ಮಕ್ಕಳ ವಿಚಾರದಲ್ಲಿ ಭಿನ್ನಾಭಿಪ್ರಾಯ
  • ಈ ಹಿಂದೆ ವಿಚ್ಛೇದನ ವದಂತಿ ನಿರಾಕರಿಸಿದ್ದ ಆಕಾಂಕ್ಷಾ

ಸೆಲೆಬ್ರಿಟಿ ಲೋಕದಲ್ಲಿ ಡಿವೋರ್ಸ್ ಸಾಮಾನ್ಯ ಎಂಬಂತಾಗಿದೆ. ಈಗ ಕಿರುತೆರೆ ಲೋಕದ ಪ್ರಸಿದ್ಧ ಜೋಡಿ ಗೌರವ್ ಖನ್ನಾ ಮತ್ತು ಆಕಾಂಕ್ಷಾ ಚಮೋಲಾ ತಮ್ಮ ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡುತ್ತಿದ್ದಾರೆ. ಖ್ಯಾತ ರಿಯಾಲಿಟಿ ಶೋ ‘ಲಾಕ್ ಅಪ್ ಸೀಸನ್ 2’ ವೇದಿಕೆಯಲ್ಲಿ ಆಕಾಂಕ್ಷಾ ಈ ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ.

ಲಾಕ್ ಅಪ್ ಶೋ ಜೂನ್ 27ರಂದು ನೆಟ್​ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಪ್ರಸಾರ ಆರಂಭಿಸಿದೆ. ಮೊದಲ ಸಂಚಿಕೆಯಲ್ಲಿ ಆಕಾಂಕ್ಷಾ ತಮ್ಮ ವೈಯಕ್ತಿಕ ಜೀವನದ ರಹಸ್ಯವೊಂದನ್ನು ಬಿಚ್ಚಿಟ್ಟರು. ತಮಗೂ ಮತ್ತು ಗೌರವ್ ಖನ್ನಾಗೆ ವಿಚ್ಛೇದನವಾಗುತ್ತಿದೆ ಎಂದು ಅವರು ಹೇಳಿದರು. ಕಳೆದ ಒಂದು ವರ್ಷದಿಂದ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರಂತೆ. ಈ ವಿಷಯವನ್ನು ಇಷ್ಟು ದಿನ ಗೌಪ್ಯವಾಗಿಡಲಾಗಿತ್ತು. ಈ ಸುದ್ದಿಯನ್ನು ಕೇಳಿ ಶೋ ನಿರೂಪಕರು ಮತ್ತು ಪ್ರೇಕ್ಷಕರು ದಿಗ್ಭ್ರಮೆಗೊಂಡರು.

ಪರಸ್ಪರ ಕಹಿ ಭಾವನೆ ಇಲ್ಲ

ನಮ್ಮಿಬ್ಬರ ಮಧ್ಯೆ ಯಾವುದೇ ದ್ವೇಷ ಅಥವಾ ಕಹಿ ಭಾವನೆ ಇಲ್ಲ ಎಂದು ಆಕಾಂಕ್ಷಾ ಸ್ಪಷ್ಟಪಡಿಸಿದ್ದಾರೆ. ನಾವು ಈಗಲೂ ಪರಸ್ಪರ ಮಾತನಾಡುತ್ತೇವೆ. ಆದರೆ ನಮ್ಮಿಬ್ಬರ ಯೋಚನೆಗಳು ಮತ್ತು ಭವಿಷ್ಯದ ಗುರಿಗಳು ವಿಭಿನ್ನವಾಗಿವೆ. ನಾವಿಬ್ಬರು ಜೊತೆಯಾಗಿ ಬಾಳಲು ಹೊಂದಾಣಿಕೆ ಆಗುತ್ತಿಲ್ಲ. ಹಾಗಾಗಿ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಮಕ್ಕಳ ವಿಚಾರದಲ್ಲಿ ಭಿನ್ನಾಭಿಪ್ರಾಯ

ಗೌರವ್ ಮತ್ತು ಆಕಾಂಕ್ಷಾ 2016ರ ನವೆಂಬರ್ 24ರಂದು ವಿವಾಹವಾಗಿದ್ದರು. ಈ ಹಿಂದೆ ಬಿಗ್ ಬಾಸ್ 19 ಶೋನಲ್ಲಿ ಗೌರವ್ ವಿನ್ನರ್ ಆಗಿ ಹೊರಹೊಮ್ಮಿದ್ದರು. ಆ ಶೋನ ಕೌಟುಂಬಿಕ ವಾರದಲ್ಲಿ ಆಕಾಂಕ್ಷಾ ಭಾಗವಹಿಸಿದ್ದರು. ಬಿಗ್ ಬಾಸ್ ಮನೆಯಲ್ಲಿದ್ದಾಗ ಗೌರವ್ ಮಕ್ಕಳ ವಿಚಾರದ ಬಗ್ಗೆ ಮಾತನಾಡಿದ್ದರು. ತಮಗೆ ಮಗು ಬೇಕು ಎಂಬ ಆಸೆ ಇದೆ ಎಂದಿದ್ದರು. ಆದರೆ ಪತ್ನಿ ಆಕಾಂಕ್ಷಾಗೆ ಮಗು ಬೇಡ ಎಂಬ ನಿಲುವಿದೆ ಎಂದು ಗೌರವ್ ಹೇಳಿದ್ದರು. ತಮಗೆ ತಾಯಿಯಾಗುವ ಇಷ್ಟ ಇಲ್ಲ ಎಂದು ಆಕಾಂಕ್ಷಾ ಕೂಡ ಈ ಹಿಂದೆ ಸಂದರ್ಶನವೊಂದರಲ್ಲಿ ಬಹಿರಂಗವಾಗಿ ಹೇಳಿಕೊಂಡಿದ್ದರು. ಇದು ಅವರ ವೈಯಕ್ತಿಕ ನಿರ್ಧಾರವಾಗಿತ್ತು.

ಇದನ್ನೂ ಓದಿ: ಸಿಕ್ಕಾಪಟ್ಟೆ ಬೋಲ್ಡ್​ ಅವತಾರದಲ್ಲಿ ಆಕಾಂಕ್ಷಾ ಶರ್ಮಾ

ವದಂತಿಗಳನ್ನು ನಿರಾಕರಿಸಿದ್ದ ನಟಿ

ಕಳೆದ ಜನವರಿ ತಿಂಗಳಿನಲ್ಲಿ ಇವರಿಬ್ಬರ ವಿಚ್ಛೇದನದ ವದಂತಿಗಳು ಹಬ್ಬಿದ್ದವು. ಆದರೆ ಆಗ ಆಕಾಂಕ್ಷಾ ಇದನ್ನು ಸುಳ್ಳು ಎಂದು ತಳ್ಳಿಹಾಕಿದ್ದರು. ನಮ್ಮ ಸಂಸಾರದಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದರು. ಆದರೆ ಈಗ ರಿಯಾಲಿಟಿ ಶೋ ವೇದಿಕೆಯಲ್ಲಿ ಅವರೇ ಅಧಿಕೃತವಾಗಿ ವಿಚ್ಛೇದನದ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!