Sign In

By signing in or creating an account, you agree with Associated Broadcasting Company's Terms & Conditions and Privacy Policy.

Gouthami Jadav: ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಹಲ್ಲಿಗೆ ಹೆದರೋದಾ; ಪಾಪ ಗೌತಮಿ ಸ್ಥಿತಿ ನೋಡಿ

‘ಬಿಗ್ ಬಾಸ್ ಕನ್ನಡ ಸೀಸನ್ 11’ ರ ಸ್ಪರ್ಧಿ ಗೌತಮಿ ಜಾಧವ್ ಅವರು ಹಲ್ಲಿಗೆ ಭಯ ಬಿದ್ದಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ. ಬಿಗ್ ಬಾಸ್ ನಲ್ಲಿ ಧೈರ್ಯಶಾಲಿಯಾಗಿ ಕಾಣಿಸಿಕೊಂಡಿದ್ದ ಗೌತಮಿ, ಹಲ್ಲಿಯನ್ನು ನೋಡಿ ಭಯಭೀತರಾದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲ್ಪಟ್ಟಿದೆ.

Gouthami Jadav: ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಹಲ್ಲಿಗೆ ಹೆದರೋದಾ; ಪಾಪ ಗೌತಮಿ ಸ್ಥಿತಿ ನೋಡಿ
ಗೌತಮಿ (Credit: Dhanraj Achar Vlogs)
Follow us
ರಾಜೇಶ್ ದುಗ್ಗುಮನೆ
|

Updated on: Mar 28, 2025 | 7:33 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡವರು ಗೌತಮಿ ಜಾಧವ್ (Gouthami Jadav) . ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದುಕೊಂಡರು. ಅವರು ಪಾಸಿಟಿವಿಟಿ ಬಗ್ಗೆ ಹೆಚ್ಚು ಗಮನ ಹರಿಸಿದರು. ಅವರು ಫಿನಾಲೆ ತಲುಪಲು ಸಾಧ್ಯವಾಗದೇ ಇರಬಹುದು. ಆದರೆ, ತಮ್ಮ ಪಯಣ ಅಭಿಮಾನಿಗಳ ನೆನಪಿನಲ್ಲಿ ಇರುವಂತೆ ಮಾಡಿದರು ಗೌತಮಿ. ಈಗ ಗೌತಮಿ ಜಾಧವ್ ಅವರ ವಿಡಿಯೋ ಒಂದು ವೈರಲ್ ಆಗಿದೆ. ಬಿಗ್ ಬಾಸ್​ನಲ್ಲಿ ಎಲ್ಲರನ್ನೂ ಹೆದರಿಸಿದ್ದ ಅವರು ಹಲ್ಲಿಗೆ ಹೆದರಿ ಹೋಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಗೌತಮಿ ಜಾಧವ್ ಅವರು ಇತ್ತೀಚೆಗೆ ಧನರಾಜ್ ಅವರ ಮನೆಗೆ ಹೋಗಿದ್ದರು. ಆ ಸಂದರ್ಭದ ವಿಡಿಯೋ ತುಣುಕುಗಳನ್ನು ಟ್ರೋಲ್ ಪೇಜ್​ಗಳು ವೈರಲ್ ಮಾಡುತ್ತಾ ಇದ್ದಾರೆ. ಈ ವೇಳೆ ಹಲ್ಲಿಯ ಕಥೆಯೂ ಒಂದು. ಧನರಾಜ್ ಮನೆಯ ಗೋಡೆ ಮೇಲೆ ಹಲ್ಲಿ ಇತ್ತು. ಈ ಹಲ್ಲಿಯನ್ನು ನೋಡಿ ಗೌತಮಿ ಭಯಗೊಂಡಿದ್ದಾರೆ.

ಇದನ್ನೂ ಓದಿ
Image
ಗಳಿಕೆಯಲ್ಲಿ ಇತಿಹಾಸ; ಮೊದಲ ದಿನ ಗರಿಷ್ಠ ಕಲೆಕ್ಷನ್ ಮಾಡಿದ ಎಲ್​2: ಎಂಪುರಾನ್
Image
ಚಿತ್ರಮಂದಿರದ ಬಾಗಿಲು, ಕಿಟಕಿ, ಕುರ್ಚಿ ಒಡೆದು ಹಾಕಿದ ದರ್ಶನ್ ಫ್ಯಾನ್ಸ್​
Image
ರಾಮ್ ಚರಣ್ ಹೊಸ ಚಿತ್ರದ ಟೈಟಲ್ ರಿವೀಲ್; ಮತ್ತೆ ಮಾಸ್ ಲುಕ್​
Image
ಐಶ್ವರ್ಯಾ ಕಾರು ಅಪಘಾತಕ್ಕೆ ಒಳಗಾಗಿದ್ದು ಹೇಗೆ? ವಿಡಿಯೋ ವೈರಲ್

‘ಹಲ್ಲಿ ಇದೆ..’ ಎಂದಾಗ ‘ನಿಜವಾಗಲೂ ಇದೆಯಾ’ ಎನ್ನುತ್ತಾ ಓಡಿಯೇ ಬಿಟ್ಟರು ಗೌತಮಿ. ‘ಹಲ್ಲಿಗಳು ಬರುತ್ತವೆ ಎನ್ನುವ ಕಾರಣಕ್ಕೆ ನಮ್ಮ ಮನೆಯ ಕಿಟಕಿ ಡೋರ್​ಗಳನ್ನು ತೆಗೆಯೋದೆ ಇಲ್ಲ. ಒಂದೊಮ್ಮೆ ಹಲ್ಲಿ ಬಂದರೆ ಅಭಿಷೇಕ್ ಅದನ್ನು ಓಡಿಸಬೇಕು. ನಾನು ಭಯದಲ್ಲಿ ಅವರಿಗೆ ಪರಚಿದ್ದೂ ಇದೆ’ ಎಂದು ಇತಿಹಾಸ ಬಿಚ್ಚಿಟ್ಟರು ಗೌತಮಿ.

ಗೌತಮಿ ಅವರು ಬಿಗ್ ಬಾಸ್​​ನಲ್ಲಿ ಘಟಾನುಘಟಿ ಸ್ಪರ್ಧಿಗಳನ್ನು ಹೆದರಿಸಿದ್ದಾರೆ. ಮಾತಿನ ಮೂಲಕ, ತಮ್ಮ ಗತ್ತಿನ ಮೂಲಕ ಎಲ್ಲರಲ್ಲೂ ನಡುಕ ಹುಟ್ಟಿಸಿದ್ದ ರಜತ್ ಅವರ ಮಾತಿಗೂ ಗೌತಮಿ ಬಗ್ಗಿರಲಿಲ್ಲ. ಇನ್ನು ಟಾಸ್ಕ್ ವಿಚಾರದಲ್ಲಂತೂ ಸೋಲುವ ಮಾತೇ ಇರಲಿಲ್ಲ. ಆದರೆ, ಒಂದು ಹಲ್ಲಿಗೆ ಅವರು ಭಯ ಬಿದ್ದಿದ್ದಾರೆ. ಇದೇ ಮಾತನ್ನು ಅನೇಕರು ಹೇಳಿ ನಕ್ಕಿದ್ದಾರೆ.

ಇದನ್ನೂ ಓದಿ: ಟ್ರೋಲ್ ಮಾಡಿದವರನ್ನ ಒಂದೇ ಫೋಟೋದಿಂದ ಗಪ್ ಚುಪ್ ಮಾಡಿದ ಗೌತಮಿ ಜಾಧವ್  

ಗೌತಮಿ ಜಾಧವ್ ಅವರು ‘ಸತ್ಯ’ ಧಾರಾವಾಹಿ ಮೂಲಕ ಫೇಮಸ್ ಆದವರು. ಆ ಬಳಿಕ ಅವರಿಗೆ ಬಿಗ್ ಬಾಸ್ ಆಫರ್ ಬಂತು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು. ಅವರು ಹೊಸ ಸಿನಿಮಾ ಅಥವಾ ಧಾರಾವಾಹಿಗಳನ್ನು ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಅವರನ್ನು ಗೌತಮಿ ಆಗಿಯೇ ಎಲ್ಲರೂ ಗುರುತಿಸುತ್ತಿರುವುದಕ್ಕೆ ಫ್ಯಾನ್ಸ್​ಗೆ ಖುಷಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!