AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲತಾಯಿ ಧೋರಣೆ ತಿಳಿದೋಯ್ತು; ಗೌತಮ್ ಮನೆ ಬಿಟ್ಟು ಹೋಗೋ ಸಮಯ ಬಂದೇಬಿಡ್ತು

ಅಮೃತಧಾರೆ ಧಾರಾವಾಹಿಯಲ್ಲಿ ಶಕುಂತಲಾಳ ಮೋಸದಿಂದಾಗಿ ಗೌತಮ್ ಮನೆ ಬಿಟ್ಟು ಹೋಗುತ್ತಾನೆ. ಅವನ ಮಲತಾಯಿ ಶಕುಂತಲಾ ಅವನನ್ನು ಮತ್ತು ಭೂಮಿಕಾಳನ್ನು ಬೇರ್ಪಡಿಸುತ್ತಾಳೆ. ಗೌತಮ್ ನಿಜವಾದ ಸತ್ಯ ತಿಳಿದುಕೊಂಡು ನೋವಿನಿಂದ ಮನೆ ಬಿಟ್ಟು ಹೋಗುತ್ತಾನೆ. ಐದು ವರ್ಷಗಳ ನಂತರದ ಕಥೆಯಲ್ಲಿ ಗೌತಮ್ ಕಾರು ಚಾಲಕನಾಗಿ ಕೆಲಸ ಮಾಡುತ್ತಾ ಇರುತ್ತಾನೆ.

ಮಲತಾಯಿ ಧೋರಣೆ ತಿಳಿದೋಯ್ತು; ಗೌತಮ್ ಮನೆ ಬಿಟ್ಟು ಹೋಗೋ ಸಮಯ ಬಂದೇಬಿಡ್ತು
Amruthadhaare (1)
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 09, 2025 | 10:18 AM

Share

‘ಅಮೃತಧಾರೆ’ ಧಾರಾವಾಹಿ (Amruthadhaare Serial) ಈಗ ಪ್ರಮುಖ ಘಟ್ಟ ತಲುಪಿದೆ. ಗೌತಮ್​ಗೆ ಮಲತಾಯಿಯಿಂದ ನಿರಂತರವಾಗಿ ಮೋಸಗಳು ಆಗುತ್ತಲೇ ಬರುತ್ತಾ ಇದ್ದವು. ಈ ಮೋಸ ಗೌತಮ್​ಗೆ ತಿಳಿಯುತ್ತಲೇ ಇರಲಿಲ್ಲ. ಕೊನೆಗೂ ಈ ಮೋಸದ ಬಗ್ಗೆ ಗೌತಮ್​ಗೆ ಗೊತ್ತಾಗುವ ಸಮಯ ಬಂದಿದೆ. ಇದು ಗೊತ್ತಾದ ಬಳಿಕವೇ ಆತ ಮನೆ ಬಿಟ್ಟು ಹೋಗುವ ನಿರ್ಧಾರ ಮಾಡಿದ್ದಾನೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿಯು ಹಂಚಿಕೊಂಡಿದೆ.

‘ಅಮೃತಧಾರೆ’ ಧಾರಾವಾಹಿಯಲ್ಲಿ ಪ್ರಮುಖ ವಿಲನ್ ಶಕುಂತಲಾ. ಈಕೆ ಗೌತಮ್​ಗೆ ಸಾಕಷ್ಟು ದ್ರೋಹ ಬಗೆದಿದ್ದಾಳೆ. ಮಲತಾಯಿ ಧೋರಣೆ ತೋರಿದ್ದಾಳೆ. ಈಗ ಅವಳಿಂದ ಒಂದು ದೊಡ್ಡ ತಪ್ಪು ನಡೆದು ಹೋಗಿದೆ. ಭೂಮಿಕಾ ಹಾಗೂ ಗೌತಮ್​​ನ ಸಂಪೂರ್ಣವಾಗಿ ದೂರ ಮಾಡಿದ್ದಾಳೆ. ಆ ಬಳಿಕ ‘ಮತ್ತೊಂದು ಮಗುವಿನ ಬಗ್ಗೆ ನಿಜ ಹೇಳದ ಕಾರಣ ನಾನು ಮನೆ ಬಿಟ್ಟು ಹೋಗುತ್ತಿದ್ದೇನೆ’ ಎಂದು ಭೂಮಿಕಾ ಹೆಸರಲ್ಲಿ ಶಕುಂತುಲಾಳೇ ಪತ್ರ ಬರೆದಿದ್ದಾಳೆ.

ಇದನ್ನೂ ಓದಿ
Image
ಅತ್ತೆಯ ಒತ್ತಾಯಕ್ಕೆ ಲಿವ್-ಇನ್ ರಿಲೇಶನ್​ಶಿಪ್​ನಲ್ಲಿ ಇದ್ದ ಅಕ್ಷಯ್ ಕುಮಾರ್
Image
‘ಅದು ನಾನು ಜೀವನದಲ್ಲಿ ತೆಗೆದುಕೊಂಡ ಕೆಟ್ಟ ನಿರ್ಧಾರ’; ಮರುಗಿದ ಚಂದನ್
Image
‘ಸು ಫ್ರಮ್ ಸೋ’ ಒಟಿಟಿ ದಿನಾಂಕ ರಿವೀಲ್; 45ನೇ ದಿನವೂ ಅಬ್ಬರದ ಕಲೆಕ್ಷನ್
Image
ಸೂರ್ಯವಂಶಿ ನಟ ನಿಧನ; ವಾಯು ಪಡೆಯಲ್ಲಿ ಸೇವೆ ಸಲ್ಲಿಸಿ ಚಿತ್ರರಂಗಕ್ಕೆ ಎಂಟ್ರಿ

ಈ ವಿಚಾರವನ್ನು ನಿಜವಾದ ತಾಯಿಯು ಗೌತಮ್​ಗೆ ಮನವರಿಕೆ ಮಾಡಿಸಿದ್ದಾಳೆ. ಈ ವಿಚಾರ ತಿಳಿಯತ್ತಿದ್ದಂತೆ ಗೌತಮ್ ಓಡೋಡಿ ಮನೆಗೆ ಬಂದಿದ್ದಾನೆ. ಅಲ್ಲಿ ಶಕುಂತಲಾ ಹಾಗೂ ಅವಳ ಮಗ ಜಯದೇವ್ ಈ ಬಗ್ಗೆ ಚರ್ಚೆ ಮಾಡುತ್ತಾ ಕೂತಿರುತ್ತಾರೆ. ಇದನ್ನು ಕೇಳಿ ಗೌತಮ್​​ಗೆ ಸಾಕಷ್ಟು ಬೇಸರ ಆಗುತ್ತದೆ. ‘ಯಾಕೆ ಹೀಗೆ ಮಾಡಿದಿರಿ’ ಎಂದು ನೊಂದುಕೊಂಡು ಮನೆ ಬಿಟ್ಟು ಹೊರಡುತ್ತಾನೆ.

ಇದನ್ನೂ ಓದಿ: ‘ಅಮೃತಧಾರೆ’ ಹೊಸ ಅಧ್ಯಾಯ; ಮನೆಬಿಟ್ಟು ಹೋದ ಭೂಮಿ, ಕ್ಯಾಬ್ ಡ್ರೈವರ್ ಆದ ಗೌತಮ್

‘ನನಗೆ ಶಾಂತಿ-ನೆಮ್ಮದಿ ಬೇಕಿದೆ. ಈ ಆಸ್ತಿಯೆಲ್ಲವೂ ನಿಮ್ಮದು’ ಎಂದು ತಾಯಿ ಹೆಸರಿಗೆ ಆಸ್ತಿ ಬರೆದಿಟ್ಟು ಗೌತಮ್ ಹೊರಟೇ ಬಿಡುತ್ತಾನೆ. ಈ ಮೊದಲೇ ಬಿಡುಗಡೆ ಮಾಡಿರೋ ಪ್ರೋಮೋದಲ್ಲಿ ತೋರಿಸಿರುವಂತೆ ಧಾರಾವಾಹಿಯಲ್ಲಿ 5 ವರ್ಷಗಳ ನಂತರದ ಕಥೆ ಬರಲಿದೆ. ಅದು ಯಾವಾಗಿನಿಂದ ಆರಂಭ ಆಗುತ್ತದೆ ಎಂಬ ಕುತೂಹಲ ಮೂಡಿದೆ.

ಐದು ವರ್ಷದ ಬಳಿಕೆ ಆಗೋದೇನು?

ಗೌತಮ್ ಕಾರು ಡ್ರೈವರ್ ಆಗಿದ್ದಾನೆ. ಭೂಮಿಕಾಳ ಹುಡುಕುತ್ತಾ ಐದು ವರ್ಷಗಳೇ ಕಳೆದು ಹೋಗಿವೆ. ಈ ವೇಳೆ ಒಮ್ಮೆ ಅವನಿಗೆ ಮಗ ಸಿಗುತ್ತಾನೆ. ಇದನ್ನು ನೋಡಿ ಆತ ಖುಷಿ ಪಡುತ್ತಾನೆ. ಮತ್ತೆ ಇವರು ಒಂದಾಗುತ್ತಾರಾ ಎಂಬುದು ಸದ್ಯದ ಕುತೂಹಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್