AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮಿ ಧರಿಸಿದ್ದ ಪಾಸಿಟಿವ್ ಮುಖವಾಡ ಬಯಲು; ಮೋಕ್ಷಿತಾ ಈಗ ದುಷ್ಮನ್

ಕೆಲವೇ ದಿನಗಳ ಹಿಂದೆ ಗೌತಮಿ ಜಾದವ್ ಮತ್ತು ಮೋಕ್ಷಿತಾ ಪೈ ಅವರು ಸಿಕ್ಕಾಪಟ್ಟೆ ಆಪ್ತವಾಗಿದ್ದರು. ಯಾವುದೇ ವಿಚಾರ ಇದ್ದರೂ ಪರಸ್ಪರ ಚರ್ಚೆ ಮಾಡುತ್ತಿದ್ದರು. ಒಬ್ಬರಿಗೆ ಇನ್ನೊಬ್ಬರು ಬೆಂಬಲವಾಗಿ ನಿಂತಿದ್ದರು. ಆದರೆ ಈಗ ಮೋಕ್ಷಿತಾ ಅವರು ಸಂಪೂರ್ಣ ಬದಲಾಗಿದ್ದಾರೆ. ಗೌತಮಿ ವಿರುದ್ಧ ಅವರು ತಿರುಗಿ ನಿಂತಿದ್ದಾರೆ. ಗೌತಮಿಯ ಪಾಸಿಟಿವ್ ಮುಖವಾಡ ತೆಗೆಯಲು ಮೋಕ್ಷಿತಾ ನಿರ್ಧರಿಸಿದ್ದಾರೆ.

ಗೌತಮಿ ಧರಿಸಿದ್ದ ಪಾಸಿಟಿವ್ ಮುಖವಾಡ ಬಯಲು; ಮೋಕ್ಷಿತಾ ಈಗ ದುಷ್ಮನ್
ಮೋಕ್ಷಿತಾ ಪೈ, ಗೌತಮಿ ಜಾದವ್
ಮದನ್​ ಕುಮಾರ್​
|

Updated on: Nov 25, 2024 | 10:51 PM

Share

ಬಿಗ್ ಬಾಸ್ ಮನೆಯಲ್ಲಿ ತಂತ್ರ, ಕುತಂತ್ರ ಮಾಡುವುದು ಅನಿವಾರ್ಯ. ಅಂತಹ ಜಾಗದಲ್ಲಿ ಬರೀ ಪಾಸಿಟಿವ್ ಆಗಿ ಇರುತ್ತೇನೆ ಎಂದರೆ ಅದು ಬೂಟಾಟಿಕೆಯೇ ಸರಿ. ನಟಿ ಗೌತಮಿ ಜಾದವ್ ಅವರು ಮೊದಲ ದಿನದಿಂದಲೂ ಪಾಸಿಟಿವ್ ಮಂತ್ರ ಜಪಿಸುತ್ತಿದ್ದಾರೆ. ಆದರೆ ಅದು ಅವರಿಗೆ ಬ್ಯಾಕ್ ಫೈರ್​ ಆಗುತ್ತಿದೆ. ಈಗ ಬಿಗ್ ಬಾಸ್​ ಮನೆಯಲ್ಲಿ ಇರುವ ಬಹುತೇಕ ಸದಸ್ಯರು ಗೌತಮಿಯ ‘ಪಾಸಿಟಿವ್’ ಹೇಳಿಕೆಗಳನ್ನು ಖಂಡಿಸುತ್ತಿದ್ದಾರೆ. ಮುಖ್ಯವಾಗಿ ಮೋಕ್ಷಿತಾ ಪೈ ಅವರು ಕಟುವಾಗಿ ಟೀಕಿಸುತ್ತಿದ್ದಾರೆ. ಅಚ್ಚರಿ ಏನೆಂದರೆ, ಒಂದಷ್ಟು ದಿನಗಳ ಹಿಂದೆ ಗೌತಮಿ ಹಾಗೂ ಮೋಕ್ಷಿತಾ ಪ್ರಾಣ ಸ್ನೇಹಿತೆಯರಾಗಿದ್ದರು.

ಗೌತಮಿ ಅವರು ಅಂದುಕೊಂಡ ರೀತಿಯಲ್ಲಿ ನಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ವಿಚಾರವನ್ನು ಇಟ್ಟುಕೊಂಡು ಎಲ್ಲರೂ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಗೌತಮಿ ಅವರನ್ನು ಹತ್ತಿರದಿಂದ ಕಂಡವರು ಮೋಕ್ಷಿತಾ ಪೈ. ಹಾಗಾಗಿ ಗೌತಮಿ ಅವರ ಎಲ್ಲ ನಡೆಗಳ ಬಗ್ಗೆ ಮೋಕ್ಷಿತಾಗೆ ಮಾಹಿತಿ ಇದೆ. ಈ ಹಿಂದೆ ಗೌತಮಿ ಹೇಗೆ ನಡೆದುಕೊಂಡಿದ್ದರು? ಏನೆಲ್ಲ ಮಾತುಗಳನ್ನು ಆಡಿದ್ದರು ಎಂಬುದನ್ನು ಈಗ ಮೋಕ್ಷಿತಾ ಬಯಲು ಮಾಡುತ್ತಿದ್ದಾರೆ.

ಪಾಸಿಟಿವ್ ಎಂಬುದೇ ನಿಜವಲ್ಲ. ಇದು ಗೌತಮಿ ಅವರ ತಂತ್ರಗಾರಿಕೆ ಅಷ್ಟೇ ಎನಿಸುತ್ತಿದೆ. ಎಲ್ಲರ ರೀತಿ ಗೌತಮಿ ಕೂಡ ಗಾಸಿಪ್ ಮಾಡಿದ್ದಾರೆ. ಗುಂಪುಗಾರಿಕೆ ಮಾಡಿದ್ದಾರೆ. ಬೇರೆಯವರ ಕೆಡುಕುಗಳನ್ನೇ ಗುರುತಿಸಿದ್ದಾರೆ. ಪಕ್ಷಪಾತ ಆಗುವ ಹಾಗೆ ನಡೆದುಕೊಂಡಿದ್ದಾರೆ. ಇದನ್ನೆಲ್ಲ ನಗುಮುಖದಿಂದ ಮಾಡಿ, ಅದನ್ನೇ ಪಾಸಿಟಿವಿಟಿ ಎಂದುಕೊಂಡು ಓಡಾಡುತ್ತಿದ್ದಾರೆ. ಅವರ ಈ ಗುಣ ಅನೇಕರಿಗೆ ಇಷ್ಟ ಆಗುತ್ತಿಲ್ಲ.

ಇದನ್ನೂ ಓದಿ: ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು

ಉಗ್ರಂ ಮಂಜು, ಗೌತಮಿ ಜಾದವ್ ಹಾಗೂ ಮೋಕ್ಷಿತಾ ಪೈ ಅವರು ಒಂದು ಗುಂಪಾಗಿ ಇರುತ್ತಿದ್ದರು. ಆ ಗುಂಪಿನಲ್ಲಿ ನಿಧಾನಕ್ಕೆ ಮೋಕ್ಷಿತಾ ಪೈ ಅವರಿಗೆ ಆದ್ಯತೆ ಕಡಿಮೆ ಆಗಲು ಶುರುವಾಯಿತು. ಮೋಕ್ಷಿತಾ ಅವರನ್ನು ಬಿಟ್ಟು ಕೇವಲ ಉಗ್ರಂ ಮಂಜು ಮತ್ತು ಗೌತಮಿ ಅವರೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಶುರು ಮಾಡಿದರು. ಇದರಿಂದ ಮೋಕ್ಷಿತಾಗೆ ಬೇಸರ ಆಯಿತು. ಆದ್ದರಿಂದ ಅವರು ಗೌತಮಿ ವಿರುದ್ಧ ಸಿಡಿದೆದ್ದಿದ್ದಾರೆ. ಮುಂದಿನ ದಿನಗಳಲ್ಲಿ ಗೌತಮಿ ಮತ್ತು ಮೋಕ್ಷಿತಾ ಅವರು ಜೋರಾಗಿ ಜಗಳ ಮಾಡಿಕೊಂಡರೂ ಅಚ್ಚರಿ ಏನಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ