AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮಿ ಮಲಗಿದ್ದಾಗ ಇಷ್ಟವಾಗದ ರೀತಿ ನಡೆದುಕೊಂಡ ಧನರಾಜ್; ವಾರ್ನಿಂಗ್ ಕೊಟ್ಟ ನಟಿ

ಧನರಾಜ್ ಅವರು ನಡೆದುಕೊಂಡ ರೀತಿಯಿಂದ ಗೌತಮಿ ಜಾದವ್ ಅವರಿಗೆ ಸಖತ್ ಕೋಪ ಬಂದಿದೆ. ಕೂಡಲೇ ಅವರು ಧನರಾಜ್​ಗೆ ವಾರ್ನಿಂಗ್ ಕೊಟ್ಟಿದ್ದಾರೆ. ಗೌತಮಿ ಗರಂ ಆಗಿದ್ದರಿಂದ ಧನರಾಜ್ ಅವರಿಗೆ ಬೇಸರ ಆಗಿದೆ. ಇಷ್ಟು ದಿನ ಪಾಸಿಟಿವಿಟಿ ಎನ್ನುತ್ತಿದ್ದ ಗೌತಮಿ ಅವರು ಈಗ ಏರು ಧ್ವನಿಯಲ್ಲಿ ಮಾತನಾಡಿದ್ದಕ್ಕೆ ಧನರಾಜ್ ಬೇಸರ ಮಾಡಿಕೊಂಡಿದ್ದಾರೆ.

ಗೌತಮಿ ಮಲಗಿದ್ದಾಗ ಇಷ್ಟವಾಗದ ರೀತಿ ನಡೆದುಕೊಂಡ ಧನರಾಜ್; ವಾರ್ನಿಂಗ್ ಕೊಟ್ಟ ನಟಿ
ಗೌತಮಿ ಜಾದವ್, ಧನರಾಜ್
ಮದನ್​ ಕುಮಾರ್​
|

Updated on: Oct 30, 2024 | 10:26 PM

Share

‘ಸತ್ಯ’ ಸೀರಿಯಲ್ ಮೂಲಕ ಭಾರಿ ಜನಪ್ರಿಯತೆ ಗಳಿಸಿದ ನಟಿ ಗೌತಮಿ ಜಾದವ್ ಅವರು ಬಿಗ್ ಬಾಸ್ ಮನೆಯಲ್ಲಿ ತಮ್ಮ ಪಾಸಿಟಿವ್ ಮನಸ್ಥಿತಿಯಿಂದ ಗಮನ ಸೆಳೆದಿದ್ದಾರೆ. ಆದರೆ ವಿವಾದಗಳೇ ತುಂಬಿರುವ ದೊಡ್ಮನೆಯಲ್ಲಿ ಪಾಸಿಟಿವಿಟಿ ಕಾಯ್ದುಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೂಗಾಡಬೇಕಾಗುತ್ತದೆ. ಕಿರಿಕಿರಿ ಆದಾಗ ನಗು ಬದಿಗಿಟ್ಟು ಜಗಳ ಮಾಡಲೇಬೇಕಾಗುತ್ತದೆ. 31ನೇ ದಿನ ಬೆಳ್ಳಂಬೆಳಗ್ಗೆಯೇ ಗೌತಮಿ ಅವರಿಗೆ ಕೋಪ ಬಂದಿದೆ. ಅದಕ್ಕೆ ಕಾರಣ ಆಗಿರುವುದು ಧನರಾಜ್. ಹೌದು, ಧನರಾಜ್​ ಅವರ ಒಂದು ವರ್ತನೆಯನ್ನು ಗೌತಮಿ ಖಂಡಿಸಿದ್ದಾರೆ.

ಬಿಗ್ ಬಾಸ್ ಮನೆಯ ನಿಯಮದ ಪ್ರಕಾರ, ಬೆಳಗ್ಗೆ ಹಾಡು ಪ್ಲೇ ಆದ ತಕ್ಷಣ ಎಲ್ಲ ಸ್ಪರ್ಧಿಗಳು ಏಳಬೇಕು. ಸಾಮಾನ್ಯವಾಗಿ ಈ ರೀತಿ ಹಾಡು ಹಾಕಿದಾಗ ಎಲ್ಲರೂ ಎದ್ದು ಡ್ಯಾನ್ಸ್ ಮಾಡುತ್ತಾರೆ. ಆದರೆ 31ನೇ ದಿನ ಹಾಡು ಪ್ಲೇ ಆದಾಗ ಗೌತಮಿ ಅವರು ಇನ್ನೂ ಬೆಡ್​ ಬಿಟ್ಟು ಎದ್ದಿರಲಿಲ್ಲ. ಇನ್ನೇನು ಅವರು ಏಳಬೇಕು ಎಂಬಷ್ಟರಲ್ಲಿ ಧನರಾಜ್ ಅವರು ದಿಂಬಿನಿಂದ ಗೌತಮಿಗೆ ಹೊಡೆದರು. ಅದು ಗೌತಮಿ ಅವರಿಗೆ ಕಿರಿಕಿರಿ ಉಂಟು ಮಾಡಿತು.

‘ನನಗೆ ಇದು ಇಷ್ಟ ಆಗಲಿಲ್ಲ. ಮೊದಲ ದಿನ ಅಂತ ಸುಮ್ಮನಿದ್ದೇನೆ. ದಯವಿಟ್ಟು ನನ್ನನ್ನು ಈ ರೀತಿ ಎಬ್ಬಿಸಬೇಡಿ. ಸಾಂಗ್ ಬಂದಾಗ ಏಳಬೇಕು ಎಂಬುದು ನನಗೆ ಕೂಡ ಗೊತ್ತು’ ಎಂದು ಗೌತಮಿ ಅವರು ಗರಂ ಆಗಿ ಹೇಳಿದ್ದಾರೆ. ಯಾವಾಗಲೂ ಪಾಸಿಟಿವಿಟಿ ಜಪ ಮಾಡುವ ಗೌತಮಿ ಅವರು ಇಷ್ಟು ಖಡಕ್ ಆಗಿ ವಾರ್ನಿಂಗ್ ನೀಡಿದ್ದು ಕಂಡು ಧನರಾಜ್ ಅವರಿಗೆ ಅಚ್ಚರಿ ಆಯಿತು. ಕೆಲವು ನಿಮಿಷಗಳ ಕಾಲ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಘಟನೆ ಬಳಿಕ ಧನರಾಜ್ ಮತ್ತು ಗೌತಮಿ ನಡುವೆ ಮೊದಲಿನ ಆತ್ಮೀಯತೆ ಉಳಿಯದೇ ಇರಬಹುದು.

ಇದನ್ನೂ ಓದಿ: ಪಾಳುಬಿದ್ದ ಬಿಗ್ ಬಾಸ್ ಮನೆಗೆ ಮಾಸ್ಟರ್ ಆನಂದ್ ಎಂಟ್ರಿ

ಈ ವಾರ ಹನುಮಂತ ಅವರು ಕ್ಯಾಪ್ಟನ್ ಆಗಿದ್ದಾರೆ. ಅವರು ತಮ್ಮ ಆಟದ ಅಸಲಿ ವರಸೆಯನ್ನು ತೋರಿಸುತ್ತಿದ್ದಾರೆ. ಅವರ ಬುದ್ಧಿವಂತಿಕೆಯನ್ನು ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ. ಬಿಗ್ ಬಾಸ್ ಆಟವನ್ನು ಅವರು ನಿಧಾನಕ್ಕೆ ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಎಲ್ಲರನ್ನು ಅವರು ನಗಿಸುತ್ತಿದ್ದಾರೆ. ಹಾಗಂತ ಅವರು ಅಸಲಿ ಆಟವನ್ನು ಮರೆತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​