AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಹುಡುಗಿ ಯಾರೆಂದು ಪರಿಚಯಿಸಿದ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ

ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ ವಿವಾಹವಾಗುತ್ತಿದ್ದಾರೆ. ಇತ್ತೀಚೆಗೆ ತಮ್ಮ ವಧು ಕೃತಿ ಗೌಡ ಅವರನ್ನು ಪರಿಚಯಿಸಿದ್ದಾರೆ. ಕೃತಿ ಗೌಡ ಕೂಡ ಕಲಾವಿದೆಯಾಗಿದ್ದು, ಇವರಿಬ್ಬರ ಮದುವೆ ಸುದ್ದಿ ಅಭಿಮಾನಿಗಳಲ್ಲಿ ಸಂತಸ ತಂದಿದೆ. ಪ್ರಶಾಂತ್ ಗೌಡ ತಮ್ಮ ಮದುವೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸದ್ಯದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ.

ಕೊನೆಗೂ ಹುಡುಗಿ ಯಾರೆಂದು ಪರಿಚಯಿಸಿದ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ
ಪ್ರಶಾಂತ್ ಗೌಡ
ರಾಜೇಶ್ ದುಗ್ಗುಮನೆ
|

Updated on: Apr 20, 2026 | 2:59 PM

Share

‘ಗಿಚ್ಚಿ ಗಿಲಿ ಗಿಲಿ’, ‘ಕ್ವಾಟ್ಲೆ ಕಿಚನ್’ ರೀತಿಯ ಶೋಗಳ ಮೂಲಕ ಗಮನ ಸೆಳೆದ ಪ್ರಶಾಂತ್ ಗೌಡ ಅವರಿಗೆ ಈಗ ಕಂಕಣ ಭಾಗ್ಯ ಕೂಡಿ ಬಂದಿದೆ. ಅವರು ಕಳೆದ ಕೆಲ ದಿನಗಳಿಂದ ಹೆಣ್ಣು ನೋಡವ ಶಾಸ್ತ್ರದ ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ಬರುತ್ತಿದ್ದರು. ಆದರೆ, ಎಲ್ಲಿಯೂ ಅವರು ಹುಡುಗಿ ಯಾರು ಎಂಬುದನ್ನು ರಿವೀಲ್ ಮಾಡಿರಲಿಲ್ಲ. ಈಗ ಹೊಸ ವಿಡಿಯೋ ಹಂಚಿಕೊಂಡು ಆ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಹುಡುಗಿ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದ್ದು, ಶುಭಾಶಯ ತಿಳಿಸಿದ್ದಾರೆ.

ಪ್ರಶಾಂತ್ ಗೌಡ ಅವರು ‘ಗಿಚ್ಚಿ ಗಿಲಿ ಗಿಲಿ’ ಸೀಸನ್ 1ರಿಂದ ಸೀಸನ್ 3ರವರೆಗೆ ಇದ್ದರು. ಅವರು ವಿವಿಧ ರೀತಿಯ ರೀಲ್ಸ್ ಮಾಡಿಕೊಂಡು ಗಮನ ಸೆಳೆದಿದ್ದಾರೆ. ಅವರು ‘ಕ್ವಾಟ್ಲೆ ಕಿಚನ್’ ಶೋ ಅಲ್ಲಿ ‘ಕ್ವಾಟ್ಲೆ ಆಫ್ ದಿ ಸೀಸನ್’ ಅವಾರ್ಡ್ ಪಡೆದರು. ‘ಬಾಯ್ಸ್ vs ಗರ್ಲ್ಸ್’ ಶೋನಲ್ಲೂ ಪ್ರಶಾಂತ್ ಮಿಂಚಿದ್ದರು. ಈಗ ಪ್ರಶಾಂತ್ ಗೌಡ ವಿವಾಹ ಆಗುತ್ತಿದ್ದಾರೆ.

ಪ್ರಶಾಂತ್ ಮದುವೆ ಆಗುತ್ತಿರುವ ಹುಡುಗಿಯ ಹೆಸರು ಕೃತಿ ಗೌಡ. ಅವರು ಕೂಡ ಕಲಾವಿದೆ. ಈ ಮೊದಲು ‘ಬ್ರೇಕ್ ಫೆಲ್ಯೂವರ್’ ಹೆಸರಿನ ಸಿನಿಮಾ ಮಾಡಿದ್ದರು. ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋ ಹಾಗೂ ರೀಲ್ಸ್​​​ಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಿಲ್ಲ. ಈಗ ಪ್ರಶಾಂತ್ ಅವರನ್ನು ವರಿಸಲು ಕೃತಿ ಸಿದ್ಧರಾಗಿದ್ದಾರೆ.

ಇದನ್ನೂ ಓದಿ: ಜನವರಿ 31ರಿಂದ ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್: ಈ ಬಾರಿ ಮಕ್ಕಳದ್ದೇ ಹವಾ

ಪ್ರಶಾಂತ್ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮನ್ನು ‘ಟ್ಯಾಲೆಂಟೆಂಡ್ ಕಲಾವಿದ’ ಎಂದು ಕರೆದುಕೊಂಡಿದ್ದಾರೆ. ಅವರು ಇತ್ತೀಚೆಗೆ ಟಾಟಾ ಕರ್ವ್ ಕಾರನ್ನು ಖರೀದಿ ಮಾಡಿದ್ದರು. ವಿವಾಹ ಸಮೀಪಿಸಿದ್ದರಿಂದಲೇ ಈ ಕಾರನ್ನು ಅವರು ಖರೀದಿ ಮಾಡಿದರೇ ಎನ್ನುವ ಪ್ರಶ್ನೆಕೂಡ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ