AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಥಿಗಳು ನಡೆದುಕೊಂಡ ರೀತಿಗೆ ಒಂದಾದ ಗಿಲ್ಲಿ-ಅಶ್ವಿನಿ; ಮೂಡಿತು ಗೆಳೆತನ

ಬಿಗ್ ಬಾಸ್ ಕನ್ನಡ ಮನೆಯಲ್ಲಿ ಅತಿಥಿಗಳ ಗದ್ದಲದಿಂದಾಗಿ ಗಿಲ್ಲಿ ಮತ್ತು ಅಶ್ವಿನಿ ಗೌಡರು ಅನಿರೀಕ್ಷಿತವಾಗಿ ಒಂದಾಗಿದ್ದಾರೆ. ಸದಾ ಕಿತ್ತಾಡುತ್ತಿದ್ದ ಇವರ ನಡುವೆ ಅತಿಥಿಗಳ ವರ್ತನೆ ಹೊಸ ಗೆಳೆತನಕ್ಕೆ ನಾಂದಿ ಹಾಡಿದೆ. ಗಿಲ್ಲಿಯನ್ನು ಅಶ್ವಿನಿ ಸಮಾಧಾನಪಡಿಸಿದ್ದು, ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಈ ಗೆಳೆತನ ಮುಂದುವರಿಯಲಿ ಎಂಬುದು ವೀಕ್ಷಕರ ಆಶಯವಾಗಿದೆ.

ಅತಿಥಿಗಳು ನಡೆದುಕೊಂಡ ರೀತಿಗೆ ಒಂದಾದ ಗಿಲ್ಲಿ-ಅಶ್ವಿನಿ; ಮೂಡಿತು ಗೆಳೆತನ
ಗಿಲ್ಲಿ-ಅಶ್ವಿನಿ
ರಾಜೇಶ್ ದುಗ್ಗುಮನೆ
|

Updated on:Nov 27, 2025 | 7:38 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಈ ವಾರ ಅತಿಥಿಗಳು ಬಂದಿದ್ದಾರೆ. ಕಳೆದ ಸೀಸನ್ ಸ್ಪರ್ಧಿಗಳಾದ ಗಿಲ್ಲಿ ನಟ, ಮಂಜು ಮೊದಲಾದವರು ಅತಿಥಿಗಳು. ಬಂದವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂಬುದು ಬಿಗ್ ಬಾಸ್ ಆದೇಶ ಆಗಿತ್ತು. ಆದರೆ, ಅದನ್ನು ಗಿಲ್ಲಿ ಮೀರಿದ್ದಾರೆ. ಎಲ್ಲರೂ ಅವರನ್ನು ಚೆನ್ನಾಗಿ ನೋಡಿಕೊಂಡರೆ ಗಿಲ್ಲಿ ಮಾತ್ರ ಅವರಿಗೆ ಟಾರ್ಚರ್ ಕೊಟ್ಟಿದ್ದಾರೆ. ಇದರಿಂದ ಸಿಟ್ಟಾದ ಅತಿಥಿಗಳು ಕೂಗಾಡಿದ್ದಾರೆ. ಇದರಿಂದ ಬೇಸರಗೊಂಡು ಗಿಲ್ಲಿ ಹಾಗೂ ಅಶ್ವಿನಿ ಗೌಡ ಒಂದಾಗಿದ್ದಾರೆ. ಇವರ ಮಧ್ಯೆ ಗೆಳೆತನ ಮೂಡಿದೆ. ಅಶ್ವಿನಿ ಅವರು ಸ್ವತಃ ಗಿಲ್ಲಿಯನ್ನು ಸಮಾಧಾನ ಮಾಡಿದ್ದಾರೆ.

ಗಿಲ್ಲಿ ಹಾಗೂ ಅಶ್ವಿನಿ ಅವರ ಮಧ್ಯೆ ಮೊದಲಿನಿಂದಲೂ ಕಿತ್ತಾಟ ನಡೆದೇ ಇದೆ. ಇವರು ಒಮ್ಮೆಯೂ ಪ್ರೀತಿಯಿಂದ ಮಾತನಾಡಿಕೊಂಡ ಉದಾಹರಣೆಯೇ ಇಲ್ಲ. ಆದರೆ, ಈ ವಾರ ಎಲ್ಲವೂ ಅದಲುಬದಲಾಗಿದೆ. ಮನೆಯವರ ತಂಟೆಗೆ ಅತಿಥಿಗಳು ಬಂದಿರೋದು ಅಶ್ವಿನಿ ಹಾಗೂ ಗಿಲ್ಲಿಗೆ ಕೋಪ ತರಿಸಿದೆ. ಈ ಕಾರಣದಿಂದಲೇ ಇಬ್ಬರೂ ಒಂದಾಗಿದ್ದಾರೆ. ಇವರ ಮಧ್ಯೆ ಇದೇ ಗೆಳೆತನ ಮುಂದುವರಿಯಲಿ ಎಂಬುದು ಫ್ಯಾನ್ಸ್ ಕೋರಿಕೆ.

ಗಿಲ್ಲಿ ನಡುವಳಿಕೆಯಿಂದ ಬೇಸರಗೊಂಡ ಅತಿಥಿಗಳು ಅಸಮಧಾನ ಹೊರಹಾಕಿದರು. ಆ ಬಳಿಕ ಇಡೀ ಮನೆ ಗಿಲ್ಲಿ ವಿರುದ್ಧ ತಿರುಗಿಬಿತ್ತು. ಈ ಕಾರಣದಿಂದಲೇ ಗಿಲ್ಲಿ ಅವರು ಸೈಲೆಂಟ್ ಆದರು. ಗಿಲ್ಲಿ ಸೈಲೆಂಟ್ ಆಗಿರೋದನ್ನು ಅಶ್ವಿನಿ ಅವರಿಗೆ ನೋಡೋಕೆ ಆಗಿಲ್ಲ. ಗಿಲ್ಲಿಯನ್ನು ಕರೆದು ಅಶ್ವಿನಿ ಸಮಧಾನ ಮಾಡಿದ್ದಾರೆ.

ಇದನ್ನೂ ಓದಿ: ಗಿಲ್ಲಿ ಆಟ ಹನುಮಂತನ 10 ಪರ್ಸೆಂಟ್ ಇಲ್ಲ; ನೇರವಾಗಿ ಹೇಳಿದ ಬಿಗ್ ಬಾಸ್ ಅತಿಥಿಗಳು

‘ಸಾಮಾನ್ಯವಾಗಿರು. ಕೂಲ್ ಆಗಿರು. ಹಿಂಸೆ ಆದರೆ ಕರಿ ಜೊತೆಗೆ ಬರ್ತೀನಿ’ ಎಂದು ಗಿಲ್ಲಿಗೆ ಬಲ ತುಂಬಿದ್ದಾರೆ. ಅವರ ಮಾತು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ಕೆಲವರು ಅತಿಥಿಗಳದ್ದು ಅತಿಯಾಯಿತು ಎನ್ನುತ್ತಿದ್ದಾರೆ. ಇನ್ನೂ ಕೆಲವರು ಗಿಲ್ಲಿ ಮೇಲೆ ಆರೋಪ ಮಾಡಿದ್ದಾರೆ. ಒಟ್ಟಿನಲ್ಲಿ ಆರೋಪ-ಪ್ರತ್ಯಾರೋಪ ಮುಂದುವರಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:37 am, Thu, 27 November 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ