AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ಅಭಿಮಾನಿಗಳ ಕಾಟಕ್ಕೆ ಹೆದರಿ ಕಮೆಂಟ್ಸ್ ಆಫ್ ಮಾಡಿದ ರಜತ್

ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿ ಗಿಲ್ಲಿ ಅಭಿಮಾನಿಗಳು ಅತಿಥಿ ರಜತ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದಾರೆ. ಗಿಲ್ಲಿಯನ್ನು ಕೆಣಕಿದ್ದಕ್ಕೆ ರಜತ್ ಅವರ ಕಮೆಂಟ್ ಬಾಕ್ಸ್‌ನಲ್ಲಿ ‘ಗಿಲ್ಲಿ ತಂಟೆಗೆ ಹೋಗಬೇಡ’ ಎಂದು ಕಮೆಂಟ್ ಮಾಡಿದ್ದಾರೆ. ಈ ಕಾಟದಿಂದ ರಜತ್ ತಮ್ಮ ಇನ್‌ಸ್ಟಾಗ್ರಾಮ್ ಕಮೆಂಟ್‌ಗಳನ್ನು ಆಫ್ ಮಾಡಿದ್ದಾರೆ.

ಗಿಲ್ಲಿ ಅಭಿಮಾನಿಗಳ ಕಾಟಕ್ಕೆ ಹೆದರಿ ಕಮೆಂಟ್ಸ್ ಆಫ್ ಮಾಡಿದ ರಜತ್
ಗಿಲ್ಲಿ-ರಜತ್
ರಾಜೇಶ್ ದುಗ್ಗುಮನೆ
|

Updated on:Nov 26, 2025 | 11:29 AM

Share

ಬಿಗ್ ಬಾಸ್ ಕನ್ನಡ ಸೀಸನ್ 12ರ (BBK 12) ಸ್ಪರ್ಧಿ ಗಿಲ್ಲಿ ನಟ ಅವರಿಗೆ ಹೊರಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಗಿಲ್ಲಿಯ ಬಗ್ಗೆ ಪಾಸಿಟಿವ್ ಕಮೆಂಟ್ ಹಾಕುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಇಷ್ಟೇ ಅಲ್ಲ, ಗಿಲ್ಲಿ ಬಗ್ಗೆ ಯಾರಾದರೂ ನೆಗೆಟಿವ್ ಆಗಿ ಮಾತನಾಡಿದರೆ ಅವರನ್ನು ಅಭಿಾಡುತ್ತಿದ್ದಾರೆ. ಈಗ ರಜತ್ ಅವರಿಗೂ ಹಾಗೆಯೇ ಆಗಿದೆ.

ರಜತ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸ್ಪರ್ಧಿಯಾಗಿದ್ದರು. ಅವರು ಈ ಬಾರಿ ದೊಡ್ಮನೆಗೆ ಅತಿಥಿಯಾಗಿ ಬಂದಿದ್ದಾರೆ. ಅವರ ಜೊತೆ ಮಂಜು, ಚೈತ್ರಾ ಮೊದಲಾದವರು ಇದ್ದಾರೆ. ಈ ವೇಳೆ ಗಿಲ್ಲಿಯನ್ನು ರಜತ್ ಕೆಣಕಿದ್ದಾರೆ. ಇದಕ್ಕೆ ಗಿಲ್ಲಿ ಕೂಡ ಖಡಕ್ ಆಗಿ ಉತ್ತರ ನೀಡಿದ್ದಾರೆ.

ಗಿಲ್ಲಿ ನಟ ಅವರನ್ನು ಒಂದೇ ಶೂನಲ್ಲಿ ಇರುವಂತೆ ಸೂಚಿಸಿದರು. ಇದು ಅವರ ಮನಸಿಗೆ ಸಾಕಷ್ಟು ನೋವನ್ನುಂಟು ಮಾಡಿದೆ. ಇದಕ್ಕೆ ಅವರು ಸೇಡು ತೀರಿಸಿಕೊಳ್ಳಲು ಮುಂದಾದರು. ಆ ಬಳಿಕ ಗಿಲ್ಲಿ ನಟ ಅವರು ರಜತ್​ಗೆ ಕೌಂಟರ್ ಕೊಡುತ್ತಾ ಬಂದರು. ಇದರಿಂದ ಉರಿದುಕೊಂಡ ರಜತ್ ಅವರು ಗಿಲ್ಲಿ ವಿರುದ್ಧ ಧ್ವನಿ ಎತ್ತಿದ್ದಾರೆ.

ಇದು ಗಿಲ್ಲಿ ಅಭಿಮಾನಿಗಳಿಗೆ ಸ್ವಲ್ಪವೂ ಇಷ್ಟ ಆಗಿಲ್ಲ. ಹೀಗಾಗಿ, ರಜತ್ ಅವರ ಇನ್​ಸ್ಟಾಗ್ರಾಮ್ ಖಾತೆಗೆ ಹೋಗಿ ಪೋಸ್ಟ್​ಗಳ ಕಮೆಂಟ್ ಬಾಕ್ಸ್​ನಲ್ಲಿ ‘ಗಿಲ್ಲಿ ತಂಟೆಗೆ ಹೋಗಬೇಡ’ ಎಂದೆಲ್ಲ ಬರೆದಿದ್ದಾರೆ. ಈ ಕಾರಣಕ್ಕೆ ರಜತ್ ಅವರ ಸೋಶಿಯಲ್ ಮೀಡಿಯಾ ಖಾತೆ ನೋಡಿಕೊಳ್ಳುವವರು ಕಮೆಂಟ್ ಬಾಕ್ಸ್ ಆಫ್ ಮಾಡಿದ್ದಾರೆ. ಇದು ಗಿಲ್ಲಿ ತಾಕತ್ತು ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಮನುಷ್ಯರ ಜಾತಿಗೆ ಸೇರಿದವರು ಅರ್ಥಮಾಡಿಕೊಳ್ಳಬೇಕು; ಗಿಲ್ಲಿ ಮಾತಿಗೆ ಉರಿದು ಬಿದ್ದ ರಜತ್ ಸಭ್ಯತೆಯ ಚೌಕಟ್ಟಿನಲ್ಲಿ ಅತಿಥಿಗಳನ್ನ ರೋಸ್ಟ್ ಮಾಡುವಂತೆ ಬಿಗ್ ಬಾಸ್ ಸೂಚನೆ ಕೊಟ್ಟಿದ್ದರು. ಆದರೆ, ಗಿಲ್ಲಿ ಅವರು ಈ ಸಂದರ್ಭದಲ್ಲಿ ಎಲ್ಲೆ ಮೀರಿದಂತೆ ಇದೆ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಬಂದ ಅತಿಥಿಗಳ ಊಟದ ವಿಷಯದಲ್ಲಿ ಗಿಲ್ಲಿ ಕೆಟ್ಟದಾಗಿ ಮಾತನಾಡಿದ್ದು, ಅನೇಕರಿಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:13 am, Wed, 26 November 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ