AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸದಾಶಿವ ನಗರದಲ್ಲಿ ಮನೆ ಇದೆ, ಇದು 40 ಸಾವಿರ ರೂಪಾಯಿ ಬನಿಯನ್’; ಆಸ್ತಿ ವಿವರ ಹೇಳಿದ ಗಿಲ್ಲಿ ನಟ

ಬಿಗ್ ಬಾಸ್‌ನಲ್ಲಿ ರಿಷಾ ಸಿಂಪತಿ ಕಾರ್ಡ್ ಆರೋಪಕ್ಕೆ ಗಿಲ್ಲಿ, ತಾನು ಶ್ರೀಮಂತ ಎಂದು ಹೇಳಿದ್ದಾರೆ. "ಸದಾಶಿವನಗರದಲ್ಲಿ ಮನೆ, 40 ಸಾವಿರ ರೂಪಾಯಿ ಬನಿಯನ್, ಇಂಗ್ಲೆಂಡ್ ಪ್ಯಾಂಟ್ ಇದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಗಿಲ್ಲಿ ಮೂಲತಃ ರೈತಾಪಿ ಕುಟುಂಬದವರು. ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಷ್ಟಗಳನ್ನು ಅನುಭವಿಸಿದ್ದಾರೆ.

‘ಸದಾಶಿವ ನಗರದಲ್ಲಿ ಮನೆ ಇದೆ, ಇದು 40 ಸಾವಿರ ರೂಪಾಯಿ ಬನಿಯನ್’; ಆಸ್ತಿ ವಿವರ ಹೇಳಿದ ಗಿಲ್ಲಿ ನಟ
ಗಿಲ್ಲಿ ನಟ
ರಾಜೇಶ್ ದುಗ್ಗುಮನೆ
|

Updated on: Nov 04, 2025 | 1:15 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಸಿಂಪತಿ ಕಾರ್ಡ್ ಚೆನ್ನಾಗಿ ಕೆಲಸ ಮಾಡುತ್ತದೆ ಅನ್ನೋದು ಎಲ್ಲರಿಗೂ ಗೊತ್ತು. ಕೆಲವರು ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿದರೆ, ಇನ್ನೂ ಕೆಲವರು ತಾವು ಇರೋದೇ ಹೀಗೆ ಎಂದು ಸಿಂಪಲ್ ಆಗಿರುತ್ತಾರೆ. ಕಳೆದ ಬಾರಿ ಬಿಗ್ ಬಾಸ್ ಮನೆಯಲ್ಲಿದ್ದ ಹನುಮಂತ ಲುಂಗಿ, ಶರ್ಟ್​ನಲ್ಲೇ ಸೀಸನ್ ಕಳೆದರು. ಅವರು ವಿನ್ ಕೂಡ ಆದರು. ಈ ಬಾರಿ ಗಿಲ್ಲಿ ನಟ ಅವರು, ಬನಿಯನ್​ನಲ್ಲೇ ಇರುತ್ತಿದ್ದಾರೆ. ಇದಕ್ಕೆ ರಿಷಾ ಬೇರೆ ಅರ್ಥ ಕೊಟ್ಟರು. ಅವರಿಗೆ ಗಿಲ್ಲಿ ಕೌಂಟರ್ ಕೊಟ್ಟಿದ್ದಾರೆ.

ಗಿಲ್ಲಿ ಹಾಗೂ ರಿಷಾ ಮಧ್ಯೆ ಸಾಕಷ್ಟು ಕಿತ್ತಾಟ ನಡೆದವು. ಗಿಲ್ಲಿ ಮೇಲೆ ಕೈ ಕೂಡ ಮಾಡಿದ್ದಾರೆ ರಿಷಾ. ಈ ವಿಚಾರದಲ್ಲಿ ಯಾವ ರೀತಿಯಲ್ಲಿ ಅವರಿಗೆ ಶಿಕ್ಷೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಹೀಗಿರುವಾಗಲೇ ‘ನೀನು ಸಿಂಪತಿಗಿಟ್ಟಿಸಿಕೊಳ್ಳಲು ಬನಿಯನ್ ಹಾಕಿ ಓಡಾಡ್ತೀಯಾ’ ಎಂದು ರಿಷಾ ಹೇಳಿದರು. ಇದಕ್ಕೆ ಗಿಲ್ಲಿ ಉತ್ತರಿಸಿದ್ದಾರೆ.

‘ನಾನು ಶ್ರೀಮಂತ. ಶ್ರೀಮಂತರೂ ಬನಿಯನ್ ಹಾಕ್ತಾರೆ. ನಮ್ಮ ಅಪ್ಪಂದು ಐಟಿ ಕಂಪನಿ ಇದೆ. 500 ಶಿಪ್ ಇದೆ. 800 ಗೋವುಗಳು ಇವೆ. ಬೆಂಗಳೂರಿನ ಸದಾಶಿವನಗರದಲ್ಲಿ ನಾಲ್ಕು ಮನೆ ಇದೆ. ನಾವು ಫುಲ್ ಸೆಟಲ್ಡ್’ ಎಂದರು ಗಿಲ್ಲಿ. ಆ ಬಳಿಕ ಬಟ್ಟೆಗಳ ಬೆಲೆ ಹೇಳಿದರು. ‘ಈ ಬನಿಯನ್ ಬೆಲೆ 40 ಸಾವಿರ ರೂಪಾಯಿ. ಇದು ಇಂಗ್ಲೆಂಡ್ ಪ್ಯಾಂಟ್. ಇದನ್ನು ತೊಳಿಯಬೇಕು ಎಂದಿಲ್ಲ. ಕುಡುಗಿದ್ರೆ ಕೊಳೆ ಉದುರಿ ಹೋಗುತ್ತದೆ’ ಎಂದು ರಿಷಾ ಗೌಡಗೆ ಟಾಂಟ್ ಕೊಟ್ಟರು. ಈ ವಿಡಿಯೋನ ಗಿಲ್ಲಿ ಅಭಿಮಾನಿಗಳು ವೈರಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ನಿನ್ನ ಪಾಡಿಗೆ ನೀನಿರು, ನನ್ನ ಪಾಡಿಗೆ ನಾನಿರ್ತೀನಿ’; ಸೂರಜ್​ಗೆ ನೇರವಾಗಿ ಹೇಳಿದ ರಾಶಿಕಾ

ಗಿಲ್ಲಿ ಸಾಕಷ್ಟು ಕಷ್ಟ ನೋಡಿದವರು. ಅವರು ರೈತಾಪಿ ಹಿನ್ನೆಲೆಯಿಂದ ಬಂದವರು. ಬೆಂಗಳೂರಿನಲ್ಲಿ ಅವರು ಒಂದು ಸಣ್ಣ ರೂಂನಲ್ಲಿ ಬಾಡಿಗೆ ಇದ್ದಾರೆ. ಲಗ್ಗೇರಿ ಬಳಿ ಅವರ ಬಾಡಿಗೆ ಮನೆ ಇದೆ. ಕಲಾ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರವನ್ನು ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ