AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ದರ್ಶನ್ ನೆನಪಿಸಿದ ಗಿಲ್ಲಿ ಡೈಲಾಗ್; ಡಿ ಬಾಸ್ ಫ್ಯಾನ್ಸ್​ಗೆ ಖುಷಿಯೋ ಖುಷಿ

ಗಿಲ್ಲಿ ನಟ ಬಿಗ್ ಬಾಸ್ ಮನೆಯಲ್ಲಿ ದರ್ಶನ್ ಅವರ ಜನಪ್ರಿಯ ಡೈಲಾಗ್‌ ಅನ್ನು ಅನುಕರಿಸುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅಕ್ಟೋಬರ್ 24ರ ಎಪಿಸೋಡ್‌ನಲ್ಲಿ ಇದು ಪ್ರಸಾರವಾಗಿದ್ದು, ದರ್ಶನ್ ಅಭಿಮಾನಿಗಳು ಗಿಲ್ಲಿ ಅವರ ಈ ನಡೆಯಿಂದ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿದ್ದಾರೆ.

ಬಿಗ್ ಬಾಸ್​ನಲ್ಲಿ ದರ್ಶನ್ ನೆನಪಿಸಿದ ಗಿಲ್ಲಿ ಡೈಲಾಗ್; ಡಿ ಬಾಸ್ ಫ್ಯಾನ್ಸ್​ಗೆ ಖುಷಿಯೋ ಖುಷಿ
ದರ್ಶನ್-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on: Oct 25, 2025 | 1:53 PM

Share

ಗಿಲ್ಲಿ ನಟ ಅವರು ಬಿಗ್ ಬಾಸ್​ನಲ್ಲಿ (Bigg Boss) ಛಾಪು ಮೂಡಿಸುತ್ತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಬಿಗ್ ಬಾಸ್​​ನಲ್ಲಿ ಅವರ ಆಟ ಅನೇಕರಿಗೆ ಇಷ್ಟ ಆಗುತ್ತಿದೆ. ಹೀಗಿರುವಾಗಲೇ ಅವರು ದರ್ಶನ್ ಅಭಿಮಾನಿಗಳಿಗೆ ಖುಷಿ ಆಗುವಂತೆ ಬಿಗ್ ಬಾಸ್ ಮನೆಯಲ್ಲಿ ನಡೆದುಕೊಂಡಿದ್ದಾರೆ. ಅಕ್ಟೋಬರ್ 24ರ ಎಪಿಸೋಡ್​ನಲ್ಲಿ ಇದು ಟೆಲಿಕಾಸ್ಟ್ ಮಾಡಲಾಗಿದೆ.

ಗಿಲ್ಲಿ ನಟ ಅವರು ದೊಡ್ಮನೆಯಲ್ಲಿ ಭರ್ಜರಿ ಮನರಂಜನೆ ನೀಡುತ್ತಿದ್ದಾರೆ. ಅನೇಕರನ್ನು ಅವರು ಅನುಕರಿಸ ಬಲ್ಲರು. ಇನ್ನು ಸಮಯ ಸಿಕ್ಕಾಗ ಅವರು ಪ್ರಾಪರ್ಟಿ ಕಾಮಿಡಿ ಕೂಡ ಮಾಡುತ್ತಿದ್ದಾರೆ. ಅಶ್ವಿನಿ ಗೌಡ ಅವರಿಗೆ ಉರಿಸೋದರಲ್ಲಿ ಅವರು ಸದಾ ಮುಂದು. ಈಗ ವೀಕೆಂಡ್ ವಿತ್ ರಮೇಶ್​ನಲ್ಲಿ ದರ್ಶನ್ ಹೇಳಿದ್ದ ಡೈಲಾಗ್​ನ ಅವರು ಸಂಭಾಷಣೆ ಒಂದರಲ್ಲಿ ಅನುಕರಿಸಿದ್ದಾರೆ.

ರಘು ಈ ವಾರದ ಕ್ಯಾಪ್ಟನ್ ಆದರು. ಗಿಲ್ಲಿ ‘ನಾನು ಉಪ ನಾಯಕ’ ಎಂದು ಹೇಳಿಕೊಳ್ಳುತ್ತಾ ಬಂದರು. ಆಗ ಕಾವ್ಯಾ ಅವರು, ‘ನೀನೇ ಕ್ಯಾಪ್ಟನ್ಸಿಯನ್ನು ಸಂಪಾದಿಸಿಕೊಳ್ಳಬೇಕು’ ಎಂದರು. ‘ನಾನೇ ಸಂಪಾದಿಸಿ ಉಪನಾಯಕ ಆಗಿರೋದು. ನನಗೆ ನಾನೇ ಸ್ಟ್ಯಾಂಡ್ ತೆಗೆದುಕೊಂಡಿದ್ದು. ಯಾರು ನನಗೆ ಸ್ಟ್ಯಾಂಡ್ ಆಗಿಲ್ಲಿ. ಆ ಟೈಮ್​ ಅಲ್ಲಿ ಯಾರೂ ಬಂದಿಲ್ಲ. ಅರ್ಥ ಮಾಡಿಕೊಳ್ಳಿ’ ಎಂದು ದರ್ಶನ್ ಸ್ಟೈಲ್​ನಲ್ಲೇ ಗಿಲ್ಲಿ ಮಾತನಾಡಿದ್ದಾರೆ.

ಗಿಲ್ಲಿ ನಟ

ಈ ಮೊದಲು ದರ್ಶನ್ ಅವರು ‘ ನಾನು ಬೆಂಗಳೂರಿಗೆ ಬಂದಾಗ ಯಾರು ಇರಲಿಲ್ಲ ಸರ್. ಈಗ ಸಾಕಷ್ಟು ಆಸ್ತಿ ಇದೆ. ಅದಕ್ಕೆ ಏನೇನೋ ಆಗಿದೆ. 500 ರೂಪಾಯಿ ಇಟ್ಟುಕೊಂಡು ಬೆಂಗಳೂರಿಗೆ ಬಂದಿದ್ದೆ. ಫ್ಯಾಮಿಲಿಯವರೆಲ್ಲ ವೇಸ್ಟ್. ಅವರು ನಮ್ಮನ್ನು ನೋಡಿಕೊಳ್ಳಲ್ಲ’ ಎಂದು ಹೇಳಿದ್ದರು.

ಇದನ್ನೂ ಓದಿ: ‘ನನ್ನ ಸಕ್ಸಸ್​ಗೆ ದರ್ಶನ್ ಕಾರಣ’; ಬಿಗ್ ಬಾಸ್​ ರಘು ಮಾತು

ಈ ವಿಡಿಯೋನ ದರ್ಶನ್ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ದರ್ಶನ ಹಾಡು ಮೊಳಗೋದು ತುಂಬಾನೇ ಕಡಿಮೆ. ದರ್ಶನ್ ಹಾಡನ್ನು ಹಾಕೋದೇ ಇಲ್ಲ ಎಂದರೂ ತಪ್ಪಾಗಲಾರದು. ಈಗ ಗಿಲ್ಲಿ ಅವರು ದರ್ಶನ್ ಡೈಲಾಗ್ ಹೇಳಿದ್ದಕ್ಕೆ ಅವರ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ