AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ದರ್ಶನ್ ನೆನಪಿಸಿದ ಗಿಲ್ಲಿ ಡೈಲಾಗ್; ಡಿ ಬಾಸ್ ಫ್ಯಾನ್ಸ್​ಗೆ ಖುಷಿಯೋ ಖುಷಿ

ಗಿಲ್ಲಿ ನಟ ಬಿಗ್ ಬಾಸ್ ಮನೆಯಲ್ಲಿ ದರ್ಶನ್ ಅವರ ಜನಪ್ರಿಯ ಡೈಲಾಗ್‌ ಅನ್ನು ಅನುಕರಿಸುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅಕ್ಟೋಬರ್ 24ರ ಎಪಿಸೋಡ್‌ನಲ್ಲಿ ಇದು ಪ್ರಸಾರವಾಗಿದ್ದು, ದರ್ಶನ್ ಅಭಿಮಾನಿಗಳು ಗಿಲ್ಲಿ ಅವರ ಈ ನಡೆಯಿಂದ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿದ್ದಾರೆ.

ಬಿಗ್ ಬಾಸ್​ನಲ್ಲಿ ದರ್ಶನ್ ನೆನಪಿಸಿದ ಗಿಲ್ಲಿ ಡೈಲಾಗ್; ಡಿ ಬಾಸ್ ಫ್ಯಾನ್ಸ್​ಗೆ ಖುಷಿಯೋ ಖುಷಿ
ದರ್ಶನ್-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on: Oct 25, 2025 | 1:53 PM

Share

ಗಿಲ್ಲಿ ನಟ ಅವರು ಬಿಗ್ ಬಾಸ್​ನಲ್ಲಿ (Bigg Boss) ಛಾಪು ಮೂಡಿಸುತ್ತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಬಿಗ್ ಬಾಸ್​​ನಲ್ಲಿ ಅವರ ಆಟ ಅನೇಕರಿಗೆ ಇಷ್ಟ ಆಗುತ್ತಿದೆ. ಹೀಗಿರುವಾಗಲೇ ಅವರು ದರ್ಶನ್ ಅಭಿಮಾನಿಗಳಿಗೆ ಖುಷಿ ಆಗುವಂತೆ ಬಿಗ್ ಬಾಸ್ ಮನೆಯಲ್ಲಿ ನಡೆದುಕೊಂಡಿದ್ದಾರೆ. ಅಕ್ಟೋಬರ್ 24ರ ಎಪಿಸೋಡ್​ನಲ್ಲಿ ಇದು ಟೆಲಿಕಾಸ್ಟ್ ಮಾಡಲಾಗಿದೆ.

ಗಿಲ್ಲಿ ನಟ ಅವರು ದೊಡ್ಮನೆಯಲ್ಲಿ ಭರ್ಜರಿ ಮನರಂಜನೆ ನೀಡುತ್ತಿದ್ದಾರೆ. ಅನೇಕರನ್ನು ಅವರು ಅನುಕರಿಸ ಬಲ್ಲರು. ಇನ್ನು ಸಮಯ ಸಿಕ್ಕಾಗ ಅವರು ಪ್ರಾಪರ್ಟಿ ಕಾಮಿಡಿ ಕೂಡ ಮಾಡುತ್ತಿದ್ದಾರೆ. ಅಶ್ವಿನಿ ಗೌಡ ಅವರಿಗೆ ಉರಿಸೋದರಲ್ಲಿ ಅವರು ಸದಾ ಮುಂದು. ಈಗ ವೀಕೆಂಡ್ ವಿತ್ ರಮೇಶ್​ನಲ್ಲಿ ದರ್ಶನ್ ಹೇಳಿದ್ದ ಡೈಲಾಗ್​ನ ಅವರು ಸಂಭಾಷಣೆ ಒಂದರಲ್ಲಿ ಅನುಕರಿಸಿದ್ದಾರೆ.

ರಘು ಈ ವಾರದ ಕ್ಯಾಪ್ಟನ್ ಆದರು. ಗಿಲ್ಲಿ ‘ನಾನು ಉಪ ನಾಯಕ’ ಎಂದು ಹೇಳಿಕೊಳ್ಳುತ್ತಾ ಬಂದರು. ಆಗ ಕಾವ್ಯಾ ಅವರು, ‘ನೀನೇ ಕ್ಯಾಪ್ಟನ್ಸಿಯನ್ನು ಸಂಪಾದಿಸಿಕೊಳ್ಳಬೇಕು’ ಎಂದರು. ‘ನಾನೇ ಸಂಪಾದಿಸಿ ಉಪನಾಯಕ ಆಗಿರೋದು. ನನಗೆ ನಾನೇ ಸ್ಟ್ಯಾಂಡ್ ತೆಗೆದುಕೊಂಡಿದ್ದು. ಯಾರು ನನಗೆ ಸ್ಟ್ಯಾಂಡ್ ಆಗಿಲ್ಲಿ. ಆ ಟೈಮ್​ ಅಲ್ಲಿ ಯಾರೂ ಬಂದಿಲ್ಲ. ಅರ್ಥ ಮಾಡಿಕೊಳ್ಳಿ’ ಎಂದು ದರ್ಶನ್ ಸ್ಟೈಲ್​ನಲ್ಲೇ ಗಿಲ್ಲಿ ಮಾತನಾಡಿದ್ದಾರೆ.

ಗಿಲ್ಲಿ ನಟ

ಈ ಮೊದಲು ದರ್ಶನ್ ಅವರು ‘ ನಾನು ಬೆಂಗಳೂರಿಗೆ ಬಂದಾಗ ಯಾರು ಇರಲಿಲ್ಲ ಸರ್. ಈಗ ಸಾಕಷ್ಟು ಆಸ್ತಿ ಇದೆ. ಅದಕ್ಕೆ ಏನೇನೋ ಆಗಿದೆ. 500 ರೂಪಾಯಿ ಇಟ್ಟುಕೊಂಡು ಬೆಂಗಳೂರಿಗೆ ಬಂದಿದ್ದೆ. ಫ್ಯಾಮಿಲಿಯವರೆಲ್ಲ ವೇಸ್ಟ್. ಅವರು ನಮ್ಮನ್ನು ನೋಡಿಕೊಳ್ಳಲ್ಲ’ ಎಂದು ಹೇಳಿದ್ದರು.

ಇದನ್ನೂ ಓದಿ: ‘ನನ್ನ ಸಕ್ಸಸ್​ಗೆ ದರ್ಶನ್ ಕಾರಣ’; ಬಿಗ್ ಬಾಸ್​ ರಘು ಮಾತು

ಈ ವಿಡಿಯೋನ ದರ್ಶನ್ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ದರ್ಶನ ಹಾಡು ಮೊಳಗೋದು ತುಂಬಾನೇ ಕಡಿಮೆ. ದರ್ಶನ್ ಹಾಡನ್ನು ಹಾಕೋದೇ ಇಲ್ಲ ಎಂದರೂ ತಪ್ಪಾಗಲಾರದು. ಈಗ ಗಿಲ್ಲಿ ಅವರು ದರ್ಶನ್ ಡೈಲಾಗ್ ಹೇಳಿದ್ದಕ್ಕೆ ಅವರ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ