AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ವಿರುದ್ಧ ನೆಗೆಟಿವ್ ಪಿಆರ್ ಮಾಡ್ತಿರೋದು ಯಾರು? ದೊಡ್ಡ ಸಾಕ್ಷಿ ತಂದ ಫ್ಯಾನ್ಸ್

ವಿನಯ್ ಗೌಡರ ಹೇಳಿಕೆಯಂತೆ ಗಿಲ್ಲಿ ವಿರುದ್ಧ ವ್ಯವಸ್ಥಿತ ನೆಗೆಟಿವ್ ಪ್ರಚಾರ ನಡೆಯುತ್ತಿದೆ. ಕೆಲವು ಪಿಆರ್ ಏಜೆನ್ಸಿಗಳು ನಕಲಿ ಪೋಸ್ಟ್‌ಗಳನ್ನು ಬಳಸಿ ಅವರ ಜನಪ್ರಿಯತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿವೆ. ಗಿಲ್ಲಿ ಅಭಿಮಾನಿಗಳು ಇದನ್ನ ಖಚಿತಪಡಿಸಲು ಮೂರು ಒಂದೇ ರೀತಿಯ ಪೋಸ್ಟ್‌ಗಳನ್ನು ಪತ್ತೆ ಹಚ್ಚಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿರುವ ಈ ಕುತಂತ್ರದ ಬಗ್ಗೆ ಹಲವು ಪ್ರಶ್ನೆಗಳು ಮೂಡಿವೆ.

ಗಿಲ್ಲಿ ವಿರುದ್ಧ ನೆಗೆಟಿವ್ ಪಿಆರ್ ಮಾಡ್ತಿರೋದು ಯಾರು? ದೊಡ್ಡ ಸಾಕ್ಷಿ ತಂದ ಫ್ಯಾನ್ಸ್
ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on: Jan 03, 2026 | 3:01 PM

Share

ವಿನಯ್ ಗೌಡ ಅವರು ಇತ್ತೀಚೆಗೆ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ ಒಂದು ಶಾಕಿಂಗ್ ವಿಷಯ ಹೇಳಿದ್ದರು. ‘ಕೆಲವು ಪಿಆರ್​​ಗಳು ಗಿಲ್ಲಿ  ನಟ (Gilli Nata) ವಿರುದ್ಧ ನೆಗೆಟಿವ್ ಪ್ರಚಾರ ಮಾಡುತ್ತದ್ದಾರೆ’ ಎಂದಿದ್ದರು. ಇದು ನಿಜವಾಗಿದೆ. ಇದನ್ನು ಫ್ಯಾನ್ಸ್ ಸಾಕ್ಷಿ ಸಮೇತ ಹಿಡಿದಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳಲಾಗಿದೆ.

ಗಿಲ್ಲಿ ನಟ ಅವರದ್ದು ಎಲ್ಲರಿಗೂ ಇಷ್ಟ ಆಗೋ ವ್ಯಕ್ತಿತ್ವ. ಡೈಲಾಗ್ ಮೂಲಕ ತಮ್ಮ ಮಾತಿನ ಮೂಲಕ ಅವರು ಎಲ್ಲರ ಮನಸ್ಸು ಗೆದ್ದಿದ್ದಾರೆ. ಅವರು ಮಾಡೋ ಕಾಮಿಡಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅದರಲ್ಲೂ ಸಿನಿಮಾ ದೃಶ್ಯಗಳನ್ನು ಮನೆಯಲ್ಲಿ ನಡೆಯುವ ಘಟನೆಗಳಿಗೆ ಹೋಲಿಸಿ ಮಾಡುವ ಕಾಮಿಡಿಗಳು ಅದ್ಭುತವಾಗಿ ಇರುತ್ತವೆ. ಇಷ್ಟೆಲ್ಲ ಜನಪ್ರಿಯತೆ ಪಡೆದರೂ ಅವರ ವಿರುದ್ಧ ಕೆಲವರು ದ್ಷೇಷ ಹುಟ್ಟುವಂತೆ ಮಾಡುತ್ತಿದ್ದಾರೆ.

ಇದನ್ನೂ ಓದಿ:  ಕ್ಯಾಪ್ಟನ್ಸಿ ನಂಗೇ ಕೊಡಿ ಎಂದು ಬಿಗ್ ಬಾಸ್ ಬಳಿ ಹಠ ಹಿಡಿದ ಅಶ್ವಿನಿ; ಇದೆಂಥಾ ಲಾಜಿಕ್?

ರಿಯಾಲಿಟಿ ಶೋ ಎಂದಾಗ ಎಲ್ಲಾ ವೀಕ್ಷಕರು ಓರ್ವ ಸ್ಪರ್ಧಿಗೆ ಅಭಿಮಾನಿಯಾಗಬೇಕು ಎಂಬ ನಿಯಮ ಏನು ಇಲ್ಲ. ಕೆಲವರಿಗೆ ಗಿಲ್ಲಿ ಹಾಗೂ ಅವನ ಮಾತು ಇಷ್ಟ ಆದರೆ, ಇನ್ನೂ ಕೆಲವರಿಗೆ ಅದು ಸರಿಯಾದ ಮಾತಲ್ಲ ಎನಿಸಬಹುದು. ಹೀಗಾಗಿ, ಫ್ಯಾನ್ಸ್ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಕಿತ್ತಾಟ ನಡೆಯೋದು ಸಾಮಾನ್ಯ. ಉಳಿದ ಸ್ಪರ್ಧಿಗಳ ಫ್ಯಾನ್ಸ್ ಗಿಲ್ಲಿ ವಿರುದ್ಧ ಪೋಸ್ಟ್ ಕೂಡ ಹಾಕಬಹುದು. ಆದರೆ, ಕೆಲವರು ಉದ್ದೇಶಪೂರ್ವಕವಾಗಿ ಗಿಲ್ಲಿ ವಿರುದ್ಧ ನೆಗೆಟಿವ್ ಪೋಸ್ಟ್ ಹಾಕುತ್ತಿರುವುದನ್ನು ಅವರ ಅಭಿಮಾನಿಗಳು ಕಂಡು ಹಿಡಿದಿದ್ದಾರೆ.

‘ಕಾವ್ಯಾ, ಅಶ್ವಿನಿ, ಧ್ರುವಂತ್ ಇಲ್ಲದೆ ಗಿಲ್ಲಿ ಏನೂ ಅಲ್ಲ. ಅವರಿಗೆ ರಿಯಾಕ್ಟ್ ಮಾಡಿದರೆ ಇವನಿಗೆ ಕಂಟೆಂಟ್. ಟಾಸ್ಕ್​​ನಲ್ಲಿ ಸೊನ್ನೆ, ಮನೆ ಕೆಲಸದಲ್ಲಿ ಸೊನ್ನೆ, ಬರೀ ಟ್ರಿಗರ್ ಮಾಡಿ ಕಂಟೆಂಟ್ ತೆಗೆದುಕೊಳ್ಳೋದು. ಈ ರೀತಿ ವಿನ್ ಆಗೋದ್ರಲ್ಲಿ ಏನರ್ಥವಿದೆ’ ಎಂಬ ಪೋಸ್ಟ್ ಹಂಚಿಕೊಳ್ಳಲಾಗಿದೆ. ಈ ಒಂದು ಪೋಸ್ಟರ್​ನ ಮೂರು ಖಾತೆಗಳ ಮೂಲಕ ಒಂದಕ್ಷರವೂ ಬದಲಾಗದಂತೆ ಹಂಚಿಕೊಳ್ಳಲಾಗಿದೆ. ಇದು ಯಾರೋ ಉದ್​ದೇಶಪೂರ್ವಕವಾಗಿ ಮಾಡುತ್ತಿರುವ ಕಿತಾಪತಿ ಎಂದು ಫ್ಯಾನ್ಸ್ ಕಂಡು ಹಿಡಿದಿದ್ದಾರೆ. ಈ ಕೆಲಸ ಮಾಡುತ್ತಿರುವವರು ಯಾರು ಎಂಬ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ