AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟನಿಗೆ ಅಭಿಮಾನಿಯಿಂದ ಗಂಭೀರ ಆರೋಪ ಎದುರಾಗಿದೆ. ಗಿಲ್ಲಿ ಫೋಟೋ ಹಚ್ಚೆ ಹಾಕಿಸಿಕೊಂಡ ಅಭಿಮಾನಿ, ‘ಗಿಲ್ಲಿ ಅಭಿಮಾನಿಗಳನ್ನು ಗೌರವಿಸುವುದಿಲ್ಲ, ಭೇಟಿ ಮಾಡುವ ಭರವಸೆ ಉಳಿಸಿಕೊಳ್ಳಲಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣ, ಗಿಲ್ಲಿಯ ಅಗಾಧ ಜನಪ್ರಿಯತೆ ಈಗ ಅವರಿಗೆ ಮುಳುವಾಯಿತೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ
ಗಿಲ್ಲಿ ನಟ
ರಾಜೇಶ್ ದುಗ್ಗುಮನೆ
|

Updated on: Feb 02, 2026 | 7:04 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ (Gilli Nata) ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಾಗಿ ಬೆಳೆದಿದೆ. ಅವರ ಫೋಟೋನ ಕೈ ಮೇಲೆ ಹಚ್ಚೆ ಹಾಕಿಸಿಕೊಂಡವರೂ ಇದ್ದಾರೆ. ಈಗ ಅದೇ ವ್ಯಕ್ತಿ ಗಿಲ್ಲಿ ನಟನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ಹಲವು ಮಾಧ್ಯಮಗಳಿಗೆ ಅವರು ಸಂದರ್ಶನ ನೀಡುತ್ತಿದ್ದು, ವಾಗ್ದಾಳಿ ಮುಂದುವರಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿರೋವಾಗ ಗಿಲ್ಲಿ ಸಾಕಷ್ಟು ಹಾಸ್ಯ ಮಾಡಿದರು. ಅಗತ್ಯ ಇದ್ದಾಗ ತಿರುಗೇಟು ನೀಡಿದರು. ಇದರಿಂದ ಅವರಿಗೆ ದೊಡ್ಡ ಮಟ್ಟದಲ್ಲಿ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಪ್ರತಿ ಬಾರಿ ಬಿಗ್ ಬಾಸ್ ಶುರುವಾದಾಗಲೂ ಓರ್ವ ಸ್ಪರ್ಧಿಗೆ ಸಾಕಷ್ಟು ಫ್ಯಾನ್ಸ್ ಸಿಗೋದು ಸಾಮಾನ್ಯ. ಆದರೆ, ಗಿಲ್ಲಿಗೆ ಸಿಕ್ಕಷ್ಟು ದೊಡ್ಡ ಅಭಿಮಾನಿ ಬಳಗ ಇನ್ಯಾರಿಗೂ ಸಿಕ್ಕಿರಲಿಲ್ಲ. ಆದರೆ, ಅಭಿಮಾನಿಗಳನ್ನು ಗಿಲ್ಲಿ ಗೌರವಿಸುತ್ತಿಲ್ಲ ಎಂಬುದು ಅಭಿಮಾನಿಗಳ ಆರೋಪ.

View this post on Instagram

A post shared by BOSS TV (@bosstvkannada)

ಬಾಸ್​ ಟಿವಿ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರೋ ಟ್ಯಾಟೂ ಅಭಿಮಾನಿ, ‘ಅವರಲ್ಲಿ ಟ್ಯಾಲೆಂಟ್ ಇತ್ತು. ಅದನ್ನು ನಾವು ಹೊರಗೆ ತಂದಿದ್ದೀವಿ. ಅವರು ಅಭಿಮಾನಿಗಳನ್ನು ಭೇಟಿ ಮಾಡಬೇಕಿತ್ತು, ಮಾಡುತ್ತಿಲ್ಲ. ಬಿಗ್ ಬಾಸ್ ಮನೆಯಲ್ಲಿದ್ದಾಗ ನನ್ನನ್ನು ಹೊರ ಹೋದ ತಕ್ಷಣ ಭೇಟಿ ಮಾಡ್ತೀನಿ ಎಂದಿದ್ರು, ಆದರೆ ಭೇಟಿ ಮಾಡಿಲ್ಲ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅನುಶ್ರೀ ಕಾಲಿಗೆ ಬಿದ್ದ ಗಿಲ್ಲಿ ನಟ; ಶಾಕ್ ಆದ ಆ್ಯಂಕರ್

ಗಿಲ್ಲಿ ನಟ ಅವರು ಇನ್​​ಸ್ಟಾಗ್ರಾಮ್​​ನಲ್ಲಿ 20 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ಬಿಗ್ ಬಾಸ್ ಸ್ಪರ್ಧಿಗೆ ಇಷ್ಟ ದೊಡ್ಡ ಮಟ್ಟದಲ್ಲಿ ಅಭಿಮಾನಿ ವರ್ಗ ಸಿಕ್ಕಿದ್ದು ಇದೇ ಮೊದಲು. ಆದರೆ, ಈಗ ಅವರಿಗೆ ಅಭಿಮಾನವೇ ಮುಳವಾಯಿತೇ ಎನ್ನುವ ಪ್ರಶ್ನೆ ಮೂಡಿದೆ. ಕೆಲ ನಿಜವಾದ ಫ್ಯಾನ್ಸ್, ‘ನಿನ್ನನ್ನು ಗಿಲ್ಲಿ ಭೇಟಿ ಮಾಡಲೇಬಾರದು’ ಎಂದಿದ್ದಾರೆ.  ಗಿಲ್ಲಿ ಅವರು ಸದ್ಯ ನಿರ್ದೇಶನ ಮಾಡುವ ಆಲೋಚನೆ ಹೊಂದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?