AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟನಿಗೆ ಅಭಿಮಾನಿಯಿಂದ ಗಂಭೀರ ಆರೋಪ ಎದುರಾಗಿದೆ. ಗಿಲ್ಲಿ ಫೋಟೋ ಹಚ್ಚೆ ಹಾಕಿಸಿಕೊಂಡ ಅಭಿಮಾನಿ, ‘ಗಿಲ್ಲಿ ಅಭಿಮಾನಿಗಳನ್ನು ಗೌರವಿಸುವುದಿಲ್ಲ, ಭೇಟಿ ಮಾಡುವ ಭರವಸೆ ಉಳಿಸಿಕೊಳ್ಳಲಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣ, ಗಿಲ್ಲಿಯ ಅಗಾಧ ಜನಪ್ರಿಯತೆ ಈಗ ಅವರಿಗೆ ಮುಳುವಾಯಿತೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ
ಗಿಲ್ಲಿ ನಟ
ರಾಜೇಶ್ ದುಗ್ಗುಮನೆ
|

Updated on: Feb 02, 2026 | 7:04 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ (Gilli Nata) ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಾಗಿ ಬೆಳೆದಿದೆ. ಅವರ ಫೋಟೋನ ಕೈ ಮೇಲೆ ಹಚ್ಚೆ ಹಾಕಿಸಿಕೊಂಡವರೂ ಇದ್ದಾರೆ. ಈಗ ಅದೇ ವ್ಯಕ್ತಿ ಗಿಲ್ಲಿ ನಟನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ಹಲವು ಮಾಧ್ಯಮಗಳಿಗೆ ಅವರು ಸಂದರ್ಶನ ನೀಡುತ್ತಿದ್ದು, ವಾಗ್ದಾಳಿ ಮುಂದುವರಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿರೋವಾಗ ಗಿಲ್ಲಿ ಸಾಕಷ್ಟು ಹಾಸ್ಯ ಮಾಡಿದರು. ಅಗತ್ಯ ಇದ್ದಾಗ ತಿರುಗೇಟು ನೀಡಿದರು. ಇದರಿಂದ ಅವರಿಗೆ ದೊಡ್ಡ ಮಟ್ಟದಲ್ಲಿ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಪ್ರತಿ ಬಾರಿ ಬಿಗ್ ಬಾಸ್ ಶುರುವಾದಾಗಲೂ ಓರ್ವ ಸ್ಪರ್ಧಿಗೆ ಸಾಕಷ್ಟು ಫ್ಯಾನ್ಸ್ ಸಿಗೋದು ಸಾಮಾನ್ಯ. ಆದರೆ, ಗಿಲ್ಲಿಗೆ ಸಿಕ್ಕಷ್ಟು ದೊಡ್ಡ ಅಭಿಮಾನಿ ಬಳಗ ಇನ್ಯಾರಿಗೂ ಸಿಕ್ಕಿರಲಿಲ್ಲ. ಆದರೆ, ಅಭಿಮಾನಿಗಳನ್ನು ಗಿಲ್ಲಿ ಗೌರವಿಸುತ್ತಿಲ್ಲ ಎಂಬುದು ಅಭಿಮಾನಿಗಳ ಆರೋಪ.

View this post on Instagram

A post shared by BOSS TV (@bosstvkannada)

ಬಾಸ್​ ಟಿವಿ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರೋ ಟ್ಯಾಟೂ ಅಭಿಮಾನಿ, ‘ಅವರಲ್ಲಿ ಟ್ಯಾಲೆಂಟ್ ಇತ್ತು. ಅದನ್ನು ನಾವು ಹೊರಗೆ ತಂದಿದ್ದೀವಿ. ಅವರು ಅಭಿಮಾನಿಗಳನ್ನು ಭೇಟಿ ಮಾಡಬೇಕಿತ್ತು, ಮಾಡುತ್ತಿಲ್ಲ. ಬಿಗ್ ಬಾಸ್ ಮನೆಯಲ್ಲಿದ್ದಾಗ ನನ್ನನ್ನು ಹೊರ ಹೋದ ತಕ್ಷಣ ಭೇಟಿ ಮಾಡ್ತೀನಿ ಎಂದಿದ್ರು, ಆದರೆ ಭೇಟಿ ಮಾಡಿಲ್ಲ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅನುಶ್ರೀ ಕಾಲಿಗೆ ಬಿದ್ದ ಗಿಲ್ಲಿ ನಟ; ಶಾಕ್ ಆದ ಆ್ಯಂಕರ್

ಗಿಲ್ಲಿ ನಟ ಅವರು ಇನ್​​ಸ್ಟಾಗ್ರಾಮ್​​ನಲ್ಲಿ 20 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ಬಿಗ್ ಬಾಸ್ ಸ್ಪರ್ಧಿಗೆ ಇಷ್ಟ ದೊಡ್ಡ ಮಟ್ಟದಲ್ಲಿ ಅಭಿಮಾನಿ ವರ್ಗ ಸಿಕ್ಕಿದ್ದು ಇದೇ ಮೊದಲು. ಆದರೆ, ಈಗ ಅವರಿಗೆ ಅಭಿಮಾನವೇ ಮುಳವಾಯಿತೇ ಎನ್ನುವ ಪ್ರಶ್ನೆ ಮೂಡಿದೆ. ಕೆಲ ನಿಜವಾದ ಫ್ಯಾನ್ಸ್, ‘ನಿನ್ನನ್ನು ಗಿಲ್ಲಿ ಭೇಟಿ ಮಾಡಲೇಬಾರದು’ ಎಂದಿದ್ದಾರೆ.  ಗಿಲ್ಲಿ ಅವರು ಸದ್ಯ ನಿರ್ದೇಶನ ಮಾಡುವ ಆಲೋಚನೆ ಹೊಂದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್