AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ಗೆಲ್ಲಲ್ಲ ಎಂದಿದ್ದ ಜ್ಯೋತಿಷಿ ಭವಿಷ್ಯ ಸುಳ್ಳಾಯ್ತು; ಸೋಶಿಯಲ್ ಮೀಡಿಯಾದಲ್ಲಿ ಟೀಕೆ

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ಬಗ್ಗೆ ಜ್ಯೋತಿಷಿ ಪ್ರಶಾಂತ್ ಕಿಣಿ ನುಡಿದ ಭವಿಷ್ಯ ಸುಳ್ಳಾಗಿದೆ. ಗಿಲ್ಲಿ ಗೆಲ್ಲುವುದಿಲ್ಲ ಎಂದಿದ್ದ ಭವಿಷ್ಯವಾಣಿ ಸುಳ್ಳಾಗಿ, ಗಿಲ್ಲಿಯೇ ಬಿಗ್ ಬಾಸ್ ಗೆದ್ದು ಬೀಗಿದ್ದಾರೆ. ಇದರಿಂದ ಜ್ಯೋತಿಷಿಯ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅಭಿಮಾನಿಗಳು ಗಿಲ್ಲಿ ಗೆಲುವನ್ನು ಸಂಭ್ರಮಿಸಿ, ಕಿಣಿಗೆ ಕಿವಿಮಾತು ಹೇಳುತ್ತಿದ್ದಾರೆ.

ಗಿಲ್ಲಿ ಗೆಲ್ಲಲ್ಲ ಎಂದಿದ್ದ ಜ್ಯೋತಿಷಿ ಭವಿಷ್ಯ ಸುಳ್ಳಾಯ್ತು; ಸೋಶಿಯಲ್ ಮೀಡಿಯಾದಲ್ಲಿ ಟೀಕೆ
ಗಿಲ್ಲಿ-ಸುದೀಪ್
ರಾಜೇಶ್ ದುಗ್ಗುಮನೆ
|

Updated on:Jan 19, 2026 | 11:38 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ಅಂತೂ ಆಗಲ್ಲ’ ಹೀಗೆಂದು ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದರು. ಡಿಸೆಂಬರ್​​​ನಲ್ಲಿ ಮಾಡಿದ್ದ ಈ ಟ್ವೀಟ್ ವೈರಲ್ ಆಗಿತ್ತು. ಆದರೆ, ಭವಿಷ್ಯ ಸುಳ್ಳಾಗಿದೆ. ಗಿಲ್ಲಿ ಅವರೇ ಬಿಗ್ ಬಾಸ್ ಗೆದ್ದು ಬೀಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಜ್ಯೋತಿಷಿಗೆ ಕಿವಿಮಾತು ಹೇಳುವ ಕೆಲಸ ಆಗುತ್ತಿದೆ. ಗಿಲ್ಲಿ (Gilli Nata) ದೊಡ್ಡ ವೋಟಿಂಗ್ ಅಂತರದಲ್ಲೇ ಗೆದ್ದಿದ್ದಾರೆ ಎಂಬುದು ಇಲ್ಲಿ ಗಮನಿಸಬೇಕಾದ ವಿಷಯ.

ಪ್ರಶಾಂತ್ ಕಿಣಿ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಅವರು ತಮ್ಮನ್ನು ಜ್ಯೋತಿಷಿ ಎಂದು ಕರೆದುಕೊಂಡಿದ್ದಾರೆ. ‘ಗಿಲ್ಲಿ ಫಿನಾಲೆ ತಲುಪುತ್ತಾರೆ’ ಎಂದು ಅವರು ಅಕ್ಟೋಬರ್​ನಲ್ಲಿ ಭವಿಷ್ಯ ನುಡಿದಿದ್ದರು. ಅದು ನಿಜವಾಗಿದೆ. ಗಿಲ್ಲಿಯ ಮೊದಲಿನ ಶೋಗಳನ್ನು ನೋಡಿದವರಿಗೆ ಅವರು ಫಿನಾಲೆ ಸ್ಪರ್ಧಿಗಳಲ್ಲಿ ಒಬ್ಬರಾಗಿರುತ್ತಾರೆ ಎಂಬುದು ಸ್ಪಷ್ಟವಾಗಿತ್ತು. ಈ ವಿಷಯದಲ್ಲಿ ಭವಿಷ್ಯ ನುಡಿದಿದ್ದು ಏನೂ ವಿಶೇಷವಿರಲಿಲ್ಲ.

ಇದನ್ನೂ ಓದಿ:  ಗಿಲ್ಲಿ ಬಿಗ್ ಬಾಸ್ ಗೆಲ್ಲಲ್ಲ, ಮಹಿಳಾ ಸ್ಪರ್ಧಿ ವಿನ್ನರ್; ಭವಿಷ್ಯ ನುಡಿದ ಜ್ಯೋತಿಷಿ

ಆದರೆ, ಡಿಸೆಂಬರ್​​​ನಲ್ಲಿ ‘ಗಿಲ್ಲಿ ಅವರು ಬಿಗ್ ಬಾಸ್ ವಿನ್ ಆಗಲ್ಲ, ಈ ಬಾರಿ ಗೆಲ್ಲೋದು ಮಹಿಳಾ ಸ್ಪರ್ಧಿ’ ಎಂದು ಪ್ರಶಾಂತ್ ಕಿಣಿ ಮಾಡಿದ್ದ ಟ್ವೀಟ್ ಗಮನ ಸೆಳೆದಿತ್ತು. ಈ ಟ್ವೀಟ್​​ಗೆ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು. ಈಗ ಗಿಲ್ಲಿ ನಟ ಅವರು ವಿನ್ ಆಗಿದ್ದಾರೆ. ಈ ಮೂಲಕ ಪ್ರಶಾಂತ್ ಕಿಣಿ ಅವರ ಭವಿಷ್ಯ ಸುಳ್ಳಾಗಿದೆ. ‘ನಿಮ್ಮ ಭವಿಷ್ಯವನ್ನು ಸುಳ್ಳು ಮಾಡಿ ತೋರಿಸುತ್ತೇವೆ’ ಎಂದು ಗಿಲ್ಲಿ ಅಭಿಮಾನಿಗಳು ಆಗಲೇ ಚಾಲೆಂಜ್ ಮಾಡಿದ್ದರು. ಈ ಚಾಲೆಂಜ್ ಅಲ್ಲಿ ಗಿಲ್ಲಿ ಫ್ಯಾನ್ಸ್ ಗೆದ್ದಿದ್ದಾರೆ.

ಗಿಲ್ಲಿ ನಟ ಅವರು ಮೊದಲಿನಿಂದಲೂ ಎಲ್ಲರ ಫೇವರಿಟ್ ಸ್ಪರ್ಧಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಹಲವು ಫ್ಯಾನ್ ಪೇಜ್​ಗಳು ಸೃಷ್ಟಿ ಆಗಿವೆ. ಅವರು ಪ್ರಶಾಂತ್ ಕಿಣಿಯನ್ನು ಟೀಕಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:37 am, Mon, 19 January 26

Follow Us
Viral Video: ಈ ನಾಯಿ ರೊಟ್ಟಿ ತಗೊಂಡು ಹೋಗ್ತಿರೋದು ಎಲ್ಲಿಗೆ ನೋಡಿ
Viral Video: ಈ ನಾಯಿ ರೊಟ್ಟಿ ತಗೊಂಡು ಹೋಗ್ತಿರೋದು ಎಲ್ಲಿಗೆ ನೋಡಿ
ಎಂಥ ಬೌಲಿಂಗ್​ಯ್ಯ ನಿಂದು... ಬೌಲರ್-ಬ್ಯಾಟರ್​ ನಡುವೆ ಮಾತಿನ ಚಕಮಕಿ
ಎಂಥ ಬೌಲಿಂಗ್​ಯ್ಯ ನಿಂದು... ಬೌಲರ್-ಬ್ಯಾಟರ್​ ನಡುವೆ ಮಾತಿನ ಚಕಮಕಿ
ಗಾಯಾಳುವಿಗೆ ನೆರವಾದ ಹೆಚ್​​ಡಿಕೆ: ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಗಾಯಾಳುವಿಗೆ ನೆರವಾದ ಹೆಚ್​​ಡಿಕೆ: ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣ ಗಾತ್ರದ ಪ್ರತಿಮೆ ಅನಾವರಣ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣ ಗಾತ್ರದ ಪ್ರತಿಮೆ ಅನಾವರಣ
ಡಾ. ರಾಜ್​ಕುಮಾರ್ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘಣ್ಣ
ಡಾ. ರಾಜ್​ಕುಮಾರ್ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘಣ್ಣ
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್
ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ
ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ
ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ
ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ
ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ
ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ