ಗಿಲ್ಲಿ ಗೆಲ್ಲಲ್ಲ ಎಂದಿದ್ದ ಜ್ಯೋತಿಷಿ ಭವಿಷ್ಯ ಸುಳ್ಳಾಯ್ತು; ಸೋಶಿಯಲ್ ಮೀಡಿಯಾದಲ್ಲಿ ಟೀಕೆ

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ಬಗ್ಗೆ ಜ್ಯೋತಿಷಿ ಪ್ರಶಾಂತ್ ಕಿಣಿ ನುಡಿದ ಭವಿಷ್ಯ ಸುಳ್ಳಾಗಿದೆ. ಗಿಲ್ಲಿ ಗೆಲ್ಲುವುದಿಲ್ಲ ಎಂದಿದ್ದ ಭವಿಷ್ಯವಾಣಿ ಸುಳ್ಳಾಗಿ, ಗಿಲ್ಲಿಯೇ ಬಿಗ್ ಬಾಸ್ ಗೆದ್ದು ಬೀಗಿದ್ದಾರೆ. ಇದರಿಂದ ಜ್ಯೋತಿಷಿಯ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅಭಿಮಾನಿಗಳು ಗಿಲ್ಲಿ ಗೆಲುವನ್ನು ಸಂಭ್ರಮಿಸಿ, ಕಿಣಿಗೆ ಕಿವಿಮಾತು ಹೇಳುತ್ತಿದ್ದಾರೆ.

ಗಿಲ್ಲಿ ಗೆಲ್ಲಲ್ಲ ಎಂದಿದ್ದ ಜ್ಯೋತಿಷಿ ಭವಿಷ್ಯ ಸುಳ್ಳಾಯ್ತು; ಸೋಶಿಯಲ್ ಮೀಡಿಯಾದಲ್ಲಿ ಟೀಕೆ
ಗಿಲ್ಲಿ-ಸುದೀಪ್

Updated on: Jan 19, 2026 | 11:38 AM

‘ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ಅಂತೂ ಆಗಲ್ಲ’ ಹೀಗೆಂದು ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದರು. ಡಿಸೆಂಬರ್​​​ನಲ್ಲಿ ಮಾಡಿದ್ದ ಈ ಟ್ವೀಟ್ ವೈರಲ್ ಆಗಿತ್ತು. ಆದರೆ, ಭವಿಷ್ಯ ಸುಳ್ಳಾಗಿದೆ. ಗಿಲ್ಲಿ ಅವರೇ ಬಿಗ್ ಬಾಸ್ ಗೆದ್ದು ಬೀಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಜ್ಯೋತಿಷಿಗೆ ಕಿವಿಮಾತು ಹೇಳುವ ಕೆಲಸ ಆಗುತ್ತಿದೆ. ಗಿಲ್ಲಿ (Gilli Nata) ದೊಡ್ಡ ವೋಟಿಂಗ್ ಅಂತರದಲ್ಲೇ ಗೆದ್ದಿದ್ದಾರೆ ಎಂಬುದು ಇಲ್ಲಿ ಗಮನಿಸಬೇಕಾದ ವಿಷಯ.

ಪ್ರಶಾಂತ್ ಕಿಣಿ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಅವರು ತಮ್ಮನ್ನು ಜ್ಯೋತಿಷಿ ಎಂದು ಕರೆದುಕೊಂಡಿದ್ದಾರೆ. ‘ಗಿಲ್ಲಿ ಫಿನಾಲೆ ತಲುಪುತ್ತಾರೆ’ ಎಂದು ಅವರು ಅಕ್ಟೋಬರ್​ನಲ್ಲಿ ಭವಿಷ್ಯ ನುಡಿದಿದ್ದರು. ಅದು ನಿಜವಾಗಿದೆ. ಗಿಲ್ಲಿಯ ಮೊದಲಿನ ಶೋಗಳನ್ನು ನೋಡಿದವರಿಗೆ ಅವರು ಫಿನಾಲೆ ಸ್ಪರ್ಧಿಗಳಲ್ಲಿ ಒಬ್ಬರಾಗಿರುತ್ತಾರೆ ಎಂಬುದು ಸ್ಪಷ್ಟವಾಗಿತ್ತು. ಈ ವಿಷಯದಲ್ಲಿ ಭವಿಷ್ಯ ನುಡಿದಿದ್ದು ಏನೂ ವಿಶೇಷವಿರಲಿಲ್ಲ.

ಇದನ್ನೂ ಓದಿ:  ಗಿಲ್ಲಿ ಬಿಗ್ ಬಾಸ್ ಗೆಲ್ಲಲ್ಲ, ಮಹಿಳಾ ಸ್ಪರ್ಧಿ ವಿನ್ನರ್; ಭವಿಷ್ಯ ನುಡಿದ ಜ್ಯೋತಿಷಿ

ಆದರೆ, ಡಿಸೆಂಬರ್​​​ನಲ್ಲಿ ‘ಗಿಲ್ಲಿ ಅವರು ಬಿಗ್ ಬಾಸ್ ವಿನ್ ಆಗಲ್ಲ, ಈ ಬಾರಿ ಗೆಲ್ಲೋದು ಮಹಿಳಾ ಸ್ಪರ್ಧಿ’ ಎಂದು ಪ್ರಶಾಂತ್ ಕಿಣಿ ಮಾಡಿದ್ದ ಟ್ವೀಟ್ ಗಮನ ಸೆಳೆದಿತ್ತು. ಈ ಟ್ವೀಟ್​​ಗೆ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು. ಈಗ ಗಿಲ್ಲಿ ನಟ ಅವರು ವಿನ್ ಆಗಿದ್ದಾರೆ. ಈ ಮೂಲಕ ಪ್ರಶಾಂತ್ ಕಿಣಿ ಅವರ ಭವಿಷ್ಯ ಸುಳ್ಳಾಗಿದೆ. ‘ನಿಮ್ಮ ಭವಿಷ್ಯವನ್ನು ಸುಳ್ಳು ಮಾಡಿ ತೋರಿಸುತ್ತೇವೆ’ ಎಂದು ಗಿಲ್ಲಿ ಅಭಿಮಾನಿಗಳು ಆಗಲೇ ಚಾಲೆಂಜ್ ಮಾಡಿದ್ದರು. ಈ ಚಾಲೆಂಜ್ ಅಲ್ಲಿ ಗಿಲ್ಲಿ ಫ್ಯಾನ್ಸ್ ಗೆದ್ದಿದ್ದಾರೆ.

ಗಿಲ್ಲಿ ನಟ ಅವರು ಮೊದಲಿನಿಂದಲೂ ಎಲ್ಲರ ಫೇವರಿಟ್ ಸ್ಪರ್ಧಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಹಲವು ಫ್ಯಾನ್ ಪೇಜ್​ಗಳು ಸೃಷ್ಟಿ ಆಗಿವೆ. ಅವರು ಪ್ರಶಾಂತ್ ಕಿಣಿಯನ್ನು ಟೀಕಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:37 am, Mon, 19 January 26

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us