AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿನ ಕಳ್ಳನ ರೀತಿ ಕರೆತಂದ ಪೊಲೀಸರು; ನಟನ ಡೈಲಾಗ್ ಕೇಳಿ ನಕ್ಕ ಆರಕ್ಷಕರು

ಬಿಗ್ ಬಾಸ್ ವಿಜೇತ ಗಿಲ್ಲಿಯ ಜನಪ್ರಿಯತೆ ಹೆಚ್ಚಿದ್ದು, ಕಾರ್ಯಕ್ರಮಗಳಿಗೆ ತೆರಳಿದಾಗ ಪೊಲೀಸರ ಭದ್ರತೆ ಒದಗಿಸಲಾಗುತ್ತಿದೆ. ಅಭಿಮಾನಿಗಳು ಮುತ್ತಿಕೊಂಡಾಗ ಪೊಲೀಸರು ಅವರನ್ನು ಕರೆದೊಯ್ಯುವ ರೀತಿ 'ಕಳ್ಳ'ನನ್ನು ಕರೆದೊಯ್ದಂತೆ ಕಂಡಿದೆ.  ಇದರಲ್ಲೂ ಗಿಲ್ಲಿ ಹಾಸ್ಯ ಕಂಡು ಹಿಡಿದಿದ್ದಾರೆ. ಅವರ ಹಾಸ್ಯಪ್ರಜ್ಞೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗಿಲ್ಲಿನ ಕಳ್ಳನ ರೀತಿ ಕರೆತಂದ ಪೊಲೀಸರು; ನಟನ ಡೈಲಾಗ್ ಕೇಳಿ ನಕ್ಕ ಆರಕ್ಷಕರು
ಗಿಲ್ಲಿ ನಟ
ರಾಜೇಶ್ ದುಗ್ಗುಮನೆ
|

Updated on:Jan 26, 2026 | 7:41 AM

Share

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ (Gilli Nata) ಅವರು ನಾನಾ ಕಡೆಗಳಲ್ಲಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾರೆ. ಪ್ರತಿ ವೇದಿಕೆಯಲ್ಲೂ ಅವರಿಗೆ ರಾಜ ಮರ್ಯಾದೆ ಸಿಗುತ್ತಿದೆ. ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆಯುತ್ತಿದ್ದಾರೆ. ಈ ವಿಷಯ ಅವರ ಖುಷಿಗೆ ಕಾರಣ ಆಗಿದೆ. ಬಿಗ್ ಬಾಸ್ ವೀಕ್ಷಕರು ಕೂಡ ಗಿಲ್ಲಿ ಜನಪ್ರಿಯತೆ ಕಂಡು ನಿಬ್ಬರಗಾಗುತ್ತಿದ್ದಾರೆ. ಈಗ ಗಿಲ್ಲಿ ಹೋದಲ್ಲಿ ಬಂದಲ್ಲಿ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ. ಈಗ ಗಿಲ್ಲಿ ಅವರ ಫನ್ ವಿಡಿಯೋ ವೈರಲ್ ಆಗಿದೆ.

ಗಿಲ್ಲಿ ನಟ ಅವರು ಹಲವು ರಿಯಾಲಿಟಿ ಶೋಗಳನ್ನು ನೀಡಿದವರು. ಇದರಿಂದ ಸ್ವಲ್ಪ ಜನಪ್ರಿಯತೆ ಅವರಿಗೆ ಸಿಕ್ಕಿತ್ತು. ಆದರೆ, ಬಿಗ್ ಬಾಸ್ ತಂದುಕೊಟ್ಟಷ್ಟು ಜನಪ್ರಿಯತೆ ಅವರಿಗೆ ಯಾವ ಶೋ ಕೂಡ ನೀಡಿಲ್ಲ. ಈ ಕಾರಣದಿಂದ ಬಿಗ್ ಬಾಸ್ ಶೋಗೆ ಅವರು ಚಿರಋಣಿ ಆಗಿದ್ದಾರೆ. ಇತ್ತೀಚೆಗೆ ಅವರು ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಒಂದು ಫನ್ ಘಟನೆ ನಡೆದಿದೆ.

ಕಾರ್ಯಕ್ರಮ ಮುಗಿದ ಬಳಿಕ ಗಿಲ್ಲಿನ ಭೇಟಿ ಮಾಡಬೇಕು, ಗಿಲ್ಲಿ ಜೊತೆ ಮಾತನಾಡಬೇಕು, ಗಿಲ್ಲಿ ಜೊತೆ ಸೆಲ್ಫಿ ತೆಗೆಸಿಕೊಳ್ಳಬೇಕು ಎಂದು ಅನೇಕರು ಮುತ್ತಿಕೊಳ್ಳುತ್ತಾರೆ. ಆ ಸಂದರ್ಭದಲ್ಲಿ ಗಿಲ್ಲಿಗೆ ತೊಂದರೆ ಆಗುತ್ತದೆ. ಆ ರೀತಿ ಆಗಬಾರದು ಎಂದೇ ಗಿಲ್ಲಿ ನಟ ಅವರಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ.

ಗಿಲ್ಲಿನ ತೆಗೆದುಕೊಂಡು ಹೋಗುತ್ತಿದ್ದನ್ನು ನೋಡಿದ ಅನೇಕರಿಗೆ, ಪೊಲೀಸರು ಆರೋಪಿಯನ್ನು ಕರೆದುಕೊಂಡು ಹೋದಂತೆ ಕಾಣಿಸಿದೆ. ಗಿಲ್ಲಿ ಯಾರು ಎಂಬ ಗೊತ್ತಿಲ್ಲದ ವ್ಯಕ್ತಿ ಯಾರಾದರೂ ಇದ್ದಲ್ಲಿ ಅವರಿಗೆ ಈ ವಿಡಿಯೋ ಅದೇ ರೀತಿ ಕಾಣಿಸಲಿದೆ. ಗಿಲ್ಲಿ ಕೂಡ ‘ಸರ್, ನಾನೇನು ಕಳ್ಳನಾ?’ ಎಂದು ಕೇಳಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೊಲೀಸರು ನಕ್ಕಿದ್ದಾರೆ.

ಇದನ್ನೂ ಓದಿ: ಗಿಲ್ಲಿ ನಟನಿಗೆ ಬಿಗ್ ಬಾಸ್​ನಿಂದ ಕಾರು ಸಿಗೋದು ಯಾವಾಗ? ಕೊನೆಗೂ ಸಿಕ್ತು ಉತ್ತರ ಗಿಲ್ಲಿ ಅವಕಾಶ ಸಿಕ್ಕಾಗಲೆಲ್ಲ ಹಾಸ್ಯದ ಹೊಳೆ ಹರಿಸುತ್ತಾರೆ. ಪೊಲೀಸರು ಜೊತೆಯೂ ಅವರು ನಗೆ ಚಟಾಕಿ ಹಾರಿಸಿದ್ದಾರೆ. ಈ ಕಾರಣಕ್ಕೆ ಅವರು ಇಷ್ಟ ಆಗುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:41 am, Mon, 26 January 26

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ