Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಮತ್ತೆ ಹೋಗೋಕೆ ಕಿಚ್ಚನ ಬಳಿ ಅವಕಾಶ ಕೇಳಿದ ಸುರೇಶ್; ಸುದೀಪ್ ಕೊಟ್ಟ ಉತ್ತರ ಏನು?

ಸುರೇಶ್ ಅವರು ಬಿಗ್ ಬಾಸ್ ಮನೆಗೆ ಬಂದ ಬಳಿಕ, ತಮ್ಮ ಆಪ್ತರಿಂದ ಮೋಸ ಹೋದ ಬಗ್ಗೆ ಬಹಿರಂಗಪಡಿಸಿದ್ದಾರೆ. ಅವರು ಮನೆಗೆ ಮರಳಲು ಮನವಿ ಮಾಡಿದ್ದಾರೆ. ಆದರೆ ಸುದೀಪ್ ಅವರು ನಿರಾಕರಿಸಿದ್ದಾರೆ. ಸುರೇಶ್ ಅವರ ನಿರ್ಗಮನ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ ಮತ್ತು ಈ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಬಿಗ್ ಬಾಸ್​ಗೆ ಮತ್ತೆ ಹೋಗೋಕೆ ಕಿಚ್ಚನ ಬಳಿ ಅವಕಾಶ ಕೇಳಿದ ಸುರೇಶ್; ಸುದೀಪ್ ಕೊಟ್ಟ ಉತ್ತರ ಏನು?
ಸುರೇಶ್-ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Dec 23, 2024 | 9:01 AM

ಸುರೇಶ್ ಅವರು ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರ ನಡೆದಿರುವ ವಿಚಾರ ಗೊತ್ತೇ ಇದೆ. ಈ ಬಗ್ಗೆ ಹುಟ್ಟಿಕೊಂಡ ಚರ್ಚೆಗಳು ಒಂದೆರಡಲ್ಲ. ಅವರು ದೊಡ್ಮನೆಯಿಂದ ಹೊರ ಬಂದು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಹೀಗಿರುವಾಗಲೇ ಅವರು ಸುದೀಪ್ ಎದುರು ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿದ್ದಾಗ ಹೊರಗೆ ಆಪ್ತರಿಂದಲೇ ಮೋಸ ಆಗಿದೆ ಎಂದು ಹೇಳಿಕೊಂಡಿದ್ದಾರೆ. ಇದೇ ವೇಳೆ ದೊಡ್ಮನೆ ಒಳಗೆ ಹೋಗೋಕೆ ಅವರು ಮತ್ತೊಂದು ಅವಕಾಶ ಕೇಳಿದ್ದಾರೆ.

‘ಮನೆ ಒಳಗೆ ಹೋಗಬೇಕಾಗುವಾಗ ನನ್ನ ಸಂಸ್ಥೆ ಯಾರು ನೋಡಿಕೊಳ್ಳುತ್ತಾರೆ ಎನ್ನುವ ಪ್ರಶ್ನೆ ಇತ್ತು. ನನ್ನ ಪತ್ನಿ ಹಾಗೂ ತಂಡದವರನ್ನು ನಂಬಿ ನನ್ನ ಕಂಪನಿ ಕೊಟ್ಟು ಹೋದೆ. ಗೆಳೆಯರು ಇದನ್ನು ತುಂಬಾ ಮಿಸ್​ಯೂಸ್ ಮಾಡಿಕೊಂಡರು. ಯಾವಾಗ ಕಷ್ಟ ಆಗುತ್ತದೆ ಎಂದಾಗ ನನ್ನನ್ನು ಕರೆಯಿರಿ ಎಂದು ಹೇಳಿದ್ದೆ. ಅವರಿಗೆ ಆಗದ್ದೇ ಇದ್ದಾಗ ನನ್ನನ್ನು ಕರೆದರು. ನಾನು ಬಂದು ನನ್ನ ಕಂಟ್ರೋಲ್​ಗೆ ತೆಗೆದುಕೊಂಡೆ’ ಎಂದಿದ್ದಾರೆ ಅವರು.

ಮತ್ತೊಮ್ಮೆ ಸುರೇಶ್ ಅವರು ಬಿಗ್ ಬಾಸ್ ಮನೆ ಒಳಗೆ ಹೋಗೋಕೆ ಅವಕಾಶ ಕೇಳಿದ್ದಾರೆ. ಇದಕ್ಕೆ ಸುದೀಪ್ ನೋ ಎಂದಿದ್ದಾರೆ. ‘ಚೈತ್ರಾನ ಒಂದು ದಿನ ಹೊರಕ್ಕೆ ಬಿಟ್ಟು ಅಲ್ಲಿ ಅವರ ಕಂಟ್ರೋಲ್ ಮಾಡೋಕೆ ಸಾಧ್ಯವಾಗುತ್ತಿಲ್ಲ. ಇನ್ನು ನೀವು ಇಡೀ ಪ್ರಪಂಚ ನೋಡಿ ಬಂದವರು. ನಿಮ್ಮನ್ನು ಒಳಕ್ಕೆ ಬಿಟ್ಟರೆ ಅಷ್ಟೇ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಹನುಮಂತನ ಮದುವೆಯ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡ ಗೋಲ್ಡ್ ಸುರೇಶ್ 

ಸುರೇಶ್ ಅವರು ಉತ್ತಮವಾಗಿ ಆಡುತ್ತಿದ್ದರು. ಅವರು ದೊಡ್ಮನೆಯಿಂದ ಹೊರ ಹೋದ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ಈ ವಿಚಾರ ಚರ್ಚೆಗೆ ಕಾರಣ ಆಗಿದೆ. ಅವರು ಇನ್ನಷ್ಟು ವಾರ ಇರಬೇಕಿತ್ತು ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ