AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಮತ್ತೆ ಹೋಗೋಕೆ ಕಿಚ್ಚನ ಬಳಿ ಅವಕಾಶ ಕೇಳಿದ ಸುರೇಶ್; ಸುದೀಪ್ ಕೊಟ್ಟ ಉತ್ತರ ಏನು?

ಸುರೇಶ್ ಅವರು ಬಿಗ್ ಬಾಸ್ ಮನೆಗೆ ಬಂದ ಬಳಿಕ, ತಮ್ಮ ಆಪ್ತರಿಂದ ಮೋಸ ಹೋದ ಬಗ್ಗೆ ಬಹಿರಂಗಪಡಿಸಿದ್ದಾರೆ. ಅವರು ಮನೆಗೆ ಮರಳಲು ಮನವಿ ಮಾಡಿದ್ದಾರೆ. ಆದರೆ ಸುದೀಪ್ ಅವರು ನಿರಾಕರಿಸಿದ್ದಾರೆ. ಸುರೇಶ್ ಅವರ ನಿರ್ಗಮನ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ ಮತ್ತು ಈ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಬಿಗ್ ಬಾಸ್​ಗೆ ಮತ್ತೆ ಹೋಗೋಕೆ ಕಿಚ್ಚನ ಬಳಿ ಅವಕಾಶ ಕೇಳಿದ ಸುರೇಶ್; ಸುದೀಪ್ ಕೊಟ್ಟ ಉತ್ತರ ಏನು?
ಸುರೇಶ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Dec 23, 2024 | 9:01 AM

Share

ಸುರೇಶ್ ಅವರು ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರ ನಡೆದಿರುವ ವಿಚಾರ ಗೊತ್ತೇ ಇದೆ. ಈ ಬಗ್ಗೆ ಹುಟ್ಟಿಕೊಂಡ ಚರ್ಚೆಗಳು ಒಂದೆರಡಲ್ಲ. ಅವರು ದೊಡ್ಮನೆಯಿಂದ ಹೊರ ಬಂದು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಹೀಗಿರುವಾಗಲೇ ಅವರು ಸುದೀಪ್ ಎದುರು ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿದ್ದಾಗ ಹೊರಗೆ ಆಪ್ತರಿಂದಲೇ ಮೋಸ ಆಗಿದೆ ಎಂದು ಹೇಳಿಕೊಂಡಿದ್ದಾರೆ. ಇದೇ ವೇಳೆ ದೊಡ್ಮನೆ ಒಳಗೆ ಹೋಗೋಕೆ ಅವರು ಮತ್ತೊಂದು ಅವಕಾಶ ಕೇಳಿದ್ದಾರೆ.

‘ಮನೆ ಒಳಗೆ ಹೋಗಬೇಕಾಗುವಾಗ ನನ್ನ ಸಂಸ್ಥೆ ಯಾರು ನೋಡಿಕೊಳ್ಳುತ್ತಾರೆ ಎನ್ನುವ ಪ್ರಶ್ನೆ ಇತ್ತು. ನನ್ನ ಪತ್ನಿ ಹಾಗೂ ತಂಡದವರನ್ನು ನಂಬಿ ನನ್ನ ಕಂಪನಿ ಕೊಟ್ಟು ಹೋದೆ. ಗೆಳೆಯರು ಇದನ್ನು ತುಂಬಾ ಮಿಸ್​ಯೂಸ್ ಮಾಡಿಕೊಂಡರು. ಯಾವಾಗ ಕಷ್ಟ ಆಗುತ್ತದೆ ಎಂದಾಗ ನನ್ನನ್ನು ಕರೆಯಿರಿ ಎಂದು ಹೇಳಿದ್ದೆ. ಅವರಿಗೆ ಆಗದ್ದೇ ಇದ್ದಾಗ ನನ್ನನ್ನು ಕರೆದರು. ನಾನು ಬಂದು ನನ್ನ ಕಂಟ್ರೋಲ್​ಗೆ ತೆಗೆದುಕೊಂಡೆ’ ಎಂದಿದ್ದಾರೆ ಅವರು.

ಮತ್ತೊಮ್ಮೆ ಸುರೇಶ್ ಅವರು ಬಿಗ್ ಬಾಸ್ ಮನೆ ಒಳಗೆ ಹೋಗೋಕೆ ಅವಕಾಶ ಕೇಳಿದ್ದಾರೆ. ಇದಕ್ಕೆ ಸುದೀಪ್ ನೋ ಎಂದಿದ್ದಾರೆ. ‘ಚೈತ್ರಾನ ಒಂದು ದಿನ ಹೊರಕ್ಕೆ ಬಿಟ್ಟು ಅಲ್ಲಿ ಅವರ ಕಂಟ್ರೋಲ್ ಮಾಡೋಕೆ ಸಾಧ್ಯವಾಗುತ್ತಿಲ್ಲ. ಇನ್ನು ನೀವು ಇಡೀ ಪ್ರಪಂಚ ನೋಡಿ ಬಂದವರು. ನಿಮ್ಮನ್ನು ಒಳಕ್ಕೆ ಬಿಟ್ಟರೆ ಅಷ್ಟೇ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಹನುಮಂತನ ಮದುವೆಯ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡ ಗೋಲ್ಡ್ ಸುರೇಶ್ 

ಸುರೇಶ್ ಅವರು ಉತ್ತಮವಾಗಿ ಆಡುತ್ತಿದ್ದರು. ಅವರು ದೊಡ್ಮನೆಯಿಂದ ಹೊರ ಹೋದ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ಈ ವಿಚಾರ ಚರ್ಚೆಗೆ ಕಾರಣ ಆಗಿದೆ. ಅವರು ಇನ್ನಷ್ಟು ವಾರ ಇರಬೇಕಿತ್ತು ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ