AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಮಾತು ಕೇಳಲಾಗದೇ ಬಿಗ್ ಬಾಸ್​ನಿಂದ ಹೊರಗೆ ಬರಲು ಸುರೇಶ್ ನಿರ್ಧಾರ

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ವಿವಾದ ಸಹಜ. ಆದರೆ ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಒಬ್ಬರಿಗೊಬ್ಬರು ಬೈಯ್ದಾಡಿಕೊಳ್ಳುವುದು ಸಹಜ. ಆದರೆ ಅಶ್ಲೀಲ ಪದಗಳ ಬಳಕೆ ಸರಿಯಲ್ಲ. ಈ ವಿಚಾರದಲ್ಲಿ ಗೋಲ್ಡ್ ಸುರೇಶ್ ಅವರಿಗೆ ತುಂಬಾ ನೋವಾಗಿದೆ. ವೈಲ್ಡ್​ ಕಾರ್ಡ್​ ಸ್ಪರ್ಧಿ ರಜತ್ ಆಡಿದ ಮಾತುಗಳಿಂದ ಸುರೇಶ್ ನೊಂದುಕೊಂಡಿದ್ದಾರೆ. ಹಾಗಾಗಿ ಆಟ ನಿಲ್ಲಿಸಲು ನಿರ್ಧರಿಸಿದರು.

ಅಶ್ಲೀಲ ಮಾತು ಕೇಳಲಾಗದೇ ಬಿಗ್ ಬಾಸ್​ನಿಂದ ಹೊರಗೆ ಬರಲು ಸುರೇಶ್ ನಿರ್ಧಾರ
ಗೋಲ್ಡ್ ಸುರೇಶ್​
ಮದನ್​ ಕುಮಾರ್​
|

Updated on: Nov 21, 2024 | 10:25 PM

Share

ಹೊರ ಜಗತ್ತಿನಲ್ಲಿ ಎಲ್ಲರಿಗೂ ಒಂದು ಗೌರವ ಇರುತ್ತದೆ. ಅನೇಕ ವರ್ಷಗಳ ಕಾಲ ಕಷ್ಟಪಟ್ಟು ಆ ಗೌರವವನ್ನು ಸಂಪಾದಿಸಲಾಗಿರುತ್ತದೆ. ಆದರೆ ಬಿಗ್ ಬಾಸ್​ ಮನೆಯ ಒಳಗೆ ಯಾರೋ ಬಂದು ಅಸಭ್ಯವಾಗಿ ಬೈಯ್ದರೆ ಆ ಗೌರವಕ್ಕೆ ಧಕ್ಕೆ ಆಗುತ್ತದೆ. ಗೋಲ್ಡ್​ ಸುರೇಶ್ ಅವರ ಪರಿಸ್ಥಿತಿ ಹೀಗೆಯೇ ಆಗಿದೆ. ಕಷ್ಟಪಟ್ಟು ಬೆಳೆದ ವ್ಯಕ್ತಿ ಎಂಬ ಕಾರಣಕ್ಕೆ ಹೊರಗೆ ಅವರಿಗೆ ಎಲ್ಲರೂ ಗೌರವ ಕೊಡುತ್ತಾರೆ. ಆದರೆ ಬಿಗ್ ಬಾಸ್​ ಮನೆಯ ಒಳಗೆ ಅವರನ್ನು ‘ವೇಸ್ಟ್​ ನನ್​ ಮಗ’ ಎಂದು ರಜತ್​ ಬೈಯ್ದಿದ್ದಾರೆ. ಅಲ್ಲದೇ, ಕೆಲವು ಅವಾಚ್ಯ ಪದಗಳಿಂದಲೂ ನಿಂದಿಸಿದ್ದಾರೆ.

ಟಾಸ್ಕ್ ಆಡುವಾಗ ಗೋಲ್ಡ್ ಸುರೇಶ್ ಮತ್ತು ರಜತ್ ನಡುವೆ ಕಿರಿಕ್ ಆಯಿತು. ಇಬ್ಬರೂ ಪರಸ್ಪರ ಬೈಯ್ದುಕೊಂಡರು. ಆದರೆ ರಜತ್ ಅವರ ಗಡಿ ಮೀರಿ, ಅವಾಚ್ಯ ಪದಗಳನ್ನು ಬಳಸಿದರು. ಇದರಿಂದ ಸುರೇಶ್​ ಅವರು ಕೆರಳಿದರು. ಕ್ಯಾಮೆರಾ ಎದುರು ಬಂದು ಬಿಗ್​ ಬಾಸ್​ಗೆ ಈ ಬಗ್ಗೆ ಸುರೇಶ್ ದೂರು ನೀಡಿದರು. ‘ಇಂಥ ಅಶ್ಲೀಲ ಮಾತುಗಳನ್ನು ಹೇಳಿಸಿಕೊಳ್ಳಲು ನಾನು ಇಲ್ಲಿಗೆ ಬಂದಿಲ್ಲ. ದಯವಿಟ್ಟು ಬಾಗಿಲು ತೆಗೆಯಿರಿ. ನಾನು ಹೊರಗೆ ಹೋಗುತ್ತೇನೆ’ ಎಂದು ಸುರೇಶ್ ಹಠ ಮಾಡಿದರು.

ಗೋಲ್ಡ್ ಸುರೇಶ್​ ಅವರು ಅರ್ಧಕ್ಕೆ ಟಾಸ್ಕ್​ ನಿಲ್ಲಿಸಿದರು. ‘ನಾನು ಆಡುವುದಿಲ್ಲ’ ಎಂದು ಖಡಕ್​ ಆಗಿ ನಿರ್ಧಾರ ತೆಗೆದುಕೊಂಡರು. ಅಲ್ಲದೇ, ತಮ್ಮ ಬಟ್ಟೆಗಳನ್ನು ಪ್ಯಾಕ್​ ಮಾಡಿಕೊಂಡು ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಲು ನಿರ್ಧರಿಸಿದರು. ಕೆಟ್ಟ ಪದಗಳಿಂದ ಬೈಯ್ಯಿಸಿಕೊಂಡು ನೋವಾಗಿದ್ದರಿಂದ ಸುರೇಶ್ ಅವರು ಕಣ್ಣೀರು ಹಾಕಿದರು.

ಇದನ್ನೂ ಓದಿ: ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು

52 ದಿನಗಳ ಕಾಲ ಕಷ್ಟಪಟ್ಟು ಆಡಿದ ಗೋಲ್ಡ್ ಸುರೇಶ್ ಅವರು ಈಗ ಅರ್ಧಕ್ಕೆ ಹೊರಟು ಹೋಗುತ್ತಾರೆ ಎಂದರೆ ಇಷ್ಟು ದಿನಗಳ ಶ್ರಮ ವ್ಯರ್ಥ ಆದಂತೆ ಆಗುತ್ತದೆ. ಹಾಗಾಗಿ ಇನ್ನುಳಿದ ಸದಸ್ಯರು ಸುರೇಶ್​ಗೆ ಬುದ್ಧಿ ಹೇಳಲು ಪ್ರಯತ್ನಿಸಿದರು. ರಜತ್​ಗೆ ಆಟದ ಮೂಲಕವೇ ಉತ್ತರ ನೀಡಿ, ಮತ್ತೆ ಉತ್ತಮ ಎನಿಸಿಕೊಳ್ಳಿ ಎಂದು ತ್ರಿವಿಕ್ರಮ್ ಹೇಳಿದರು. ಎಲ್ಲರೂ ಸಮಾಧಾನ ಮಾಡಿದ್ದರಿಂದ ಸುರೇಶ್​ ಅವರು ಬಿಗ್ ಬಾಸ್ ಮನೆಯಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಆಟ ಹೇಗಿರಲಿದೆ ಎಂಬುದನ್ನು ನೋಡುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!