AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಡ್ ಸುರೇಶ್ ದೊಡ್ಮನೆಯಿಂದ ಹೊರ ಹೋಗಲು ಅಸಲಿ ಕಾರಣ ಹೊರಬಿತ್ತು; ವಿವರಿಸಿದ ಐಶ್ವರ್ಯಾ

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಗೋಲ್ಡ್ ಸುರೇಶ್ ಅವರ ಅನಿರೀಕ್ಷಿತ ನಿರ್ಗಮನ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅವರ ತಂದೆಯ ಆರೋಗ್ಯದ ಸಮಸ್ಯೆ ಎಂಬ ವದಂತಿಗಳು ಹರಡಿತ್ತು. ಅವರ ತಂದೆಯೇ ಅದನ್ನು ನಿರಾಕರಿಸಿದ್ದಾರೆ. ಸುರೇಶ್ ಅವರ ವ್ಯಾಪಾರ ಅಥವಾ ಸಾಲದ ಸಮಸ್ಯೆಯಿಂದಾಗಿ ನಿರ್ಗಮನ ಸಂಭವಿಸಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿವೆ. ಆದರೆ, ನಿಜವಾದ ಕಾರಣವನ್ನು ಸುರೇಶ್ ಅವರೇ ಬಹಿರಂಗಪಡಿಸಬೇಕಿದೆ.

ಗೋಲ್ಡ್ ಸುರೇಶ್ ದೊಡ್ಮನೆಯಿಂದ ಹೊರ ಹೋಗಲು ಅಸಲಿ ಕಾರಣ ಹೊರಬಿತ್ತು; ವಿವರಿಸಿದ ಐಶ್ವರ್ಯಾ
ಸುರೇಶ್-ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on:Dec 17, 2024 | 7:27 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸಾಕಷ್ಟು ಅಚ್ಚರಿಯ ಎಲಿಮಿನೇಷನ್​ಗಳು ನಡೆದು ಹೋಗಿವೆ. ಶಿಶಿರ್ ಅವರು ಹೊರ ಹೋಗುತ್ತಿದ್ದಂತೆ ಗೋಲ್ಡ್ ಸುರೇಶ್ ಕೂಡ ದೊಡ್ಮನೆಯಿಂದ ಹೊರ ಹೋಗಬೇಕಾದ ಪರಿಸ್ಥಿತಿ ಬಂದಿದೆ. ‘ಮನೆಯಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣ ಆಗಿದೆ’ ಎಂದು ದೊಡ್ಮನೆಯಲ್ಲಿ ಘೋಷಣೆ ಮಾಡಲಾಯಿತು. ಆ ಬಳಿಕ ಸುರೇಶ್ ಹೊರ ಹೋದರು. ಅವರು ಹೊರ ಹೋಗಿದ್ದು ಏಕೆ ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ಚರ್ಚೆಗಳು ನಡೆದಿವೆ.

ಗೋಲ್ಡ್ ಸುರೇಶ್ ಎಲಿಮಿನೇಟ್ ಆಗಲು ಕಾರಣ ಏನು ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡಿವೆ. ಆರಂಭದಲ್ಲಿ ಗೋಲ್ಡ್ ಸುರೇಶ್ ತಂದೆ ಮೃತಪಟ್ಟರು ಎಂದು ವರದಿ ಆಯಿತು. ಆದರೆ, ಈ ಬಗ್ಗೆ ಅವರ ತಂದೆಯೇ ಸ್ಪಷ್ಟನೆ ಕೊಟ್ಟರು. ‘ನನಗೆ ಏನೂ ಆಗಿಲ್ಲ. ನಾನು ಆರೋಗ್ಯವಾಗಿ ಇದ್ದೇನೆ’ ಎಂದು ಹೇಳಿದ್ದರು. ಜೊತೆಗೆ ಊರಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಹೇಳಿಕೊಂಡಿದ್ದರು.

ಹಾಗಾದರೆ, ಏನು ಆ ತುರ್ತುಪರಿಸ್ಥಿತಿ ಎಂಬ ಬಗ್ಗೆ ಚರ್ಚೆಗಳು ಆಗಿವೆ. ಬಿಗ್ ಬಾಸ್ ಆದೇಶ ನೀಡುವಾಗ ‘ಹೆಚ್ಚು ಚಿಂತಿಸುವ ಅಗತ್ಯ ಇಲ್ಲ’ ಎಂದು ಹೇಳಿದ್ದಾರೆ. ಇದೇ ವಿಚಾರ ಇಟ್ಟುಕೊಂಡು ಐಶ್ವರ್ಯಾ ಅವರು ಚರ್ಚೆ ಮಾಡಿದ್ದಾರೆ. ಸುರೇಶ್ ಅವರು ಎಲಿಮಿನೇಟ್ ಆಗಲು ನಿಜವಾದ ಕಾರಣ ಏನು ಎಂಬುದನ್ನು ಚರ್ಚಿಸಿದ್ದಾರೆ.

‘ಬಹುಶಃ ಬಿಸ್ನೆಸ್​ನಲ್ಲಿ ಏನೋ ತೊಂದರೆ ಆಗಿರಬಹುದು ಎಂದು ನನಗೆ ಅನಿಸುತ್ತಿದೆ. ಕುಟುಂಬದಲ್ಲಿ ತೊಂದರೆ ಆಗಿದ್ದರೆ ಹೆದರುವ ಅಗತ್ಯ ಇಲ್ಲ ಎಂದೆಲ್ಲ ಹೇಳುತ್ತಿರಲಿಲ್ಲ. ಉದ್ಯಮದಲ್ಲಿಯೇ ಏನೋ ತೊಂದರೆ ಆಗಿದೆ. ಅವರು ಏನನ್ನೂ ಓಪನ್ ಆಗಿ ಹೇಳಿಕೊಂಡವರಲ್ಲ. ಇತ್ತೀಚೆಗೆ ಅವರು ಸಾಕಷ್ಟು ಸೈಲೆಂಟ್ ಆಗಿದ್ದರು’ ಎಂದು ಐಶ್ವರ್ಯಾ ಹೇಳಿದ್ದಾರೆ. ಈ ವಿಚಾರ ನಿಜ ಇರಬಹುದು ಎಂದು ಅನೇಕರಿಗೆ ಅನಿಸಿದೆ.

ಇದನ್ನೂ ಓದಿ: ಶಿಶಿರ್ ಎಲಿಮಿನೇಷನ್​ಗೆ ಕಾರಣ ಆಗಿದ್ದು ಐಶ್ವರ್ಯಾ? ಮೂಡಿದೆ ಅನುಮಾನ

ಸುರೇಶ್ ಅವರು ಸಾಲ ಮಾಡಿಕೊಂಡಿದ್ದರು ಎಂದು ಕೆಲವು ಕಡೆಗಳಲ್ಲಿ ವರದಿ ಆಗಿದೆ. ಆದರೆ, ನಿಜ ವಿಚಾರ ಏನು ಏಂಬುದನ್ನು ಸುರೇಶ್ ಅವರೇ ಮಾಧ್ಯಮಗಳ ಎದುರು ಬಂದು ಹೇಳಿಕೊಳ್ಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:27 am, Tue, 17 December 24

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ