AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಡತೆ ಸರಿ ಇಲ್ಲ’: ಮುಖಕ್ಕೆ ಹೊಡೆದಂತೆ ಹೇಳಿದ್ದಕ್ಕೆ ಐಶ್ವರ್ಯಾ ಕಣ್ಣೀರ ಧಾರೆ

ಬೇರೆ ಎಲ್ಲರಿಗಿಂತಲೂ ಐಶ್ವರ್ಯಾ ಅವರು ಭಿನ್ನವಾಗಿದ್ದಾರೆ. ಆದರೆ ಅವರ ನಡೆತೆ ಬಗ್ಗೆ ಗೋಲ್ಡ್ ಸುರೇಶ್ ಅವರು ಗಂಭೀರವಾದ ಹೇಳಿಕೆಗಳನ್ನು ನೀಡಿದ್ದಾರೆ. ಈ ಮಾತುಗಳಿಂದ ಐಶ್ವರ್ಯಾ ಅವರಿಗೆ ತುಂಬ ನೋವಾಗಿದೆ. ಹಾಗಾಗಿ ಅವರು ಬಿಗ್​ ಬಾಸ್​ ಮನೆಯಲ್ಲಿ ಅತ್ತಿದ್ದಾರೆ. ಅಷ್ಟಕ್ಕೂ ಇದಕ್ಕೆಲ್ಲ ಕಾರಣ ಆಗಿದ್ದೇನು ಎಂಬ ಬಗ್ಗೆ ಇಲ್ಲಿದೆ ವಿವರ..

‘ನಡತೆ ಸರಿ ಇಲ್ಲ’: ಮುಖಕ್ಕೆ ಹೊಡೆದಂತೆ ಹೇಳಿದ್ದಕ್ಕೆ ಐಶ್ವರ್ಯಾ ಕಣ್ಣೀರ ಧಾರೆ
ಗೋಲ್ಡ್ ಸುರೇಶ್​, ಐಶ್ವರ್ಯಾ
ಮದನ್​ ಕುಮಾರ್​
|

Updated on: Oct 03, 2024 | 11:01 PM

Share

ಉತ್ತರ ಕರ್ನಾಟಕದಿಂದ ಬಂದಿರುವ ಗೋಲ್ಡ್ ಸುರೇಶ್​ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ನೇರವಾದ ಮಾತುಗಳಿಂದ ಹೈಲೈಟ್​ ಆಗಿದ್ದಾರೆ. ಅಕ್ಟೋಬರ್​ 3ರ ಸಂಚಿಕೆಯಲ್ಲಿ ಗೋಲ್ಡ್​ ಸುರೇಶ್​ ಮತ್ತು ಐಶ್ವರ್ಯಾ ನಡುವೆ ಮಾತಿನ ಚಕಮಕಿ ನಡೆದಿದೆ. ‘ನಿಮ್ಮ ನಡತೆ ನನಗೆ ಇಷ್ಟ ಆಗಿಲ್ಲ’ ಎಂದು ಐಶ್ವರ್ಯಾಗೆ ಮುಖಕ್ಕೆ ಹೊಡೆದಂತೆ ಸುರೇಶ್​ ಹೇಳಿದ್ದಾರೆ. ಇದರಿಂದ ಐಶ್ವರ್ಯಾ ಅವರಿಗೆ ನೋವಾಗಿದೆ. ಕೂಡಲೇ ಅವರು ಕಣ್ಣೀರು ಸುರಿಸಿದ್ದಾರೆ. ‘ನನಗೆ ಈವರೆಗೂ ಯಾರೂ ಈ ರೀತಿ ಹೇಳಿರಲಿಲ್ಲ’ ಎಂದು ಐಶ್ವರ್ಯಾ ಗಳಗಳನೆ ಅತ್ತಿದ್ದಾರೆ.

‘ಮೊದಲ ದಿನ ನಾನು ನಿಮ್ಮನ್ನು ಅಣ್ಣನ ಥರ ಅಂದುಕೊಂಡಿದ್ದೆ. ಈಗಲೂ ಅಂದುಕೊಂಡಿದ್ದೇನೆ. ಆದರೆ ನೀವು ಕನೆಕ್ಟ್ ಆಗಿಲ್ಲ’ ಎಂದು ಐಶ್ವರ್ಯಾ ಹೇಳಿದರು. ಅದಕ್ಕೆ ಉತ್ತರಿಸಿದ ಸುರೇಶ್​ ಅವರು, ‘ಹೌದು ನಾನು ನಿಮ್ಮ ಜೊತೆ ಕನೆಕ್ಟ್​ ಆಗಿಲ್ಲ. ನಿಮ್ಮ ನಡತೆ ಸರಿ ಇಲ್ಲ’ ಎಂದು ಹೇಳಿದರು. ಈ ಮಾತುಗಳಿಂದ ಐಶ್ವರ್ಯಾ ಸಿಕ್ಕಾಪಟ್ಟೆ ನೊಂದುಕೊಂಡರು. ಅವರನ್ನು ಸಮಾಧಾನ ಮಾಡಲು ಗೌತಮಿ, ಹಂಸಾ, ಧನರಾಜ್ ಅವರು ಪ್ರಯತ್ನಿಸಿದರು.

ಬಿಗ್​ ಬಾಸ್​ನಲ್ಲಿ ದಿನಕ್ಕೊಂದು ಡ್ರಾಮಾ ನಡೆಯುತ್ತದೆ. ಇಂದು ಜಗಳ ಆಡಿಕೊಂಡವರು ನಾಳೆ ಒಂದಾಗುತ್ತಾರೆ. ಇಂದು ಪ್ರಾಣ ಸ್ನೇಹಿತರ ರೀತಿ ಇದ್ದವರು ನಾಳೆ ಕಿತ್ತಾಡುತ್ತಾರೆ. ಟಾಸ್ಕ್​ ವಿಚಾರ ಬಂದಾಗ, ನಾಮಿನೇಷನ್​ ವಿಚಾರ ಬಂದಾಗ ಯಾವ ಸ್ನೇಹದ ಮುಲಾಜು ಕೂಡ ಇರುವುದಿಲ್ಲ. ಹಾಗಾಗಿ ದೊಡ್ಮನೆಯೊಳಗೆ ಕಾಣಿಸುವ ಎಮೋಷನಲ್​ ಡ್ರಾಮಾವನ್ನು ವೀಕ್ಷಕರು ಗಂಭೀರವಾಗಿ ಪರಿಗಣಿಸುವಂತಿಲ್ಲ.

ಇದನ್ನೂ ಓದಿ: ಐಶ್ವರ್ಯಾ, ಧರ್ಮ, ಅನುಷಾ: ಬಿಗ್​ ಬಾಸ್​ ಮನೆಯಲ್ಲಿ ಶುರುವಾಯ್ತಾ ತ್ರಿಕೋನ ಪ್ರೇಮ?

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮದಲ್ಲಿ ಸ್ವರ್ಗ ಮತ್ತು ನರಕ ಎಂಬ ಕಾನ್ಸೆಪ್ಟ್​ ಪರಿಚಯಿಸಲಾಗಿದೆ. 7 ಸ್ಪರ್ಧಿಗಳು ನರಕದಲ್ಲಿ ಇದ್ದಾರೆ. ಇನ್ನುಳಿದ 10 ಸ್ಪರ್ಧಿಗಳಿಗೆ ಸ್ವರ್ಗದಲ್ಲಿ ಜಾಗ ಸಿಕ್ಕಿದೆ. ಸ್ವರ್ಗವಾಸಿಗಳಿಗೆ ಕೆಲವು ಸವಲತ್ತುಗಳು ಇವೆ. ಆದರೆ ನರಕದ ಮಂದಿಗೆ ಕೇವಲ ಬೇಸಿಕ್ ಸೌಕರ್ಯಗಳನ್ನು ನೀಡಲಾಗಿದೆ. ನರಕದಿಂದ ಸ್ವರ್ಗಕ್ಕೆ ಬರಲು 7 ಮಂದಿ ನರಕವಾಸಿಗಳು ಪ್ರಯತ್ನಿಸುತ್ತಿದ್ದಾರೆ. ಮಾನಸಾ, ಶಿಶಿರ್, ಅನುಷಾ, ರಂಜಿತ್​, ಚೈತ್ರಾ ಕುಂದಾಪುರ, ಗೋಲ್ಡ್​ ಸುರೇಶ್, ಮೋಕ್ಷಿತಾ ಪೈ ಅವರು ನರಕದಲ್ಲಿ ಇದ್ದಾರೆ. ‘ನಾನು ಇದಕ್ಕಿಂತ ದೊಡ್ಡ ನರಕ ನೋಡಿದ್ದೇನೆ’ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ನರಕದಲ್ಲಿ ಇರಲು ಕಷ್ಟವಾಗುತ್ತಿದೆ ಎಂದು ಅನುಷಾ ರೈ ಅತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್